<p><strong>ನಾಗ್ಪುರ:</strong> ‘ಬಿಜೆಪಿ ಮುಸ್ಲಿಂ ವಿರೋಧಿಯಲ್ಲ. ಬಿಜೆಪಿಯ ಸಿದ್ಧಾಂತ ಎಲ್ಲರಿಗಾಗಿ ಕೆಲಸ ಮಾಡುವುದನ್ನು ಕಲಿಸುತ್ತದೆ’ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. </p>.<p>‘ಜ.15ರಂದು ನಡೆಯಲಿರುವ ನಾಗ್ಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ–ಶಿವ ಸೇನಾ ಮೈತ್ರಿ ಜಯಗಳಿಸಿದರೆ ಜನರ ಎಲ್ಲ ಕನಸುಗಳು ನನಸಾಗುತ್ತವೆ’ ಎಂದು ಅವರು ಇಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದರು.</p>.<p class="bodytext">ಮೂರು ಸಾರ್ವಜನಿಕ ಸಭೆಗಳನ್ನು ನಡೆಸಿದ ಗಡ್ಕರಿ, ‘ಬಿಜೆಪಿ ಮುಸ್ಲಿಂ ವಿರೋಧಿ ಎಂದು ವಿರೋಧ ಪಕ್ಷಗಳು ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ. ನಾವು ಭಯೋತ್ಪಾದನೆ ಮತ್ತು ಪಾಕಿಸ್ತಾನವನ್ನು ಮಾತ್ರ ವಿರೋಧಿಸುತ್ತೇವೆ. ಈ ದೇಶಕ್ಕಾಗಿ ತ್ಯಾಗ ಮಾಡಿರುವ ಮುಸ್ಲಿಮರು, ನಮಗೆ ಹಿಂದೂಗಳಷ್ಟೇ ಪ್ರಿಯರು’ ಎಂದು ಹೇಳಿದರು.</p>.<p class="bodytext">‘ನೀವು ಮಸೀದಿ, ಗುರುದ್ವಾರ, ಬೌದ್ಧ ವಿಹಾರ ಯಾವುದಕ್ಕಾದರೂ ಹೋಗಬಹುದು. ಆದರೆ, ಎಲ್ಲರ ರಕ್ತ ಒಂದೇ, ನಾವೆಲ್ಲ ಭಾರತೀಯರು. ಬಿಜೆಪಿ ಸರ್ವರ ವಿಕಾಸಕ್ಕಾಗಿ ಕೆಲಸ ಮಾಡುತ್ತದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ‘ಬಿಜೆಪಿ ಮುಸ್ಲಿಂ ವಿರೋಧಿಯಲ್ಲ. ಬಿಜೆಪಿಯ ಸಿದ್ಧಾಂತ ಎಲ್ಲರಿಗಾಗಿ ಕೆಲಸ ಮಾಡುವುದನ್ನು ಕಲಿಸುತ್ತದೆ’ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. </p>.<p>‘ಜ.15ರಂದು ನಡೆಯಲಿರುವ ನಾಗ್ಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ–ಶಿವ ಸೇನಾ ಮೈತ್ರಿ ಜಯಗಳಿಸಿದರೆ ಜನರ ಎಲ್ಲ ಕನಸುಗಳು ನನಸಾಗುತ್ತವೆ’ ಎಂದು ಅವರು ಇಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದರು.</p>.<p class="bodytext">ಮೂರು ಸಾರ್ವಜನಿಕ ಸಭೆಗಳನ್ನು ನಡೆಸಿದ ಗಡ್ಕರಿ, ‘ಬಿಜೆಪಿ ಮುಸ್ಲಿಂ ವಿರೋಧಿ ಎಂದು ವಿರೋಧ ಪಕ್ಷಗಳು ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ. ನಾವು ಭಯೋತ್ಪಾದನೆ ಮತ್ತು ಪಾಕಿಸ್ತಾನವನ್ನು ಮಾತ್ರ ವಿರೋಧಿಸುತ್ತೇವೆ. ಈ ದೇಶಕ್ಕಾಗಿ ತ್ಯಾಗ ಮಾಡಿರುವ ಮುಸ್ಲಿಮರು, ನಮಗೆ ಹಿಂದೂಗಳಷ್ಟೇ ಪ್ರಿಯರು’ ಎಂದು ಹೇಳಿದರು.</p>.<p class="bodytext">‘ನೀವು ಮಸೀದಿ, ಗುರುದ್ವಾರ, ಬೌದ್ಧ ವಿಹಾರ ಯಾವುದಕ್ಕಾದರೂ ಹೋಗಬಹುದು. ಆದರೆ, ಎಲ್ಲರ ರಕ್ತ ಒಂದೇ, ನಾವೆಲ್ಲ ಭಾರತೀಯರು. ಬಿಜೆಪಿ ಸರ್ವರ ವಿಕಾಸಕ್ಕಾಗಿ ಕೆಲಸ ಮಾಡುತ್ತದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>