<p><strong>ನವದೆಹಲಿ</strong>: ‘ದೇಶದ ಸಂವಿಧಾನದ ಪೀಠಿಕೆಯಲ್ಲಿ ‘ಜಾತ್ಯತೀತ’, ‘ಸಮಾಜವಾದ’ ಪದಗಳ ಅಗತ್ಯವಿಲ್ಲ. ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವ ವಿರೋಧಿ ನೀತಿ ವಿಧಾನದ ಅಡಿಯಲ್ಲಿ ಅವುಗಳನ್ನು ಸೇರಿಸಿದ್ದು, ಅವುಗಳನ್ನು ತೆಗೆದು ಹಾಕಬೇಕು’ ಎಂದು ಬಿಜೆಪಿಯ ರಾಜ್ಯಸಭಾ ಸಂಸದ ಭೀಮ್ ಸಿಂಗ್ ಅವರು ಖಾಸಗಿ ಮಸೂದೆ ಮಂಡಿಸಿದ್ದಾರೆ.</p>.<p>ಸಿಂಗ್ ಅವರು ‘ಸಂವಿಧಾನ (ತಿದ್ದುಪಡಿ) ಕಾಯ್ದೆ 2025’ ಅನ್ನು ರಾಜ್ಯಸಭೆಯಲ್ಲಿ ಶುಕ್ರವಾರ ಮಂಡಿಸಿದ್ದು, ಮೂಲ ಸಂವಿಧಾನದಲ್ಲಿ ಈ ಪದಗಳು ಇರಲಿಲ್ಲ. ಇದರಿಂದ ಗೊಂದಲ ಸೃಷ್ಟಿಸುತ್ತಿವೆ ಎಂದು ತಿಳಿಸಿದ್ದಾರೆ.</p>.<p class="title">‘ಸಂವಿಧಾನದ ಪೀಠಿಕೆಯಿಂದ ಸಮಾಜವಾದ, ಜಾತ್ಯತೀತ ಪದಗಳನ್ನು ತೆಗೆದುಹಾಕಬೇಕು ಎಂದು ಖಾಸಗಿ ಮಸೂದೆಯನ್ನು ಮಂಡಿಸಿದ್ದೇನೆ. 1949ರಲ್ಲಿ ಮೂಲ ಸಂವಿಧಾನವನ್ನು ಅಂಗೀಕರಿಸಿದ್ದು, 1950ರಲ್ಲಿ ಜಾರಿಗೆ ಬಂದಿತ್ತು. ಈ ಸಂವಿಧಾನದಲ್ಲಿ ಈ ಪದಗಳು ಇಲ್ಲ. 1976ರ ತುರ್ತು ಪರಿಸ್ಥಿತಿಯ ವೇಳೆ ಸಂವಿಧಾನಕ್ಕೆ 42ನೇ ತಿದ್ದುಪಡಿ ತಂದು ಇಂದಿರಾ ಗಾಂಧಿ ಅವರು ಈ ಪದಗಳನ್ನು ಸೇರಿಸಿದರು. ಆ ವೇಳೆ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯೇ ನಡೆದಿರಲಿಲ್ಲ’ ಎಂದು ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ದೇಶದ ಸಂವಿಧಾನದ ಪೀಠಿಕೆಯಲ್ಲಿ ‘ಜಾತ್ಯತೀತ’, ‘ಸಮಾಜವಾದ’ ಪದಗಳ ಅಗತ್ಯವಿಲ್ಲ. ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವ ವಿರೋಧಿ ನೀತಿ ವಿಧಾನದ ಅಡಿಯಲ್ಲಿ ಅವುಗಳನ್ನು ಸೇರಿಸಿದ್ದು, ಅವುಗಳನ್ನು ತೆಗೆದು ಹಾಕಬೇಕು’ ಎಂದು ಬಿಜೆಪಿಯ ರಾಜ್ಯಸಭಾ ಸಂಸದ ಭೀಮ್ ಸಿಂಗ್ ಅವರು ಖಾಸಗಿ ಮಸೂದೆ ಮಂಡಿಸಿದ್ದಾರೆ.</p>.<p>ಸಿಂಗ್ ಅವರು ‘ಸಂವಿಧಾನ (ತಿದ್ದುಪಡಿ) ಕಾಯ್ದೆ 2025’ ಅನ್ನು ರಾಜ್ಯಸಭೆಯಲ್ಲಿ ಶುಕ್ರವಾರ ಮಂಡಿಸಿದ್ದು, ಮೂಲ ಸಂವಿಧಾನದಲ್ಲಿ ಈ ಪದಗಳು ಇರಲಿಲ್ಲ. ಇದರಿಂದ ಗೊಂದಲ ಸೃಷ್ಟಿಸುತ್ತಿವೆ ಎಂದು ತಿಳಿಸಿದ್ದಾರೆ.</p>.<p class="title">‘ಸಂವಿಧಾನದ ಪೀಠಿಕೆಯಿಂದ ಸಮಾಜವಾದ, ಜಾತ್ಯತೀತ ಪದಗಳನ್ನು ತೆಗೆದುಹಾಕಬೇಕು ಎಂದು ಖಾಸಗಿ ಮಸೂದೆಯನ್ನು ಮಂಡಿಸಿದ್ದೇನೆ. 1949ರಲ್ಲಿ ಮೂಲ ಸಂವಿಧಾನವನ್ನು ಅಂಗೀಕರಿಸಿದ್ದು, 1950ರಲ್ಲಿ ಜಾರಿಗೆ ಬಂದಿತ್ತು. ಈ ಸಂವಿಧಾನದಲ್ಲಿ ಈ ಪದಗಳು ಇಲ್ಲ. 1976ರ ತುರ್ತು ಪರಿಸ್ಥಿತಿಯ ವೇಳೆ ಸಂವಿಧಾನಕ್ಕೆ 42ನೇ ತಿದ್ದುಪಡಿ ತಂದು ಇಂದಿರಾ ಗಾಂಧಿ ಅವರು ಈ ಪದಗಳನ್ನು ಸೇರಿಸಿದರು. ಆ ವೇಳೆ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯೇ ನಡೆದಿರಲಿಲ್ಲ’ ಎಂದು ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>