<p><strong>ಶ್ರೀನಗರ:</strong> ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಬಿಜೆಪಿ ಮುಖಂಡ ಮತ್ತು ಸರಪಂಚ ಸಜಾದ್ ಅಹ್ಮದ್ ಖಂಡೆಯನ್ನು ಅವರ ಮನೆಯ ಬಳಿ ಗುರುವಾರ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆ ಪ್ರದೇಶವನ್ನು ಉಗ್ರರು ಸೂಕ್ಷ್ಮವಾಗಿ ಗಮನಿಸಿದಂತೆ ಕಂಡುಬರುತ್ತದೆ. ಶ್ರೀನಗರದಿಂದ 60 ಕಿ.ಮೀ ದೂರದಲ್ಲಿರುವ ಖಾಜಿಗುಂಡ್ ಪ್ರದೇಶದ ವೆಸ್ಸು ಎಂಬ ಸ್ಥಳದಿಂದ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಖಂಡೆ ಅವರನ್ನು ಕೂಡಲೇ ಅನಂತ್ನಾಗ್ ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.</p>.<p>ಕುಲ್ಗಾಂ ಜಿಲ್ಲೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದಪಂಚಾಯತ್ ಸದಸ್ಯ ಆರಿಫ್ ಅಹ್ಮದ್ ಖಾನ್ ಅವರಿಗೆ ಗುಂಡಿಕ್ಕಿದ 48 ಗಂಟೆಗಳ ನಂತರ ಈ ಘಟನೆ ನಡೆದಿದೆ. ಸದ್ಯ ಆರಿಫ್ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಬಿಜೆಪಿ ಮುಖಂಡ ಮತ್ತು ಸರಪಂಚ ಸಜಾದ್ ಅಹ್ಮದ್ ಖಂಡೆಯನ್ನು ಅವರ ಮನೆಯ ಬಳಿ ಗುರುವಾರ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆ ಪ್ರದೇಶವನ್ನು ಉಗ್ರರು ಸೂಕ್ಷ್ಮವಾಗಿ ಗಮನಿಸಿದಂತೆ ಕಂಡುಬರುತ್ತದೆ. ಶ್ರೀನಗರದಿಂದ 60 ಕಿ.ಮೀ ದೂರದಲ್ಲಿರುವ ಖಾಜಿಗುಂಡ್ ಪ್ರದೇಶದ ವೆಸ್ಸು ಎಂಬ ಸ್ಥಳದಿಂದ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಖಂಡೆ ಅವರನ್ನು ಕೂಡಲೇ ಅನಂತ್ನಾಗ್ ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.</p>.<p>ಕುಲ್ಗಾಂ ಜಿಲ್ಲೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದಪಂಚಾಯತ್ ಸದಸ್ಯ ಆರಿಫ್ ಅಹ್ಮದ್ ಖಾನ್ ಅವರಿಗೆ ಗುಂಡಿಕ್ಕಿದ 48 ಗಂಟೆಗಳ ನಂತರ ಈ ಘಟನೆ ನಡೆದಿದೆ. ಸದ್ಯ ಆರಿಫ್ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>