ಉದ್ಯಮಿ ದರ್ಶನ್ ಹೀರಾನಂದಾನಿ ಅವರ ಆಜ್ಞೆಯ ಮೇರೆಗೆ ಲಂಚಕ್ಕೆ ಪ್ರತಿಯಾಗಿ ಮೊಯಿತ್ರಾ ಅವರು ಲೋಕಸಭೆಯಲ್ಲಿ ಅದಾನಿ ಗ್ರೂಪ್ ಮತ್ತು ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ದುಬೆ ಆರೋಪಿಸಿದ ಕೆಲ ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ವಿಷಯವನ್ನು ಸಂಸತ್ನ ನೀತಿ–ನಿಯಮಗಳ ಸಮಿತಿ ಪರಿಶೀಲಿಸುತ್ತಿದೆ.