<p><strong>ನವದೆಹಲಿ</strong>: ಲೋಕಸಭಾ ಚುನಾವಣೆಯ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಯಾವುದೇ ಜಾಹೀರಾತು ಪ್ರಕಟಿಸದಂತೆ ಏಕಸದಸ್ಯ ಪೀಠವು ನೀಡಿದ್ದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಕಲ್ಕತ್ತಾ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶುಕ್ರವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. </p>.<p>ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರ ರಜಾಕಾಲದ ಪೀಠದ ಮುಂದೆ ಈ ವಿಚಾರವನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಲಾಗಿದೆ. ಅರ್ಜಿಯನ್ನು ಸೋಮವಾರ ವಿಚಾರಣೆಗೆ ಪರಿಗಣಿಸುವಂತೆ ವಕೀಲ ಸೌರಭ್ ಮಿಶ್ರಾ ಮನವಿ ಮಾಡಿದರು. ಅದರ ಬಗ್ಗೆ ಪರಿಶೀಲಿಸುವುದಾಗಿ ಪೀಠವು ತಿಳಿಸಿದೆ.</p>.<p>ಕಲ್ಕತ್ತಾ ಹೈಕೋರ್ಟ್ನ ಏಕಸದಸ್ಯ ಪೀಠವು ಬಿಜೆಪಿಯ ವಾದವನ್ನು ಆಲಿಸದೇ ಆದೇಶವನ್ನು ನೀಡಿದ್ದಾಗಿ ಪಕ್ಷದ ಪರ ವಕೀಲರು ವಿಭಾಗೀಯ ಪೀಠದ ಮುಂದೆ ಪ್ರಸ್ತಾಪಿಸಿದ್ದರು. ಈ ಬಗ್ಗೆ ನಿರ್ಧರಿಸಲು ಚುನಾವಣಾ ಆಯೋಗವು ಸೂಕ್ತ ವೇದಿಕೆಯಾಗಿದೆ ಎಂದು ವಾದಿಸಿದ್ದರು.</p>.<p>ಮೇ 22ರಂದು ಕಲ್ಕತ್ತಾ ಹೈಕೋರ್ಟ್ನ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು. ಯಾವುದೇ ರಾಜಕೀಯ ಪಕ್ಷದ ಮೇಲೆ ವೈಯಕ್ತಿಕ ದಾಳಿ ಸಲ್ಲದು ಎಂದು ಅಭಿಪ್ರಾಯಪಟ್ಟಿದ್ದ ವಿಭಾಗೀಯ ಪೀಠವು, ‘ಲಕ್ಷ್ಮಣ ರೇಖೆ’ಯನ್ನು ದಾಟಬಾರದು ಎಂದು ತಿಳಿಸಿತ್ತು.</p>.<p>ಬಿಜೆಪಿಯು ಜೂನ್ 4ರವರೆಗೆ ನೀತಿ ಸಂಹಿತೆ ಉಲ್ಲಂಘಿಸಿ ಯಾವುದೇ ಜಾಹೀರಾತು ಪ್ರಕಟಿಸದಂತೆ ಹೈಕೋರ್ಟ್ ಮೇ 20ರಂದು ತಡೆಯಾಜ್ಞೆ ನೀಡಿತ್ತು.</p>.<p>ತಮ್ಮ ಪಕ್ಷ ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧ ಅಸಮರ್ಥನೀಯ ಆರೋಪಗಳನ್ನು ಮಾಡಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋರ್ಟ್ ಮೆಟ್ಟಿಲೇರಿತ್ತು. ಅಂಥ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಗೆ ಕೋರ್ಟ್ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭಾ ಚುನಾವಣೆಯ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಯಾವುದೇ ಜಾಹೀರಾತು ಪ್ರಕಟಿಸದಂತೆ ಏಕಸದಸ್ಯ ಪೀಠವು ನೀಡಿದ್ದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಕಲ್ಕತ್ತಾ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶುಕ್ರವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. </p>.<p>ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರ ರಜಾಕಾಲದ ಪೀಠದ ಮುಂದೆ ಈ ವಿಚಾರವನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಲಾಗಿದೆ. ಅರ್ಜಿಯನ್ನು ಸೋಮವಾರ ವಿಚಾರಣೆಗೆ ಪರಿಗಣಿಸುವಂತೆ ವಕೀಲ ಸೌರಭ್ ಮಿಶ್ರಾ ಮನವಿ ಮಾಡಿದರು. ಅದರ ಬಗ್ಗೆ ಪರಿಶೀಲಿಸುವುದಾಗಿ ಪೀಠವು ತಿಳಿಸಿದೆ.</p>.<p>ಕಲ್ಕತ್ತಾ ಹೈಕೋರ್ಟ್ನ ಏಕಸದಸ್ಯ ಪೀಠವು ಬಿಜೆಪಿಯ ವಾದವನ್ನು ಆಲಿಸದೇ ಆದೇಶವನ್ನು ನೀಡಿದ್ದಾಗಿ ಪಕ್ಷದ ಪರ ವಕೀಲರು ವಿಭಾಗೀಯ ಪೀಠದ ಮುಂದೆ ಪ್ರಸ್ತಾಪಿಸಿದ್ದರು. ಈ ಬಗ್ಗೆ ನಿರ್ಧರಿಸಲು ಚುನಾವಣಾ ಆಯೋಗವು ಸೂಕ್ತ ವೇದಿಕೆಯಾಗಿದೆ ಎಂದು ವಾದಿಸಿದ್ದರು.</p>.<p>ಮೇ 22ರಂದು ಕಲ್ಕತ್ತಾ ಹೈಕೋರ್ಟ್ನ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು. ಯಾವುದೇ ರಾಜಕೀಯ ಪಕ್ಷದ ಮೇಲೆ ವೈಯಕ್ತಿಕ ದಾಳಿ ಸಲ್ಲದು ಎಂದು ಅಭಿಪ್ರಾಯಪಟ್ಟಿದ್ದ ವಿಭಾಗೀಯ ಪೀಠವು, ‘ಲಕ್ಷ್ಮಣ ರೇಖೆ’ಯನ್ನು ದಾಟಬಾರದು ಎಂದು ತಿಳಿಸಿತ್ತು.</p>.<p>ಬಿಜೆಪಿಯು ಜೂನ್ 4ರವರೆಗೆ ನೀತಿ ಸಂಹಿತೆ ಉಲ್ಲಂಘಿಸಿ ಯಾವುದೇ ಜಾಹೀರಾತು ಪ್ರಕಟಿಸದಂತೆ ಹೈಕೋರ್ಟ್ ಮೇ 20ರಂದು ತಡೆಯಾಜ್ಞೆ ನೀಡಿತ್ತು.</p>.<p>ತಮ್ಮ ಪಕ್ಷ ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧ ಅಸಮರ್ಥನೀಯ ಆರೋಪಗಳನ್ನು ಮಾಡಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋರ್ಟ್ ಮೆಟ್ಟಿಲೇರಿತ್ತು. ಅಂಥ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಗೆ ಕೋರ್ಟ್ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>