<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪಕ್ಷ ಕೈಗೊಳ್ಳುವ ಪ್ರಚಾರ ಕಾರ್ಯಕ್ರಮಗಳನ್ನು ಅಡ್ಡಿಪಡಿಸಲು ಹಾಗೂ ಮತದಾರರನ್ನು ಹೆದರಿಸುವ ಉದ್ದೇಶದಿಂದಾಗಿ ಬಿಜೆಪಿ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಆರೋಪಿಸಿದ್ದಾರೆ. </p><p>ಇಲ್ಲಿ ನಡೆದ ಪ್ರತಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೆಹಲಿಯ ಪೊಲೀಸರು ಬಿಜೆಪಿ ಜತೆಗಿದ್ದಾರೆ. ಜನರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿಲ್ಲ. ಎಎಪಿ ನಡೆಸುವ ರ್ಯಾಲಿಗಳಿಗೆ ಅಡ್ಡಿಪಡಿಸುವಂತೆ ಗೃಹ ಸಚಿವಾಲಯದಿಂದ ನೇರ ಸೂಚನೆಗಳು ಬರುತ್ತೇವೆ ಎಂದು ದೂರಿದ್ದಾರೆ.</p>.ಟರ್ಕಿಯಲ್ಲಿ ಅಗ್ನಿ ಅವಘಡ | ಮೃತರ ಸಂಖ್ಯೆ 76ಕ್ಕೇರಿಕೆ: ಮಾಲೀಕ ಸೇರಿ 9 ಮಂದಿ ಬಂಧನ.ನಟ ಸೈಫ್ ಕುಟುಂಬದ ₹15,000 ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?. <p>'ದೆಹಲಿಯಲ್ಲಿ ಬಿಜೆಪಿ ಐತಿಹಾಸಿಕ ಸೋಲು ಅನುಭವಿಸುತ್ತದೆ. ಇದೇ ಕಾರಣದಿಂದಾಗಿ ಪೊಲೀಸರ ಬೆಂಬಲದೊಂದಿಗೆ ಗೂಂಡಾಗಿರಿ ಪ್ರದರ್ಶಿಸುತ್ತಿದೆ. ಆದರೆ ಈ ಬಾರಿ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ' ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.</p><p>'ಬಿಜೆಪಿ ನಡೆಸುವ ಚುನಾವಣಾ ಪ್ರಚಾರಗಳಿಗೆ ಪೊಲೀಸರು ಅನುವು ಮಾಡಿಕೊಡುತ್ತಾರೆ. ಆದರೆ ಎಎಪಿ ಕೈಗೊಳ್ಳುವ ಪ್ರಚಾರ ಕಾರ್ಯಕ್ರಮಗಳಿಗೆ ಪೊಲೀಸರು ಅಡ್ಡಿಪಡಿಸುತ್ತಾರೆ. ಕಲ್ಕಾಜಿ ಕ್ಷೇತ್ರ ಸೇರಿದಂತೆ ಹಲವೆಡೆ ಎಎಪಿ ಕಾರ್ಯಕರ್ತರನ್ನು ಬಿಜೆಪಿಗೆ ಸೇರುವಂತೆ ಆ ಪಕ್ಷದವರು ಬೆದರಿಕೆ ಹಾಕುತ್ತಿದ್ದಾರೆ' ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ.</p><p>70 ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭಾ ಚುನಾವಣೆಯು ಫೆಬ್ರುವರಿ 5ರಂದು ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಹೊರಬೀಳಲಿದೆ.</p> .Bidar SBI ATM Robbery | ನನಗೆ ಪುನರ್ಜನ್ಮ ಸಿಕ್ಕಿದೆ: ಗಾಯಾಳು ಶಿವಕುಮಾರ.ಜನ್ಮದತ್ತ ಪೌರತ್ವ ರದ್ದು: ಟ್ರಂಪ್ ನಿರ್ಧಾರಕ್ಕೆ ಭಾರತ ಮೂಲದ ಸಂಸದರ ವಿರೋಧ.ಅರಬೈಲ್ ಬಳಿ ಲಾರಿ ಪಲ್ಟಿ: ಸವಣೂರಿನ 10 ಜನರಿಗೆ ಹುಬ್ಬಳ್ಳಿ KIMSನಲ್ಲಿ ಚಿಕಿತ್ಸೆ.