<p><strong>ತಿರುವನಂತಪುರ</strong>: ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದ ಜಾಹಿರಾತು ಫಲಕಗಳನ್ನು ಪಾದಚಾರಿ ರಸ್ತೆಗಳಲ್ಲಿ ಅಳವಡಿಸಿದ್ದ ಬಿಜೆಪಿಗೆ ತನ್ನದೇ ಆಡಳಿತವಿರುವ ತಿರುವನಂತಪುರ ನಗರ ಪಾಲಿಕೆಯು ದಂಡ ವಿಧಿಸಿ, ದೂರು ದಾಖಲಿಸಿದೆ.</p>.<p>ತಿರುವನಂತಪುರ ನಗರ ಪಾಲಿಕೆ ಕಾರ್ಯದರ್ಶಿ ನೀಡಿರುವ ದೂರಿನ ಆಧಾರದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕರಮನ ಜಯನ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p>ಕೇರಳ ಹೈಕೋರ್ಟ್ನ ಹಲವು ಆದೇಶಗಳು ಮತ್ತು ಸ್ಥಳೀಯ ಸಂಸ್ಥೆಯ ನಿರ್ದೇಶನಗಳನ್ನು ಉಲ್ಲಂಘಿಸಿ ಬಿಜೆಪಿ ಜಿಲ್ಲಾ ಘಟಕವು ಪಾದಚಾರಿ ರಸ್ತೆಗಳಲ್ಲಿ ಜಾಹಿರಾತು ಫಲಕಗಳನ್ನು ಅಳವಡಿಸಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>ಇದರೊಂದಿಗೆ ನಗರ ಪಾಲಿಕೆಯು ₹19.7 ಲಕ್ಷ ದಂಡವನ್ನೂ ವಿಧಿಸಿದೆ. ‘ಫ್ಲೆಕ್ಸ್ಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ತೆರವುಗೊಳಿಸದ ಕಾರಣ ದಂಡ ವಿಧಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದ ಜಾಹಿರಾತು ಫಲಕಗಳನ್ನು ಪಾದಚಾರಿ ರಸ್ತೆಗಳಲ್ಲಿ ಅಳವಡಿಸಿದ್ದ ಬಿಜೆಪಿಗೆ ತನ್ನದೇ ಆಡಳಿತವಿರುವ ತಿರುವನಂತಪುರ ನಗರ ಪಾಲಿಕೆಯು ದಂಡ ವಿಧಿಸಿ, ದೂರು ದಾಖಲಿಸಿದೆ.</p>.<p>ತಿರುವನಂತಪುರ ನಗರ ಪಾಲಿಕೆ ಕಾರ್ಯದರ್ಶಿ ನೀಡಿರುವ ದೂರಿನ ಆಧಾರದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕರಮನ ಜಯನ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p>ಕೇರಳ ಹೈಕೋರ್ಟ್ನ ಹಲವು ಆದೇಶಗಳು ಮತ್ತು ಸ್ಥಳೀಯ ಸಂಸ್ಥೆಯ ನಿರ್ದೇಶನಗಳನ್ನು ಉಲ್ಲಂಘಿಸಿ ಬಿಜೆಪಿ ಜಿಲ್ಲಾ ಘಟಕವು ಪಾದಚಾರಿ ರಸ್ತೆಗಳಲ್ಲಿ ಜಾಹಿರಾತು ಫಲಕಗಳನ್ನು ಅಳವಡಿಸಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>ಇದರೊಂದಿಗೆ ನಗರ ಪಾಲಿಕೆಯು ₹19.7 ಲಕ್ಷ ದಂಡವನ್ನೂ ವಿಧಿಸಿದೆ. ‘ಫ್ಲೆಕ್ಸ್ಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ತೆರವುಗೊಳಿಸದ ಕಾರಣ ದಂಡ ವಿಧಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>