<p><strong>ಮುಜಪ್ಫರನಗರ:</strong> ಉತ್ತರ ಪ್ರದೇಶದ ಕೋಮು ಸೂಕ್ಷ್ಮ ಕ್ಷೇತ್ರ ಮುಜಪ್ಫರನಗರದ ಬಿಜೆಪಿ ಅಭ್ಯರ್ಥಿ ತಮ್ಮ ಕ್ಷೇತ್ರದಲ್ಲಿ ಬುರ್ಕಾಧಾರಿಗಳಿಂದನಕಲಿ ಮತದಾನವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಗುರುವಾರ ಬೆಳಗ್ಗೆ ಮತ ಚಲಾವಣೆ ಮಾಡಿದ ಅವರು, ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ‘ ಕ್ಷೇತ್ರದಲ್ಲಿ ಬುರ್ಕಾಧಾರಿ ಮಹಿಳೆಯರ ಮುಖ ಪರಿಶೀಲಿಸದೇ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ. ನಕಲಿ ಮತದಾನವಾಗುತ್ತಿದೆ ಎಂದು ನಾನು ಆರೋಪ ಮಾಡುತ್ತೇನೆ. ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸದೇ ಹೋದರೆ ಮರುಮತದಾನಕ್ಕೆ ನಾನು ಒತ್ತಾಯಿಸುತ್ತೇನೆ,’ ಎಂದು ಅವರು ಹೇಳಿದ್ದಾರೆ.</p>.<p>ಮುಜಪ್ಫರನಗರ ಕ್ಷೇತ್ರದ ಕೆಲವೆಡೆ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದ್ದು, ಇದರಿಂದಾಗಿ ಮತದಾನ ವಿಳಂಬವಾದ ಬಗ್ಗೆ ವರದಿಯಾಗಿದೆ. ಇಲ್ಲಿ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಅಜಿತ್ ಸಿಂಗ್ ಅವರು ಎಸ್ಪಿ, ಬಿಎಸ್ಪಿ, ಕಾಂಗ್ರೆಸ್ ಬೆಂಬಲದೊಂದಿಗೆ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.</p>.<p>2013ರಲ್ಲಿ ಇಲ್ಲಿ ಉಂಟಾಗಿದ್ದ ಕೋಮುದಳ್ಳುರಿಯಲ್ಲಿ 6 ಮಂದಿ ಮೃತಪಟ್ಟಿದ್ದರು. 50 ಸಾವಿರ ಮಂದಿ ನಿರಾಶ್ರಿತರಾಗಿದ್ದರು. ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ್ ಬಲ್ಯಾನ್ 4 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಪ್ಫರನಗರ:</strong> ಉತ್ತರ ಪ್ರದೇಶದ ಕೋಮು ಸೂಕ್ಷ್ಮ ಕ್ಷೇತ್ರ ಮುಜಪ್ಫರನಗರದ ಬಿಜೆಪಿ ಅಭ್ಯರ್ಥಿ ತಮ್ಮ ಕ್ಷೇತ್ರದಲ್ಲಿ ಬುರ್ಕಾಧಾರಿಗಳಿಂದನಕಲಿ ಮತದಾನವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಗುರುವಾರ ಬೆಳಗ್ಗೆ ಮತ ಚಲಾವಣೆ ಮಾಡಿದ ಅವರು, ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ‘ ಕ್ಷೇತ್ರದಲ್ಲಿ ಬುರ್ಕಾಧಾರಿ ಮಹಿಳೆಯರ ಮುಖ ಪರಿಶೀಲಿಸದೇ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ. ನಕಲಿ ಮತದಾನವಾಗುತ್ತಿದೆ ಎಂದು ನಾನು ಆರೋಪ ಮಾಡುತ್ತೇನೆ. ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸದೇ ಹೋದರೆ ಮರುಮತದಾನಕ್ಕೆ ನಾನು ಒತ್ತಾಯಿಸುತ್ತೇನೆ,’ ಎಂದು ಅವರು ಹೇಳಿದ್ದಾರೆ.</p>.<p>ಮುಜಪ್ಫರನಗರ ಕ್ಷೇತ್ರದ ಕೆಲವೆಡೆ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದ್ದು, ಇದರಿಂದಾಗಿ ಮತದಾನ ವಿಳಂಬವಾದ ಬಗ್ಗೆ ವರದಿಯಾಗಿದೆ. ಇಲ್ಲಿ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಅಜಿತ್ ಸಿಂಗ್ ಅವರು ಎಸ್ಪಿ, ಬಿಎಸ್ಪಿ, ಕಾಂಗ್ರೆಸ್ ಬೆಂಬಲದೊಂದಿಗೆ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.</p>.<p>2013ರಲ್ಲಿ ಇಲ್ಲಿ ಉಂಟಾಗಿದ್ದ ಕೋಮುದಳ್ಳುರಿಯಲ್ಲಿ 6 ಮಂದಿ ಮೃತಪಟ್ಟಿದ್ದರು. 50 ಸಾವಿರ ಮಂದಿ ನಿರಾಶ್ರಿತರಾಗಿದ್ದರು. ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ್ ಬಲ್ಯಾನ್ 4 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>