<p><strong>ಪುಣೆ</strong>: ‘ಬಟೇಂಗೆ ತೋ ಕಾಟೇಂಗೆ’ (ಒಗ್ಗಟ್ಟಿನಿಂದ ಇರದಿದ್ದರೆ ವಿನಾಶವಾಗುತ್ತೇವೆ), ‘ವೋಟ್ ಜಿಹಾದ್’ ಮಾತುಗಳಿಂದ ವೋಟುಗಳ ಧ್ರುವೀಕರಣಕ್ಕೆ ಬಿಜೆಪಿ ಯತ್ನಿಸುತ್ತಿದೆ. ಆದರೆ, ಜನರಿಗೆ ಈ ಹುನ್ನಾರ ಅರ್ಥವಾಗಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ. </p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾವಿಕಾಸ ಆಘಾಡಿಯ ವೋಟುಗಳನ್ನು ವಿಭಜಿಸಲು ಬಿಜೆಪಿಯು ಸಣ್ಣ ಪಕ್ಷಗಳನ್ನು ಮುನ್ನೆಲೆಗೆ ತಂದಿದೆ. ಬಿಜೆಪಿಯ ಈ ಯೋಜನೆಯೂ ಈ ಬಾರಿ ಫಲ ನೀಡುವುದಿಲ್ಲ ಎಂದು ಟೀಕಿಸಿದರು.</p>.<p>ಮುಖ್ಯಮಂತ್ರಿಯಂತಹ ಸಾಂವಿಧಾನಿಕ ಸ್ಥಾನದಲ್ಲಿರುವ ಯೋಗಿ ಆದಿತ್ಯನಾಥ ಅವರು ‘ಬಟೇಂಗೆ ತೋ ಕಾಟೇಂಗೆ’ ಅಂತಹ ಹೇಳಿಕೆ ನೀಡಬಾರದಿತ್ತು. ಅದರ ಬದಲಾಗಿ ‘ಪಢೋಗೆ ತೋ ಬಡೋಗೆ’ (ಓದಿದರೆ ಉದ್ಧಾರವಾಗುವಿರಿ) ಎಂದು ಅವರು ಹೇಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.</p>.<p>‘ವೋಟ್ ಜಿಹಾದ್’ ಹೇಳಿಕೆ ಉಲ್ಲೇಖಿಸಿದ ಅವರು, ಧರ್ಮದ ಆಧಾರದಲ್ಲಿ ಎಲ್ಲಿಯವರೆಗೆ ರಾಜಕಾರಣ ಮಾಡುತ್ತೀರಿ ಎಂದು ಪ್ರಶ್ನಿಸಿದರು. ರಾಮಮಂದಿರ ನಿರ್ಮಿಸಿದ್ದ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದೆ. ಧ್ರುವೀಕರಣ ಆಗುತ್ತಿದೆ, ಆದರೆ, ಜನರಿಗೂ ಅರ್ಥವಾಗುತ್ತಿದೆ ಎಂದರು.</p>.<p>ಯೋಗಿ ಆದಿತ್ಯನಾಥ ಮತ್ತು ದೇವೇಂದ್ರ ಫಡಣವೀಸ್ ಅವರು ಬಳಸುತ್ತಿರುವ ಭಾಷೆ ಅನಗತ್ಯವಾದುದು. ಜನರನ್ನು ಪ್ರಚೋದಿಸುವ ಇಂಥ ಹೇಳಿಕೆಗಳನನ್ನು ಚುನಾವಣಾ ಆಯೋಗ ಗಮನಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: ‘ಬಟೇಂಗೆ ತೋ ಕಾಟೇಂಗೆ’ (ಒಗ್ಗಟ್ಟಿನಿಂದ ಇರದಿದ್ದರೆ ವಿನಾಶವಾಗುತ್ತೇವೆ), ‘ವೋಟ್ ಜಿಹಾದ್’ ಮಾತುಗಳಿಂದ ವೋಟುಗಳ ಧ್ರುವೀಕರಣಕ್ಕೆ ಬಿಜೆಪಿ ಯತ್ನಿಸುತ್ತಿದೆ. ಆದರೆ, ಜನರಿಗೆ ಈ ಹುನ್ನಾರ ಅರ್ಥವಾಗಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ. </p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾವಿಕಾಸ ಆಘಾಡಿಯ ವೋಟುಗಳನ್ನು ವಿಭಜಿಸಲು ಬಿಜೆಪಿಯು ಸಣ್ಣ ಪಕ್ಷಗಳನ್ನು ಮುನ್ನೆಲೆಗೆ ತಂದಿದೆ. ಬಿಜೆಪಿಯ ಈ ಯೋಜನೆಯೂ ಈ ಬಾರಿ ಫಲ ನೀಡುವುದಿಲ್ಲ ಎಂದು ಟೀಕಿಸಿದರು.</p>.<p>ಮುಖ್ಯಮಂತ್ರಿಯಂತಹ ಸಾಂವಿಧಾನಿಕ ಸ್ಥಾನದಲ್ಲಿರುವ ಯೋಗಿ ಆದಿತ್ಯನಾಥ ಅವರು ‘ಬಟೇಂಗೆ ತೋ ಕಾಟೇಂಗೆ’ ಅಂತಹ ಹೇಳಿಕೆ ನೀಡಬಾರದಿತ್ತು. ಅದರ ಬದಲಾಗಿ ‘ಪಢೋಗೆ ತೋ ಬಡೋಗೆ’ (ಓದಿದರೆ ಉದ್ಧಾರವಾಗುವಿರಿ) ಎಂದು ಅವರು ಹೇಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.</p>.<p>‘ವೋಟ್ ಜಿಹಾದ್’ ಹೇಳಿಕೆ ಉಲ್ಲೇಖಿಸಿದ ಅವರು, ಧರ್ಮದ ಆಧಾರದಲ್ಲಿ ಎಲ್ಲಿಯವರೆಗೆ ರಾಜಕಾರಣ ಮಾಡುತ್ತೀರಿ ಎಂದು ಪ್ರಶ್ನಿಸಿದರು. ರಾಮಮಂದಿರ ನಿರ್ಮಿಸಿದ್ದ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದೆ. ಧ್ರುವೀಕರಣ ಆಗುತ್ತಿದೆ, ಆದರೆ, ಜನರಿಗೂ ಅರ್ಥವಾಗುತ್ತಿದೆ ಎಂದರು.</p>.<p>ಯೋಗಿ ಆದಿತ್ಯನಾಥ ಮತ್ತು ದೇವೇಂದ್ರ ಫಡಣವೀಸ್ ಅವರು ಬಳಸುತ್ತಿರುವ ಭಾಷೆ ಅನಗತ್ಯವಾದುದು. ಜನರನ್ನು ಪ್ರಚೋದಿಸುವ ಇಂಥ ಹೇಳಿಕೆಗಳನನ್ನು ಚುನಾವಣಾ ಆಯೋಗ ಗಮನಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>