ಲಖನೌ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿಗಾಗಿ ಪ್ರಚಾರ ನಡೆಸಿದ್ದ ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್ ಶನಿವಾರ ಹತ್ಯೆಯಾಗಿದ್ದಾರೆ. ಪಕ್ಷದಕಾರ್ಯಕರ್ತನ ಮರಣ ವಾರ್ತೆ ಕೇಳಿ ಧಾವಿಸಿದ ಅಮೇಠಿ ಸಂಸದೆಸ್ಮತಿ ಇರಾನಿ ಸುರೇಂದ್ರ ಸಿಂಗ್ ಅವರ ಅಂತ್ಯ ಸಂಸ್ಕಾರದಲ್ಲಿಯೂ ಭಾಗಿಯಾಗಿದ್ದಾರೆ. ಸಿಂಗ್ ಅವರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ ಸ್ಮೃತಿ ಚಟ್ಟಕ್ಕೂ ಹೆಗಲು ಕೊಟ್ಟಿದ್ದಾರೆ.