<p><strong>ನವದೆಹಲಿ:</strong>ಕೇಂದ್ರದ ಮಾಜಿ ಸಚಿವ, ಬಿಜೆಪಿ ರಾಜ್ಯಸಭಾ ಸದಸ್ಯಬೀರೇಂದರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ರಾಜ್ಯಸಭೆ ಸದಸ್ಯತ್ವದ ಅವಧಿ 2022ರ ಆಗಸ್ಟ್ 1ರವರೆಗೆ ಇತ್ತು.</p>.<p>‘ಹರಿಯಾಣವನ್ನು ಪ್ರತಿನಿಧಿಸುತ್ತಿರುವ ಚೌಧರಿ ಬೀರೇಂದರ್ ಸಿಂಗ್ ಅವರು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ರಾಜ್ಯಸಭೆಯ ಸಭಾಪತಿಗಳು ಅದನ್ನು 2020ರ ಜನವರಿ 20ರಿಂದ ಅನ್ವಯವಾಗುವಂತೆ ಅಂಗೀಕರಿಸಿದ್ದಾರೆ’ ಎಂದು ರಾಜ್ಯಸಭೆಯ ಪ್ರಕಟಣೆ ತಿಳಿಸಿದೆ.</p>.<p><strong>ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಸಂದೇಶ:</strong>2019ರ ಲೋಕಸಭೆ ಚುನಾವಣೆಯಲ್ಲಿ ಬೀರೇಂದರ್ ಅವರಪುತ್ರನಿಗೆ ಹಿಸ್ಸಾರ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಕ್ಕಿತ್ತು. ಆ ಸಂದರ್ಭದಲ್ಲಿ ಅವರು ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಸಂದೇಶ ರವಾನಿಸಲು ಸಚಿವ ಸ್ಥಾನ ಹಾಗೂ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ, ರಾಜ್ಯಸಭೆ ಸದಸ್ಯತ್ವ ತ್ಯಜಿಸಲು ಆಗ ಬಿಜೆಪಿ ಹೈಕಮಾಂಡ್ ಒಪ್ಪಿರಲಿಲ್ಲ.</p>.<p>ಸುಮಾರು ನಾಲ್ಕು ದಶಕ ಕಾಂಗ್ರೆಸ್ ಪಕ್ಷದಲ್ಲಿದ್ದ ಬೀರೇಂದ್ರ, 2014ರಲ್ಲಿ ಬಿಜೆಪಿ ಸೇರಿದ್ದರು. ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅವರು ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಸಚಿವರಾಗಿದ್ದರು. 2016ರಲ್ಲಿ ಅವರನ್ನು ಉಕ್ಕು ಖಾತೆ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಕೇಂದ್ರದ ಮಾಜಿ ಸಚಿವ, ಬಿಜೆಪಿ ರಾಜ್ಯಸಭಾ ಸದಸ್ಯಬೀರೇಂದರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ರಾಜ್ಯಸಭೆ ಸದಸ್ಯತ್ವದ ಅವಧಿ 2022ರ ಆಗಸ್ಟ್ 1ರವರೆಗೆ ಇತ್ತು.</p>.<p>‘ಹರಿಯಾಣವನ್ನು ಪ್ರತಿನಿಧಿಸುತ್ತಿರುವ ಚೌಧರಿ ಬೀರೇಂದರ್ ಸಿಂಗ್ ಅವರು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ರಾಜ್ಯಸಭೆಯ ಸಭಾಪತಿಗಳು ಅದನ್ನು 2020ರ ಜನವರಿ 20ರಿಂದ ಅನ್ವಯವಾಗುವಂತೆ ಅಂಗೀಕರಿಸಿದ್ದಾರೆ’ ಎಂದು ರಾಜ್ಯಸಭೆಯ ಪ್ರಕಟಣೆ ತಿಳಿಸಿದೆ.</p>.<p><strong>ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಸಂದೇಶ:</strong>2019ರ ಲೋಕಸಭೆ ಚುನಾವಣೆಯಲ್ಲಿ ಬೀರೇಂದರ್ ಅವರಪುತ್ರನಿಗೆ ಹಿಸ್ಸಾರ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಕ್ಕಿತ್ತು. ಆ ಸಂದರ್ಭದಲ್ಲಿ ಅವರು ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಸಂದೇಶ ರವಾನಿಸಲು ಸಚಿವ ಸ್ಥಾನ ಹಾಗೂ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ, ರಾಜ್ಯಸಭೆ ಸದಸ್ಯತ್ವ ತ್ಯಜಿಸಲು ಆಗ ಬಿಜೆಪಿ ಹೈಕಮಾಂಡ್ ಒಪ್ಪಿರಲಿಲ್ಲ.</p>.<p>ಸುಮಾರು ನಾಲ್ಕು ದಶಕ ಕಾಂಗ್ರೆಸ್ ಪಕ್ಷದಲ್ಲಿದ್ದ ಬೀರೇಂದ್ರ, 2014ರಲ್ಲಿ ಬಿಜೆಪಿ ಸೇರಿದ್ದರು. ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅವರು ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಸಚಿವರಾಗಿದ್ದರು. 2016ರಲ್ಲಿ ಅವರನ್ನು ಉಕ್ಕು ಖಾತೆ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>