ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಶಾಸಕ ರಾಜಾ ಸಿಂಗ್ ಅಮಾನತು ಹಿಂಪಡೆದ ಬಿಜೆಪಿ

Published 22 ಅಕ್ಟೋಬರ್ 2023, 13:01 IST
Last Updated 22 ಅಕ್ಟೋಬರ್ 2023, 13:01 IST
ಅಕ್ಷರ ಗಾತ್ರ

ಹೈದರಾಭಾದ್‌: ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ಕ್ರಮವನ್ನು ಬಿಜೆಪಿ ಶಿಸ್ತು ಸಮಿತಿ ಭಾನುವಾರ ಹಿಂಪಡೆದಿದೆ.

2022ರ ಆಗಸ್ಟ್​ನಲ್ಲಿ ಅವರನ್ನು ಬಿಜೆಪಿ ಅಮಾನತುಗೊಳಿಸಿತ್ತು. ಪ್ರವಾದಿ ಮಹಮ್ಮದ್‌ರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಿಜೆಪಿ ಪಕ್ಷ ಈ ಕ್ರಮಕೈಗೊಂಡಿತ್ತು.

ಇದಕ್ಕಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಿಜೆಪಿಯ ಉನ್ನತ ನಾಯಕರಿಗೆ ರಾಜಾ ಸಿಂಗ್‌ ಧನ್ಯವಾದ ಅರ್ಪಿಸಿದ್ದಾರೆ 

ಶಾಸಕ ಟಿ ರಾಜಾ ಸಿಂಗ್ ಅವರಿಗೆ ಹೈದರಾಬಾದ್‌ನಲ್ಲಿ ಬಿಜೆಪಿ ಟಿಕೆಟ್‌ ನೀಡಲಿದೆ. ತೆಲಂಗಾಣ ಬಿಜೆಪಿಯಲ್ಲಿ ರಾಜಾ ಸಿಂಗ್‌ ‘ಫೈರ್‌ ಬ್ರ್ಯಾಂಡ್‌‘ ಎಂದೇ ಖ್ಯಾತಿಯಾಗಿದ್ದಾರೆ.

ಈ ಸಲದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಆರ್‌ಎಸ್‌, ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಪೈಪೋಟಿ ಇರಲಿದೆ. ಬಿಜೆಪಿ ಮೂರನೇ ಸ್ಥಾನದಲ್ಲಿರಲಿದೆ ಎಂದು ಸಮೀಕ್ಷೆಗಳು ಹೇಳಿವೆ. 

ತೆಲಂಗಾಣದಲ್ಲಿ ನವೆಂಬರ್ 30 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT