<p><strong>ನವದೆಹಲಿ</strong>: ಸ್ವಾತಂತ್ರ್ಯೋತ್ಸವ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವ ₹ 13 ಸಾವಿರ ಕೋಟಿ ಮೊತ್ತದ ಪಿಎಂ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ.</p><p>18 ಬಗೆಯ ಸಾಂಪ್ರದಾಯಿಕ ವ್ಯಹಾರಗಳಲ್ಲಿ ತೊಡಗಿಕೊಂಡಿರುವ ಕುಶಲಕರ್ಮಿಗಳಾದ ಮರ, ಕಬ್ಬಿಣ ಹಾಗೂ ಚರ್ಮದ ಕೆಲಸ ಮಾಡುವವರು, ಮೀನುಗಾರರು ಹಾಗೂ ಇತರರು ಈ ಯೋಜನೆಯ ಅಡಿಯಲ್ಲಿ ಪಿಎಂ ವಿಶ್ವಕರ್ಮ ಪ್ರಮಾಣಪತ್ರದೊಂದಿಗೆ ಮಾನ್ಯತೆ ಮತ್ತು ಗುರುತಿನ ಪತ್ರ ಪಡೆದುಕೊಳ್ಳಲಿದ್ದಾರೆ.</p><p>ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ರೈಲ್ವೆ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಕುಶಲಕರ್ಮಿಗಳು ಈ ಯೋಜನೆ ಅಡಿಯಲ್ಲಿ ಪಡೆಯುವ ಹೊಸ ಉಪಕರಣಗಳ ಮೂಲಕ ನೈಪುಣ್ಯ ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.</p><p>ತರಬೇತಿ, ಸುಧಾರಿತ ಉಪಕರಣಗಳು, ಡಿಜಿಟಲ್ ಪಾವತಿ ವ್ಯವಸ್ಥೆ ಮತ್ತು ಮಾರುಕಟ್ಟೆ ಬೆಂಬಲ ಲಭ್ಯವಾಗಲಿದೆ. ಕುಶಲಕರ್ಮಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.</p><p>ಆಗಸ್ಟ್ 15ರಂದು (ಮಂಗಳವಾರ) ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ವಿಶ್ವಕರ್ಮ ಯೋಜನೆ ಘೋಷಿಸಿದ್ದ ಪ್ರಧಾನಿ ಮೋದಿ, ಹಿಂದುಳಿದ ವರ್ಗಕ್ಕೆ ಸೇರಿದ ಕುಶಲಕರ್ಮಿಗಳಿಗೆ ಲಾಭವಾಗುವ ಈ ಯೋಜನೆಗೆ ಮುಂಬರುವ ವಿಶ್ವಕರ್ಮ ಜಯಂತಿಯಂದು ಚಾಲನೆ ನೀಡಲಾಗುವುದು ಎಂದು ಹೇಳಿದ್ದರು.</p><p>ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಈ ವರ್ಷಾಂತ್ಯದಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಹಿಂದುಳಿದ ಸಮುದಾಯದವರನ್ನು ಸೆಳೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆ ಘೋಷಿಸಿದೆ ಎನ್ನಲಾಗುತ್ತಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸ್ವಾತಂತ್ರ್ಯೋತ್ಸವ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವ ₹ 13 ಸಾವಿರ ಕೋಟಿ ಮೊತ್ತದ ಪಿಎಂ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ.</p><p>18 ಬಗೆಯ ಸಾಂಪ್ರದಾಯಿಕ ವ್ಯಹಾರಗಳಲ್ಲಿ ತೊಡಗಿಕೊಂಡಿರುವ ಕುಶಲಕರ್ಮಿಗಳಾದ ಮರ, ಕಬ್ಬಿಣ ಹಾಗೂ ಚರ್ಮದ ಕೆಲಸ ಮಾಡುವವರು, ಮೀನುಗಾರರು ಹಾಗೂ ಇತರರು ಈ ಯೋಜನೆಯ ಅಡಿಯಲ್ಲಿ ಪಿಎಂ ವಿಶ್ವಕರ್ಮ ಪ್ರಮಾಣಪತ್ರದೊಂದಿಗೆ ಮಾನ್ಯತೆ ಮತ್ತು ಗುರುತಿನ ಪತ್ರ ಪಡೆದುಕೊಳ್ಳಲಿದ್ದಾರೆ.</p><p>ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ರೈಲ್ವೆ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಕುಶಲಕರ್ಮಿಗಳು ಈ ಯೋಜನೆ ಅಡಿಯಲ್ಲಿ ಪಡೆಯುವ ಹೊಸ ಉಪಕರಣಗಳ ಮೂಲಕ ನೈಪುಣ್ಯ ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.</p><p>ತರಬೇತಿ, ಸುಧಾರಿತ ಉಪಕರಣಗಳು, ಡಿಜಿಟಲ್ ಪಾವತಿ ವ್ಯವಸ್ಥೆ ಮತ್ತು ಮಾರುಕಟ್ಟೆ ಬೆಂಬಲ ಲಭ್ಯವಾಗಲಿದೆ. ಕುಶಲಕರ್ಮಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.</p><p>ಆಗಸ್ಟ್ 15ರಂದು (ಮಂಗಳವಾರ) ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ವಿಶ್ವಕರ್ಮ ಯೋಜನೆ ಘೋಷಿಸಿದ್ದ ಪ್ರಧಾನಿ ಮೋದಿ, ಹಿಂದುಳಿದ ವರ್ಗಕ್ಕೆ ಸೇರಿದ ಕುಶಲಕರ್ಮಿಗಳಿಗೆ ಲಾಭವಾಗುವ ಈ ಯೋಜನೆಗೆ ಮುಂಬರುವ ವಿಶ್ವಕರ್ಮ ಜಯಂತಿಯಂದು ಚಾಲನೆ ನೀಡಲಾಗುವುದು ಎಂದು ಹೇಳಿದ್ದರು.</p><p>ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಈ ವರ್ಷಾಂತ್ಯದಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಹಿಂದುಳಿದ ಸಮುದಾಯದವರನ್ನು ಸೆಳೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆ ಘೋಷಿಸಿದೆ ಎನ್ನಲಾಗುತ್ತಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>