<p class="title"><strong>ಉನ್ನಾವೊ: </strong>ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ‘ಪಾಕಿಸ್ತಾನದ ಸಂಖ್ಯೆಯಿಂದ ತಮಗೆ ಕರೆ ಬಂದಿದ್ದು, ಬಾಂಬ್ ಸ್ಫೋಟಿಸಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ’ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p class="title">ಪಾಕಿಸ್ತಾನ ಮೂಲದ ಉಗ್ರರ ಸಂಘಟನೆಯಿಂದ ಎರಡು ಕರೆಗಳು ಬಂದಿವೆ. ಮನೆಯೊಂದಿಗೇ ಸ್ಫೋಟಿಸುವುದಾಗಿ ಬೆದರಿಸಿದ್ದಾರೆ ಎಂದು ಅವರು ಸಾದರ್ ಕೊತ್ವಾಲಿ ಠಾಣೆಗೆ ನೀಡಿರುವ ದೂರಿನಲ್ಲಿ ಅವರು ತಿಳಿಸಿದ್ದಾರೆ.</p>.<p class="title">‘ಕರೆ ಮಾಡಿದಾತ, ಕಾಶ್ಮೀರ ಶೀಘ್ರದಲ್ಲಿಯೇ ಪಾಕಿಸ್ತಾನದ ಭಾಗವಾಗಲಿದೆ ಎಂದು ತಿಳಿಸಿದ್ದಾನೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದಕ್ಕೆ ಅನುಚಿತ ಭಾಷೆ ಬಳಸಿ ಟೀಕಿಸಿದ್ದಾನೆ’ ಎಂದು ದೂರಿನಲ್ಲಿ ಹೇಳಿದ್ದಾರೆ.</p>.<p>ಸದ್ಯ, ಸಂಸದರಿಗೆ ‘ವೈ’ ದರ್ಜೆಯ ಭದ್ರತೆ ಇದ್ದು, ಮನೆಯ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಬೆದರಿಕೆ ಕರೆಯ ಬಂದಿರುವ ಕಾರಣ ಭದ್ರತೆ ಸ್ವರೂಪವನ್ನು ಪರಿಶೀಲಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಪಿ.ಕಾನೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಉನ್ನಾವೊ: </strong>ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ‘ಪಾಕಿಸ್ತಾನದ ಸಂಖ್ಯೆಯಿಂದ ತಮಗೆ ಕರೆ ಬಂದಿದ್ದು, ಬಾಂಬ್ ಸ್ಫೋಟಿಸಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ’ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p class="title">ಪಾಕಿಸ್ತಾನ ಮೂಲದ ಉಗ್ರರ ಸಂಘಟನೆಯಿಂದ ಎರಡು ಕರೆಗಳು ಬಂದಿವೆ. ಮನೆಯೊಂದಿಗೇ ಸ್ಫೋಟಿಸುವುದಾಗಿ ಬೆದರಿಸಿದ್ದಾರೆ ಎಂದು ಅವರು ಸಾದರ್ ಕೊತ್ವಾಲಿ ಠಾಣೆಗೆ ನೀಡಿರುವ ದೂರಿನಲ್ಲಿ ಅವರು ತಿಳಿಸಿದ್ದಾರೆ.</p>.<p class="title">‘ಕರೆ ಮಾಡಿದಾತ, ಕಾಶ್ಮೀರ ಶೀಘ್ರದಲ್ಲಿಯೇ ಪಾಕಿಸ್ತಾನದ ಭಾಗವಾಗಲಿದೆ ಎಂದು ತಿಳಿಸಿದ್ದಾನೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದಕ್ಕೆ ಅನುಚಿತ ಭಾಷೆ ಬಳಸಿ ಟೀಕಿಸಿದ್ದಾನೆ’ ಎಂದು ದೂರಿನಲ್ಲಿ ಹೇಳಿದ್ದಾರೆ.</p>.<p>ಸದ್ಯ, ಸಂಸದರಿಗೆ ‘ವೈ’ ದರ್ಜೆಯ ಭದ್ರತೆ ಇದ್ದು, ಮನೆಯ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಬೆದರಿಕೆ ಕರೆಯ ಬಂದಿರುವ ಕಾರಣ ಭದ್ರತೆ ಸ್ವರೂಪವನ್ನು ಪರಿಶೀಲಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಪಿ.ಕಾನೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>