<p><strong>ನವದೆಹಲಿ</strong>: ಲೋಕಸಭೆಯ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ಆಡಿರುವ ಮಾತುಗಳ ಬಗ್ಗೆ ಬಿಜೆಪಿ ಮಾಡಿರುವ ಟೀಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಪಕ್ಷವು, ‘ಆಡಳಿತಾರೂಢ ಪಕ್ಷವು ದೇಶ ಅಂದರೆ ತಾನು ಎಂದು ಭಾವಿಸಬಾರದು’ ಎಂದು ಹೇಳಿದೆ.</p>.<p>ಕೇಂದ್ರ ಸರ್ಕಾರದ ನೀತಿಗಳ ಬಗ್ಗೆ ಟೀಕೆ ಮಾಡುವುದನ್ನು ತಾನು ಮುಂದುವರಿಸುವುದಾಗಿ ಕಾಂಗ್ರೆಸ್ ಸ್ಪಷ್ಟಪಡಿಸಿದೆ.</p>.<p>ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ‘ರಾಹುಲ್ ಅವರು ಸತ್ಯವನ್ನು ಮಾತನಾಡಿರುವ ಕಾರಣಕ್ಕೆ ಬಿಜೆಪಿಯವರಿಗೆ ಭೀತಿ ಉಂಟಾಗಿದೆ’ ಎಂದು ಹೇಳಿದರು.</p>.<p>‘ಮೋದಿ ಗುಳ್ಳೆ ಒಡೆದುಹೋಗಿದೆ. ಅವರು ಪಾಲಿಸುತ್ತಿದ್ದ ಭೀತಿಯ ರಾಜಕಾರಣ ಸೋತಿದೆ. ಮೋದಿ ಅವರನ್ನಾಗಲಿ, ಅವರ ಹೊಗಳುಭಟರನ್ನಾಗಲಿ ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ’ ಎಂದು ವೇಣುಗೋಪಾಲ್ ಹೇಳಿದರು.</p>.<p>ಬಿಜೆಪಿಯವರು ಅರ್ಥವಿಲ್ಲದ ಆಕ್ರೋಶ ವ್ಯಕ್ತಪಡಿಸುವ ಬದಲು, ಟೀಕೆಗಳನ್ನು ರಚನಾತ್ಮಕವಾಗಿ ಸ್ವೀಕರಿಸಿದರೆ ಚೆನ್ನ ಎಂದು ವೇಣುಗೋಪಾಲ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆಯ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ಆಡಿರುವ ಮಾತುಗಳ ಬಗ್ಗೆ ಬಿಜೆಪಿ ಮಾಡಿರುವ ಟೀಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಪಕ್ಷವು, ‘ಆಡಳಿತಾರೂಢ ಪಕ್ಷವು ದೇಶ ಅಂದರೆ ತಾನು ಎಂದು ಭಾವಿಸಬಾರದು’ ಎಂದು ಹೇಳಿದೆ.</p>.<p>ಕೇಂದ್ರ ಸರ್ಕಾರದ ನೀತಿಗಳ ಬಗ್ಗೆ ಟೀಕೆ ಮಾಡುವುದನ್ನು ತಾನು ಮುಂದುವರಿಸುವುದಾಗಿ ಕಾಂಗ್ರೆಸ್ ಸ್ಪಷ್ಟಪಡಿಸಿದೆ.</p>.<p>ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ‘ರಾಹುಲ್ ಅವರು ಸತ್ಯವನ್ನು ಮಾತನಾಡಿರುವ ಕಾರಣಕ್ಕೆ ಬಿಜೆಪಿಯವರಿಗೆ ಭೀತಿ ಉಂಟಾಗಿದೆ’ ಎಂದು ಹೇಳಿದರು.</p>.<p>‘ಮೋದಿ ಗುಳ್ಳೆ ಒಡೆದುಹೋಗಿದೆ. ಅವರು ಪಾಲಿಸುತ್ತಿದ್ದ ಭೀತಿಯ ರಾಜಕಾರಣ ಸೋತಿದೆ. ಮೋದಿ ಅವರನ್ನಾಗಲಿ, ಅವರ ಹೊಗಳುಭಟರನ್ನಾಗಲಿ ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ’ ಎಂದು ವೇಣುಗೋಪಾಲ್ ಹೇಳಿದರು.</p>.<p>ಬಿಜೆಪಿಯವರು ಅರ್ಥವಿಲ್ಲದ ಆಕ್ರೋಶ ವ್ಯಕ್ತಪಡಿಸುವ ಬದಲು, ಟೀಕೆಗಳನ್ನು ರಚನಾತ್ಮಕವಾಗಿ ಸ್ವೀಕರಿಸಿದರೆ ಚೆನ್ನ ಎಂದು ವೇಣುಗೋಪಾಲ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>