<p><strong>ರಾಯ್ಬರೇಲಿ:</strong> ಸಾಮಾನ್ಯ ಜನರ ಸೇವೆ ಮಾಡಬೇಕೆಂಬ ‘ರಾಜ ಧರ್ಮ’ವನ್ನು ಬಿಜೆಪಿ ಮರೆತಿದೆ. ಕೇವಲ ದೊಡ್ಡ ಉದ್ಯಮಿಗಳಿಗಾಗಿ ಮಾತ್ರ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.</p>.<p>ರಾಯ್ಬರೇಲಿಯ ಜಗತ್ಪುರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತಗಳನ್ನು ಪಡೆಯುವುದಕ್ಕಾಗಿ ಧರ್ಮ ಮತ್ತು ಜಾತಿಯನ್ನು ಬಳಸುವವರನ್ನು ಜನರು ಗಮನಿಸಬೇಕು ಎಂದರು.</p>.<p><a href="https://www.prajavani.net/india-news/up-cm-yogi-adityanath-accused-samajwadi-party-sympathises-with-terrorists-912698.html" itemprop="url">ಸಮಾಜವಾದಿ ಪಕ್ಷಕ್ಕೆ ಭಯೋತ್ಪಾದಕರ ಬಗ್ಗೆ ಸಹಾನುಭೂತಿ: ಯೋಗಿ ಆದಿತ್ಯನಾಥ್ ಆರೋಪ </a></p>.<p>ಬಿಜೆಪಿ ನಾಯಕರು ಜನರ ಸೇವೆ ಮಾಡುವುದು ತಮ್ಮ ಧರ್ಮ ಎಂಬುದನ್ನು ಮರೆತಿದ್ದಾರೆ. ಅವರಿಗೆ ಧರ್ಮ ಎಂಬುದು ಮತ ಗಳಿಕೆಗಾಗಿ ಜನರನ್ನು ಪ್ರಚೋದಿಸುವ ತಂತ್ರವಾಗಿಬಿಟ್ಟಿದೆ. ಬಿಜೆಪಿ ಸರ್ಕಾರವು ಜನರ ಸೇವೆ ಮಾಡಬೇಕೆಂಬ ರಾಜ ಧರ್ಮವನ್ನು ಮರೆತಿದೆ ಎಂದು ಅವರು ಟೀಕಿಸಿದ್ದಾರೆ.</p>.<p>ನಿರುದ್ಯೋಗ, ಹಣದುಬ್ಬರದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಅಡುಗೆ ಅನಿಲದ ಸಿಲಿಂಡರ್ ಮತ್ತು ಸಾಸಿವೆ ಎಣ್ಣೆ ಬೆಲೆ ಏರಿಕೆ ಬಗ್ಗೆಯೂ ಉಲ್ಲೇಖಿಸಿದ್ದಾರೆ.</p>.<p><a href="https://www.prajavani.net/india-news/pm-narendra-modi-says-bjp-has-brought-up-out-of-the-darkness-of-riot-curfew-ransom-912673.html" itemprop="url">ದಂಗೆ, ಸುಲಿಗೆಗಳಿಂದ ಉತ್ತರ ಪ್ರದೇಶಕ್ಕೆ ಮುಕ್ತಿ ಕೊಡಿಸಿದ ಬಿಜೆಪಿ: ಪ್ರಧಾನಿ ಮೋದಿ </a></p>.<p>‘ನೀವು ದಿನಕ್ಕೆ ₹200 ಸಂಪಾದಿಸಿದರೆ ಒಂದು ಬಾಟಲ್ ಸಾಸಿವೆ ಎಣ್ಣೆಗೆ ₹240 ನೀಡಬೇಕಾಗಿದೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಬರೇಲಿ:</strong> ಸಾಮಾನ್ಯ ಜನರ ಸೇವೆ ಮಾಡಬೇಕೆಂಬ ‘ರಾಜ ಧರ್ಮ’ವನ್ನು ಬಿಜೆಪಿ ಮರೆತಿದೆ. ಕೇವಲ ದೊಡ್ಡ ಉದ್ಯಮಿಗಳಿಗಾಗಿ ಮಾತ್ರ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.</p>.<p>ರಾಯ್ಬರೇಲಿಯ ಜಗತ್ಪುರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತಗಳನ್ನು ಪಡೆಯುವುದಕ್ಕಾಗಿ ಧರ್ಮ ಮತ್ತು ಜಾತಿಯನ್ನು ಬಳಸುವವರನ್ನು ಜನರು ಗಮನಿಸಬೇಕು ಎಂದರು.</p>.<p><a href="https://www.prajavani.net/india-news/up-cm-yogi-adityanath-accused-samajwadi-party-sympathises-with-terrorists-912698.html" itemprop="url">ಸಮಾಜವಾದಿ ಪಕ್ಷಕ್ಕೆ ಭಯೋತ್ಪಾದಕರ ಬಗ್ಗೆ ಸಹಾನುಭೂತಿ: ಯೋಗಿ ಆದಿತ್ಯನಾಥ್ ಆರೋಪ </a></p>.<p>ಬಿಜೆಪಿ ನಾಯಕರು ಜನರ ಸೇವೆ ಮಾಡುವುದು ತಮ್ಮ ಧರ್ಮ ಎಂಬುದನ್ನು ಮರೆತಿದ್ದಾರೆ. ಅವರಿಗೆ ಧರ್ಮ ಎಂಬುದು ಮತ ಗಳಿಕೆಗಾಗಿ ಜನರನ್ನು ಪ್ರಚೋದಿಸುವ ತಂತ್ರವಾಗಿಬಿಟ್ಟಿದೆ. ಬಿಜೆಪಿ ಸರ್ಕಾರವು ಜನರ ಸೇವೆ ಮಾಡಬೇಕೆಂಬ ರಾಜ ಧರ್ಮವನ್ನು ಮರೆತಿದೆ ಎಂದು ಅವರು ಟೀಕಿಸಿದ್ದಾರೆ.</p>.<p>ನಿರುದ್ಯೋಗ, ಹಣದುಬ್ಬರದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಅಡುಗೆ ಅನಿಲದ ಸಿಲಿಂಡರ್ ಮತ್ತು ಸಾಸಿವೆ ಎಣ್ಣೆ ಬೆಲೆ ಏರಿಕೆ ಬಗ್ಗೆಯೂ ಉಲ್ಲೇಖಿಸಿದ್ದಾರೆ.</p>.<p><a href="https://www.prajavani.net/india-news/pm-narendra-modi-says-bjp-has-brought-up-out-of-the-darkness-of-riot-curfew-ransom-912673.html" itemprop="url">ದಂಗೆ, ಸುಲಿಗೆಗಳಿಂದ ಉತ್ತರ ಪ್ರದೇಶಕ್ಕೆ ಮುಕ್ತಿ ಕೊಡಿಸಿದ ಬಿಜೆಪಿ: ಪ್ರಧಾನಿ ಮೋದಿ </a></p>.<p>‘ನೀವು ದಿನಕ್ಕೆ ₹200 ಸಂಪಾದಿಸಿದರೆ ಒಂದು ಬಾಟಲ್ ಸಾಸಿವೆ ಎಣ್ಣೆಗೆ ₹240 ನೀಡಬೇಕಾಗಿದೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>