<p class="title"><strong>ಪಟ್ನಾ:</strong> ಅನುಚಿತ ವರ್ತನೆ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಹಾರ ಬಿಜೆಪಿ ಶಾಸಕ ಲಖೇಂದ್ರ ರೌಷಣ್ ಅವರನ್ನು ವಿಧಾನಸಭಾ ಕಲಾಪದಿಂದ ಎರಡು ದಿನ ಅಮಾನತುಗಳಿಸಲಾಗಿದೆ.</p>.<p class="title">ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರ ನಿರ್ಧಾರವನ್ನು ಖಂಡಿಸಿ ಬಿಜೆಪಿ ಶಾಸಕರು ಗದ್ದಲ ಎಬ್ಬಿಸಿ ಕಲಾಪದಿಂದ ಹೊರನಡೆದರು. ಆದಾಗ್ಯೂ ಸ್ಪೀಕರ್ ನಿರ್ಧಾರವನ್ನು ಸರ್ಕಾರ ಪ್ರಶಂಸಿಸಿತು.</p>.<p>ಚೌಧರಿ ಅವರು ಅಮಾನತು ಮಾಡಿ ಆದೇಶಿಸಿದ ನಂತರ ಲಖೇಂದ್ರ ರೌಷಣ್ ಅವರು ಮಾತನಾಡಿ, ‘ಮೈಕ್ರೋಫೋನ್ ಕಿತ್ತು ಬಿಸಾಡಿಲ್ಲ’ ಎಂದು ವಾದ ಮಾಡಿದರು.</p>.<p>‘ಕಲಾಪದಲ್ಲಿ ಭಾಗಿಯಾಗಿದ್ದೆ. ಪ್ರಶ್ನೋತ್ತರ ಅವಧಿಯಲ್ಲಿ ನನ್ನ ಸರದಿ ಬಂದಾಗ ಮೈಕ್ರೊಫೋನ್ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಸರಿಪಡಿಸಲು ಪ್ರಯತ್ನಿಸಿದೆ. ಆಗ ಅದು ಕಿತ್ತು ಬಂತು’ ಎಂದು ಹೇಳಿದರು.</p>.<p>ಸತ್ಯ ದೇವ್ ರಾಮ್ ಅವರು ನನ್ನ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿದ್ದಾರೆ. ದುರ್ನಡತೆ ಆರೋಪದಲ್ಲಿ ನನ್ನನ್ನು ತಪ್ಪಿತಸ್ಥನಾಗಿ ಮಾಡಲಾಗಿದೆ. ದಲಿತ ಶಾಸಕನಿಗೆ ಈ ರೀತಿಯಾಗಿ ಕಿರುಕುಳ ನೀಡಬಾರದು ಎಂದು ಹೇಳಿದರು.</p>.<p>ಈ ನಡುವೆ ಸದನದಲ್ಲಿ ಕೆಲ ಕಾಲ ಗದ್ದಲ ಉಂಟಾಗಿ, ಬಿಜೆಪಿ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪಟ್ನಾ:</strong> ಅನುಚಿತ ವರ್ತನೆ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಹಾರ ಬಿಜೆಪಿ ಶಾಸಕ ಲಖೇಂದ್ರ ರೌಷಣ್ ಅವರನ್ನು ವಿಧಾನಸಭಾ ಕಲಾಪದಿಂದ ಎರಡು ದಿನ ಅಮಾನತುಗಳಿಸಲಾಗಿದೆ.</p>.<p class="title">ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರ ನಿರ್ಧಾರವನ್ನು ಖಂಡಿಸಿ ಬಿಜೆಪಿ ಶಾಸಕರು ಗದ್ದಲ ಎಬ್ಬಿಸಿ ಕಲಾಪದಿಂದ ಹೊರನಡೆದರು. ಆದಾಗ್ಯೂ ಸ್ಪೀಕರ್ ನಿರ್ಧಾರವನ್ನು ಸರ್ಕಾರ ಪ್ರಶಂಸಿಸಿತು.</p>.<p>ಚೌಧರಿ ಅವರು ಅಮಾನತು ಮಾಡಿ ಆದೇಶಿಸಿದ ನಂತರ ಲಖೇಂದ್ರ ರೌಷಣ್ ಅವರು ಮಾತನಾಡಿ, ‘ಮೈಕ್ರೋಫೋನ್ ಕಿತ್ತು ಬಿಸಾಡಿಲ್ಲ’ ಎಂದು ವಾದ ಮಾಡಿದರು.</p>.<p>‘ಕಲಾಪದಲ್ಲಿ ಭಾಗಿಯಾಗಿದ್ದೆ. ಪ್ರಶ್ನೋತ್ತರ ಅವಧಿಯಲ್ಲಿ ನನ್ನ ಸರದಿ ಬಂದಾಗ ಮೈಕ್ರೊಫೋನ್ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಸರಿಪಡಿಸಲು ಪ್ರಯತ್ನಿಸಿದೆ. ಆಗ ಅದು ಕಿತ್ತು ಬಂತು’ ಎಂದು ಹೇಳಿದರು.</p>.<p>ಸತ್ಯ ದೇವ್ ರಾಮ್ ಅವರು ನನ್ನ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿದ್ದಾರೆ. ದುರ್ನಡತೆ ಆರೋಪದಲ್ಲಿ ನನ್ನನ್ನು ತಪ್ಪಿತಸ್ಥನಾಗಿ ಮಾಡಲಾಗಿದೆ. ದಲಿತ ಶಾಸಕನಿಗೆ ಈ ರೀತಿಯಾಗಿ ಕಿರುಕುಳ ನೀಡಬಾರದು ಎಂದು ಹೇಳಿದರು.</p>.<p>ಈ ನಡುವೆ ಸದನದಲ್ಲಿ ಕೆಲ ಕಾಲ ಗದ್ದಲ ಉಂಟಾಗಿ, ಬಿಜೆಪಿ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>