ಗುರುಗ್ರಾಮ: ಇಸ್ಲಾಂ ವಿರುದ್ಧ ಮಾಡಿದ್ದ ಟ್ವೀಟ್ಗೆ ಸಂಬಂಧಿಸಿದಂತೆ ಹರಿಯಾಣ ಐ.ಟಿ ಘಟಕದ ಉಸ್ತುವಾರಿಯಾಗಿದ್ದ ಅರುಣ್ ಯಾದವ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ.
ಅರುಣ್ ಯಾದವ್ ಅವರನ್ನು ಪದಚ್ಯುತಿಗೊಳಿಸಿರುವ ಕುರಿತುಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಒ.ಪಿ.ಧನ್ಕರ್ ಹೇಳಿಕೆ ನೀಡಿದ್ದಾರೆ. ಆದರೆ, ಇದಕ್ಕೆ ಯಾವುದೇ ಕಾರಣ ನೀಡಿಲ್ಲ.
ಯಾದವ್ ಅವರು 2017ರಲ್ಲಿ ಮಾಡಿದ್ದ ಟ್ವೀಟ್ ಈಚೆಗೆ ಸಾಮಾಜಿಕ ಜಾಲತಾಣ ದಲ್ಲಿ ಸಾಕಷ್ಟು ಹರಿದಾಡಿತ್ತು. ಇದರ ಹಿಂದೆಯೇ ಅವರನ್ನು ಬಂಧಿಸಬೇಕು ಎಂಬ ಆಗ್ರಹವು ವ್ಯಾಪಕವಾಗಿ ಕೇಳಿಬಂದಿತ್ತು. ಆದರೆ, ಯಾದವ್ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ.