<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.</p>.<p>ನಗರದ ಫಿರೋಜ್ಶಾ ಕೋಟ್ಲಾ ಕ್ರೀಡಾಂಗಣದ ಬಳಿ ಜಮಾಯಿಸಿದ್ದ ಬಿಜೆಪಿ ಮುಖಂಡರು ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಘೋಷಣೆಗಳನ್ನು ಕೂಗುತ್ತ ದೆಹಲಿ ಸೆಕ್ರೆಟರಿಯೇಟ್ ಕಡೆಗೆ ಸಾಗಿದರು.</p><p>ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಆದ್ದರಿಂದ ಅವರು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಮತ್ತು ತಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಸಂಸದ ಹರ್ಷವರ್ಧನ್ ಒತ್ತಾಯಿಸಿದ್ದಾರೆ.</p><p>ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ಕೇಜ್ರಿವಾಲ್ ಅವರು ತಮ್ಮ ಸಚಿವರಿಗೆ ನಿರ್ದೇಶನಗಳನ್ನು ನೀಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ, ಮುಖ್ಯಮಂತ್ರಿಯೊಬ್ಬರು ಬಂಧನದಲ್ಲಿರುವಾಗ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಎಎಪಿ ನಾಟಕವನ್ನು ಸೃಷ್ಟಿಸುತ್ತಿದೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.</p><p>'ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು 'ಮೊಹಲ್ಲಾ' ಕ್ಲಿನಿಕ್ಗಳಲ್ಲಿ ಜನರಿಗೆ ಔಷಧಿ ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೇಜ್ರಿವಾಲ್ ನಿರ್ದೇಶನ ನೀಡಿದ್ದಾರೆ' ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ತಿಳಿಸಿದ್ದಾರೆ.</p><p>ನಗರದ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಂತೆ ಇ.ಡಿ ಕಸ್ಟಡಿಯಲ್ಲಿರುವ ಸಿಎಂ ಕೇಜ್ರಿವಾಲ್ ಅವರು ನಿರ್ದೇಶಿಸಿದ್ದಾರೆ ಎಂದು ಮಾರ್ಚ್ 24ರಂದು ಸಚಿವೆ ಅತಿಶಿ ಹೇಳಿದ್ದರು.</p><p>ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.</p>.<p>ನಗರದ ಫಿರೋಜ್ಶಾ ಕೋಟ್ಲಾ ಕ್ರೀಡಾಂಗಣದ ಬಳಿ ಜಮಾಯಿಸಿದ್ದ ಬಿಜೆಪಿ ಮುಖಂಡರು ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಘೋಷಣೆಗಳನ್ನು ಕೂಗುತ್ತ ದೆಹಲಿ ಸೆಕ್ರೆಟರಿಯೇಟ್ ಕಡೆಗೆ ಸಾಗಿದರು.</p><p>ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಆದ್ದರಿಂದ ಅವರು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಮತ್ತು ತಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಸಂಸದ ಹರ್ಷವರ್ಧನ್ ಒತ್ತಾಯಿಸಿದ್ದಾರೆ.</p><p>ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ಕೇಜ್ರಿವಾಲ್ ಅವರು ತಮ್ಮ ಸಚಿವರಿಗೆ ನಿರ್ದೇಶನಗಳನ್ನು ನೀಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ, ಮುಖ್ಯಮಂತ್ರಿಯೊಬ್ಬರು ಬಂಧನದಲ್ಲಿರುವಾಗ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಎಎಪಿ ನಾಟಕವನ್ನು ಸೃಷ್ಟಿಸುತ್ತಿದೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.</p><p>'ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು 'ಮೊಹಲ್ಲಾ' ಕ್ಲಿನಿಕ್ಗಳಲ್ಲಿ ಜನರಿಗೆ ಔಷಧಿ ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೇಜ್ರಿವಾಲ್ ನಿರ್ದೇಶನ ನೀಡಿದ್ದಾರೆ' ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ತಿಳಿಸಿದ್ದಾರೆ.</p><p>ನಗರದ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಂತೆ ಇ.ಡಿ ಕಸ್ಟಡಿಯಲ್ಲಿರುವ ಸಿಎಂ ಕೇಜ್ರಿವಾಲ್ ಅವರು ನಿರ್ದೇಶಿಸಿದ್ದಾರೆ ಎಂದು ಮಾರ್ಚ್ 24ರಂದು ಸಚಿವೆ ಅತಿಶಿ ಹೇಳಿದ್ದರು.</p><p>ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>