<p><strong>ಮೊರೆನಾ( ಮಧ್ಯಪ್ರದೇಶ):</strong> ಕಾಂಗ್ರೆಸ್ನಂತೆಯೇ ಬಿಜೆಪಿಯು ತನಿಖಾ ಸಂಸ್ಥೆಗಳನ್ನು ರಾಜಕೀಯಗೊಳಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಾಯಕಿ ಮಾಯಾವತಿ ಭಾನುವಾರ ಆರೋಪಿಸಿದ್ದಾರೆ. </p>.ಮೀಸಲಾತಿ ಆರ್ಎಸ್ಎಸ್ ಬೆಂಬಲಿಸಲಿದೆ: ಭಾಗವತ್.VIDEO | ಪ್ರಜ್ವಲ್ ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್.ಡಿ. ಕುಮಾರಸ್ವಾಮಿ. <p>ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷದಂತೆಯೇ ಇದೀಗ ಕೇಂದ್ರ ಬಿಜೆಪಿ ಸರ್ಕಾರವು ತನಿಖಾ ಸಂಸ್ಥೆಗಳನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ. ದೇಶದಲ್ಲಿ ಕಳೆದ ಎರಡು ವರ್ಷಗಳಲ್ಲಿ ಬಡತನ ಮತ್ತು ನಿರುದ್ಯೋಗ ಸಮಸ್ಯೆಗಳು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.</p><p>ದೇಶದಲ್ಲಿ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಗಳು ನಡೆದರೆ ಹಾಗೂ ಇವಿಎಂಗಳನ್ನು ಅಕ್ರಮ ಎಸಗಲು (ಟ್ಯಾಂಪರಿಂಗ್) ಬಳಸದಿದ್ದರೆ ದೇಶದಲ್ಲಿ ಬಿಜೆಪಿ ಗೆಲ್ಲುವು ಸುಲಭವಲ್ಲ ಎಂದು ಹೇಳಿದ್ದಾರೆ.</p>.ಪಕ್ಷದ ಪ್ರಚಾರದ ಹಾಡಿಗೆ ನಿಷೇಧ ಹೇರಿದ ಚುನಾವಣಾ ಆಯೋಗ: ಎಎಪಿ ಆರೋಪ.ಬಾಲರಾಮನ ತಿರಸ್ಕರಿಸಿದವರನ್ನು ಜನರು ಒಪ್ಪಿಕೊಳ್ಳಲಾರರು: ಕಾಂಗ್ರೆಸ್ ವಿರುದ್ಧ ಮೋದಿ. <p>ದೇಶದ ಗಡಿಗಳ ಭದ್ರತೆ, ಬಡತನ ಮತ್ತು ಭ್ರಷ್ಟಚಾರ ನಿರ್ಮೂಲನೆ, ಉದ್ಯೋಗ ಸೃಷ್ಟಿ ಯಾವುದೇ ವಿಚಾರಗಳಲ್ಲಿ ನೀಡಿದ ಭರವಸೆಗಳನ್ನು ಬಿಜೆಪಿ ಈಡೇರಿಸಲಿಲ್ಲ ಎಂದು ಮಾಯಾವತಿ ಕಿಡಿಕಾರಿದ್ದಾರೆ.</p><p>ಕಾಂಗ್ರೆಸ್ ದಲಿತರು, ಆದಿವಾಸಿಗಳು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡದ ಕಾರಣ ನಮ್ಮ ಪಕ್ಷವನ್ನು ಸ್ಥಾಪಿಸಲಾಯಿತು ಎಂದಿದ್ದಾರೆ. </p><p> ಕಾಂಗ್ರೆಸ್ ಜಾತಿವಾದಿ, ಕೋಮುವಾದಿ, ಬಂಡವಾಳಶಾಹಿ ಮನಸ್ಥಿತಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊರೆನಾ( ಮಧ್ಯಪ್ರದೇಶ):</strong> ಕಾಂಗ್ರೆಸ್ನಂತೆಯೇ ಬಿಜೆಪಿಯು ತನಿಖಾ ಸಂಸ್ಥೆಗಳನ್ನು ರಾಜಕೀಯಗೊಳಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಾಯಕಿ ಮಾಯಾವತಿ ಭಾನುವಾರ ಆರೋಪಿಸಿದ್ದಾರೆ. </p>.ಮೀಸಲಾತಿ ಆರ್ಎಸ್ಎಸ್ ಬೆಂಬಲಿಸಲಿದೆ: ಭಾಗವತ್.VIDEO | ಪ್ರಜ್ವಲ್ ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್.ಡಿ. ಕುಮಾರಸ್ವಾಮಿ. <p>ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷದಂತೆಯೇ ಇದೀಗ ಕೇಂದ್ರ ಬಿಜೆಪಿ ಸರ್ಕಾರವು ತನಿಖಾ ಸಂಸ್ಥೆಗಳನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ. ದೇಶದಲ್ಲಿ ಕಳೆದ ಎರಡು ವರ್ಷಗಳಲ್ಲಿ ಬಡತನ ಮತ್ತು ನಿರುದ್ಯೋಗ ಸಮಸ್ಯೆಗಳು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.</p><p>ದೇಶದಲ್ಲಿ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಗಳು ನಡೆದರೆ ಹಾಗೂ ಇವಿಎಂಗಳನ್ನು ಅಕ್ರಮ ಎಸಗಲು (ಟ್ಯಾಂಪರಿಂಗ್) ಬಳಸದಿದ್ದರೆ ದೇಶದಲ್ಲಿ ಬಿಜೆಪಿ ಗೆಲ್ಲುವು ಸುಲಭವಲ್ಲ ಎಂದು ಹೇಳಿದ್ದಾರೆ.</p>.ಪಕ್ಷದ ಪ್ರಚಾರದ ಹಾಡಿಗೆ ನಿಷೇಧ ಹೇರಿದ ಚುನಾವಣಾ ಆಯೋಗ: ಎಎಪಿ ಆರೋಪ.ಬಾಲರಾಮನ ತಿರಸ್ಕರಿಸಿದವರನ್ನು ಜನರು ಒಪ್ಪಿಕೊಳ್ಳಲಾರರು: ಕಾಂಗ್ರೆಸ್ ವಿರುದ್ಧ ಮೋದಿ. <p>ದೇಶದ ಗಡಿಗಳ ಭದ್ರತೆ, ಬಡತನ ಮತ್ತು ಭ್ರಷ್ಟಚಾರ ನಿರ್ಮೂಲನೆ, ಉದ್ಯೋಗ ಸೃಷ್ಟಿ ಯಾವುದೇ ವಿಚಾರಗಳಲ್ಲಿ ನೀಡಿದ ಭರವಸೆಗಳನ್ನು ಬಿಜೆಪಿ ಈಡೇರಿಸಲಿಲ್ಲ ಎಂದು ಮಾಯಾವತಿ ಕಿಡಿಕಾರಿದ್ದಾರೆ.</p><p>ಕಾಂಗ್ರೆಸ್ ದಲಿತರು, ಆದಿವಾಸಿಗಳು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡದ ಕಾರಣ ನಮ್ಮ ಪಕ್ಷವನ್ನು ಸ್ಥಾಪಿಸಲಾಯಿತು ಎಂದಿದ್ದಾರೆ. </p><p> ಕಾಂಗ್ರೆಸ್ ಜಾತಿವಾದಿ, ಕೋಮುವಾದಿ, ಬಂಡವಾಳಶಾಹಿ ಮನಸ್ಥಿತಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>