<p><strong>ಅಯೋಧ್ಯೆ:</strong> ಕಾಲೇಜಿಗೆ ಪ್ರವೇಶ ಪಡೆಯಲು ನಕಲಿ ಅಂಕಪಟ್ಟಿ ನೀಡಿದ್ದ 28 ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಯೋಧ್ಯೆಯ ಗೋಸಾಯ್ಗಂಜ್ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ತಿವಾರಿಗೆ ಸೋಮವಾರ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಾ ಸಿಂಗ್ ತೀರ್ಪು ನೀಡಿದರು. ತೀರ್ಪು ನೀಡುವ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ತಿವಾರಿ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ಜೈಲಿಗೆ ರವಾನಿಸಿದರು.</p>.<p>ಈ ಪ್ರಕರಣದಲ್ಲಿ ನ್ಯಾಯಾಲಯವು ಶಾಸಕ ತಿವಾರಿಗೆ ₹8,000 ರೂಪಾಯಿ ದಂಡವನ್ನೂ ವಿಧಿಸಿದೆ.</p>.<p>ಇಂದ್ರ ಪ್ರತಾಪ್ ತಿವಾರಿ ಅಲಿಯಾಸ್ ಖಬ್ಬು ತಿವಾರಿ ಅಯೋಧ್ಯೆಯ ಗೋಸಾಯ್ಗಂಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ.<br /><br />1992 ರಲ್ಲಿ ತಿವಾರಿ ವಿರುದ್ಧ ಅಯೋಧ್ಯೆಯ ಸಾಕೇತ್ ಪದವಿ ಕಾಲೇಜಿನ ಅಂದಿನ ಪ್ರಾಂಶುಪಾಲ ಯದುವಂಶ ರಾಮ್ ತ್ರಿಪಾಠಿ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.</p>.<p>ಎರಡನೇ ವರ್ಷದ ಪದವಿಯಲ್ಲಿ ಅನುತ್ತೀರ್ಣಗೊಂಡಿದ್ದ ತಿವಾರಿ 1990 ರಲ್ಲಿ ನಕಲಿ ಅಂಕಪಟ್ಟಿ ಸಲ್ಲಿಸಿ ಮುಂದಿನ ತರಗತಿಗೆ ಪ್ರವೇಶ ಪಡೆದಿದ್ದರು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿತ್ತು.</p>.<p>ಪ್ರಕರಣ ದಾಖಲಾಗಿ 13 ವರ್ಷಗಳ ನಂತರ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಪ್ರಕರಣದಲ್ಲಿ ಹಲವು ಮೂಲ ದಾಖಲೆಗಳು ಕಣ್ಮರೆಯಾಗಿದ್ದವು. ದ್ವಿತೀಯ ಪ್ರತಿಗಳ ಆಧಾರದಲ್ಲಿ ವಿಚಾರಣೆ ನಡೆದಿತ್ತು. ದೀರ್ಘ ಕಾಲದ ವಿಚಾರಣೆಯ ಈ ಅವಧಿಯಲ್ಲೇ ದೂರುದಾರ ತ್ರಿಪಾಠಿ ಅವರು ಮೃತಪಟ್ಟಿದ್ದರು.</p>.<p>ಆಗಿನ ಸಾಕೇತ್ ಕಾಲೇಜಿನ ಡೀನ್ ಆಗಿದ್ದ ಮಹೇಂದ್ರ ಕುಮಾರ್ ಅಗರವಾಲ್ ಮತ್ತು ಇತರ ಸಾಕ್ಷಿಗಳು ಶಾಸಕ ತಿವಾರಿ ವಿರುದ್ಧ ಸಾಕ್ಷಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ:</strong> ಕಾಲೇಜಿಗೆ ಪ್ರವೇಶ ಪಡೆಯಲು ನಕಲಿ ಅಂಕಪಟ್ಟಿ ನೀಡಿದ್ದ 28 ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಯೋಧ್ಯೆಯ ಗೋಸಾಯ್ಗಂಜ್ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ತಿವಾರಿಗೆ ಸೋಮವಾರ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಾ ಸಿಂಗ್ ತೀರ್ಪು ನೀಡಿದರು. ತೀರ್ಪು ನೀಡುವ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ತಿವಾರಿ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ಜೈಲಿಗೆ ರವಾನಿಸಿದರು.</p>.<p>ಈ ಪ್ರಕರಣದಲ್ಲಿ ನ್ಯಾಯಾಲಯವು ಶಾಸಕ ತಿವಾರಿಗೆ ₹8,000 ರೂಪಾಯಿ ದಂಡವನ್ನೂ ವಿಧಿಸಿದೆ.</p>.<p>ಇಂದ್ರ ಪ್ರತಾಪ್ ತಿವಾರಿ ಅಲಿಯಾಸ್ ಖಬ್ಬು ತಿವಾರಿ ಅಯೋಧ್ಯೆಯ ಗೋಸಾಯ್ಗಂಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ.<br /><br />1992 ರಲ್ಲಿ ತಿವಾರಿ ವಿರುದ್ಧ ಅಯೋಧ್ಯೆಯ ಸಾಕೇತ್ ಪದವಿ ಕಾಲೇಜಿನ ಅಂದಿನ ಪ್ರಾಂಶುಪಾಲ ಯದುವಂಶ ರಾಮ್ ತ್ರಿಪಾಠಿ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.</p>.<p>ಎರಡನೇ ವರ್ಷದ ಪದವಿಯಲ್ಲಿ ಅನುತ್ತೀರ್ಣಗೊಂಡಿದ್ದ ತಿವಾರಿ 1990 ರಲ್ಲಿ ನಕಲಿ ಅಂಕಪಟ್ಟಿ ಸಲ್ಲಿಸಿ ಮುಂದಿನ ತರಗತಿಗೆ ಪ್ರವೇಶ ಪಡೆದಿದ್ದರು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿತ್ತು.</p>.<p>ಪ್ರಕರಣ ದಾಖಲಾಗಿ 13 ವರ್ಷಗಳ ನಂತರ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಪ್ರಕರಣದಲ್ಲಿ ಹಲವು ಮೂಲ ದಾಖಲೆಗಳು ಕಣ್ಮರೆಯಾಗಿದ್ದವು. ದ್ವಿತೀಯ ಪ್ರತಿಗಳ ಆಧಾರದಲ್ಲಿ ವಿಚಾರಣೆ ನಡೆದಿತ್ತು. ದೀರ್ಘ ಕಾಲದ ವಿಚಾರಣೆಯ ಈ ಅವಧಿಯಲ್ಲೇ ದೂರುದಾರ ತ್ರಿಪಾಠಿ ಅವರು ಮೃತಪಟ್ಟಿದ್ದರು.</p>.<p>ಆಗಿನ ಸಾಕೇತ್ ಕಾಲೇಜಿನ ಡೀನ್ ಆಗಿದ್ದ ಮಹೇಂದ್ರ ಕುಮಾರ್ ಅಗರವಾಲ್ ಮತ್ತು ಇತರ ಸಾಕ್ಷಿಗಳು ಶಾಸಕ ತಿವಾರಿ ವಿರುದ್ಧ ಸಾಕ್ಷಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>