ಮೋದಿ ಫೆ.10ರಂದು ಹುಬ್ಬಳ್ಳಿಗೆ ಬರಲಿದ್ದು, ಅಲ್ಲಿ ನಾಲ್ಕು ಜಿಲ್ಲೆಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. 19ರಂದು ಮತ್ತೆ ರಾಜ್ಯಕ್ಕೆ ಬರಲಿದ್ದು, ಸಮಾವೇಶದ ಸ್ಥಳ ನಿಗದಿಯಾಗಿಲ್ಲ. 27ರಂದು ಮತ್ತೊಂದು ಸಮಾವೇಶದಲ್ಲಿ ಪಾಲ್ಗೊಳ್ಳಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಈ ಕಾರ್ಯಕ್ರಮಗಳ ಉಸ್ತುವಾರಿಯನ್ನು ಶಾಸಕ ಆರ್.ಅಶೋಕ ಅವರಿಗೆ ವಹಿಸಲಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.