ಹುಟ್ಟಿನಿಂದ ಸಿಗುವ ಪೌರತ್ವ ರದ್ದು ಮಾಡಿದ ಟ್ರಂಪ್: ಭಾರತೀಯ ವಲಸಿಗರಿಗೆ ಸಮಸ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪಕ್ಷ ಕೈಗೊಳ್ಳುವ ಪ್ರಚಾರ ಕಾರ್ಯಕ್ರಮಗಳನ್ನು ಅಡ್ಡಿಪಡಿಸಲು ಹಾಗೂ ಮತದಾರರನ್ನು ಹೆದರಿಸುವ ಉದ್ದೇಶದಿಂದಾಗಿ ಬಿಜೆಪಿ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಆರೋಪಿಸಿದ್ದಾರೆ. </p><p>ಇಲ್ಲಿ ನಡೆದ ಪ್ರತಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೆಹಲಿಯ ಪೊಲೀಸರು ಬಿಜೆಪಿ ಜತೆಗಿದ್ದಾರೆ. ಜನರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿಲ್ಲ. ಎಎಪಿ ನಡೆಸುವ ರ್ಯಾಲಿಗಳಿಗೆ ಅಡ್ಡಿಪಡಿಸುವಂತೆ ಗೃಹ ಸಚಿವಾಲಯದಿಂದ ನೇರ ಸೂಚನೆಗಳು ಬರುತ್ತೇವೆ ಎಂದು ದೂರಿದ್ದಾರೆ.</p>.ಟರ್ಕಿಯಲ್ಲಿ ಅಗ್ನಿ ಅವಘಡ | ಮೃತರ ಸಂಖ್ಯೆ 76ಕ್ಕೇರಿಕೆ: ಮಾಲೀಕ ಸೇರಿ 9 ಮಂದಿ ಬಂಧನ.ನಟ ಸೈಫ್ ಕುಟುಂಬದ ₹15,000 ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?. <p>'ದೆಹಲಿಯಲ್ಲಿ ಬಿಜೆಪಿ ಐತಿಹಾಸಿಕ ಸೋಲು ಅನುಭವಿಸುತ್ತದೆ. ಇದೇ ಕಾರಣದಿಂದಾಗಿ ಪೊಲೀಸರ ಬೆಂಬಲದೊಂದಿಗೆ ಗೂಂಡಾಗಿರಿ ಪ್ರದರ್ಶಿಸುತ್ತಿದೆ. ಆದರೆ ಈ ಬಾರಿ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ' ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.</p><p>'ಬಿಜೆಪಿ ನಡೆಸುವ ಚುನಾವಣಾ ಪ್ರಚಾರಗಳಿಗೆ ಪೊಲೀಸರು ಅನುವು ಮಾಡಿಕೊಡುತ್ತಾರೆ. ಆದರೆ ಎಎಪಿ ಕೈಗೊಳ್ಳುವ ಪ್ರಚಾರ ಕಾರ್ಯಕ್ರಮಗಳಿಗೆ ಪೊಲೀಸರು ಅಡ್ಡಿಪಡಿಸುತ್ತಾರೆ. ಕಲ್ಕಾಜಿ ಕ್ಷೇತ್ರ ಸೇರಿದಂತೆ ಹಲವೆಡೆ ಎಎಪಿ ಕಾರ್ಯಕರ್ತರನ್ನು ಬಿಜೆಪಿಗೆ ಸೇರುವಂತೆ ಆ ಪಕ್ಷದವರು ಬೆದರಿಕೆ ಹಾಕುತ್ತಿದ್ದಾರೆ' ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ.</p><p>70 ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭಾ ಚುನಾವಣೆಯು ಫೆಬ್ರುವರಿ 5ರಂದು ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಹೊರಬೀಳಲಿದೆ.</p> .Bidar SBI ATM Robbery | ನನಗೆ ಪುನರ್ಜನ್ಮ ಸಿಕ್ಕಿದೆ: ಗಾಯಾಳು ಶಿವಕುಮಾರ.ಜನ್ಮದತ್ತ ಪೌರತ್ವ ರದ್ದು: ಟ್ರಂಪ್ ನಿರ್ಧಾರಕ್ಕೆ ಭಾರತ ಮೂಲದ ಸಂಸದರ ವಿರೋಧ.ಅರಬೈಲ್ ಬಳಿ ಲಾರಿ ಪಲ್ಟಿ: ಸವಣೂರಿನ 10 ಜನರಿಗೆ ಹುಬ್ಬಳ್ಳಿ KIMSನಲ್ಲಿ ಚಿಕಿತ್ಸೆ.ಹುಟ್ಟಿನಿಂದ ಸಿಗುವ ಪೌರತ್ವ ರದ್ದು ಮಾಡಿದ ಟ್ರಂಪ್: ಭಾರತೀಯ ವಲಸಿಗರಿಗೆ ಸಮಸ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>