ಈ ವಿಚಾರವಾಗಿ ಎಎನ್ಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, 'ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಬಂಧಿಸಿದ ರೀತಿ ಆಕ್ಷೇಪಾರ್ಹವಾಗಿದೆ. ಈ ಘಟನೆಯು ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರ ಸರ್ಕಾರದ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಪ್ರಜಾಪ್ರಭುತ್ವ ಮತ್ತು ಪತ್ರಿಕೋದ್ಯಮದ ತತ್ವಗಳ ಮೇಲೆ ನಡೆದ ದೊಡ್ಡ ದಾಳಿಯಾಗಿದೆ' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.