<p><strong>ನವದೆಹಲಿ: </strong>ಕೇಂದ್ರದ ಮಾಜಿ ಸಚಿವ ಹಾಗೂ ಪಕ್ಷದ ರಾಷ್ಟ್ರೀಯ ವಕ್ತಾರ ಸೈಯದ್ ಶಹನವಾಜ್ ಹುಸೇನ್ ಅವರನ್ನು ಬಿಜೆಪಿ, ಬಿಹಾರ ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಿಸಿದೆ.</p>.<p>ಇದರೊಂದಿಗೆ ಶಹನವಾಜ್ ಅವರು ಮತ್ತೆ ಚುನಾವಣಾ ಕಣಕ್ಕೆ ಧುಮುಕಿದಂತಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಭಾಗಲ್ಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಅವರಿಗೆ 2019ರ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು.</p>.<p>ಶಹನವಾಜ್ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಖಾತೆಯ ಸಚಿವರಾಗಿ ಕೆಲಸ ಮಾಡಿದ್ದರು.</p>.<p>ಮತ್ತೆ ಆರು ಮಂದಿಯ ಹೆಸರು ಘೋಷಣೆ: ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನ ಪರಿಷತ್ ಚುನಾವಣೆಗೆ ಮತ್ತೆ ಆರು ಮಂದಿ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ.</p>.<p>ಕುನ್ವಾರ್ ಮನ್ವೇಂದ್ರ ಸಿಂಗ್, ಗೋವಿಂದ ನಾರಾಯಣ ಶುಕ್ಲಾ, ಸಲೀಲ್ ಬಿಷ್ಣೋಯಿ, ಅಶ್ವಿನಿ ತ್ಯಾಗಿ, ಧರಮವೀರ್ ಪ್ರಜಾಪತಿ ಮತ್ತು ಸುರೇಂದ್ರ ಚೌಧರಿ ಅವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ. ಚುನಾವಣೆಯು ಇದೇ ತಿಂಗಳ 28ರಂದು ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರದ ಮಾಜಿ ಸಚಿವ ಹಾಗೂ ಪಕ್ಷದ ರಾಷ್ಟ್ರೀಯ ವಕ್ತಾರ ಸೈಯದ್ ಶಹನವಾಜ್ ಹುಸೇನ್ ಅವರನ್ನು ಬಿಜೆಪಿ, ಬಿಹಾರ ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಿಸಿದೆ.</p>.<p>ಇದರೊಂದಿಗೆ ಶಹನವಾಜ್ ಅವರು ಮತ್ತೆ ಚುನಾವಣಾ ಕಣಕ್ಕೆ ಧುಮುಕಿದಂತಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಭಾಗಲ್ಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಅವರಿಗೆ 2019ರ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು.</p>.<p>ಶಹನವಾಜ್ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಖಾತೆಯ ಸಚಿವರಾಗಿ ಕೆಲಸ ಮಾಡಿದ್ದರು.</p>.<p>ಮತ್ತೆ ಆರು ಮಂದಿಯ ಹೆಸರು ಘೋಷಣೆ: ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನ ಪರಿಷತ್ ಚುನಾವಣೆಗೆ ಮತ್ತೆ ಆರು ಮಂದಿ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ.</p>.<p>ಕುನ್ವಾರ್ ಮನ್ವೇಂದ್ರ ಸಿಂಗ್, ಗೋವಿಂದ ನಾರಾಯಣ ಶುಕ್ಲಾ, ಸಲೀಲ್ ಬಿಷ್ಣೋಯಿ, ಅಶ್ವಿನಿ ತ್ಯಾಗಿ, ಧರಮವೀರ್ ಪ್ರಜಾಪತಿ ಮತ್ತು ಸುರೇಂದ್ರ ಚೌಧರಿ ಅವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ. ಚುನಾವಣೆಯು ಇದೇ ತಿಂಗಳ 28ರಂದು ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>