<p><strong>ಹೈದರಾಬಾದ್:</strong> ಫೆ. 27 ರಂದು ತೆಲಂಗಾಣ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಇಬ್ಬರು ಗೆಲುವು ಸಾಧಿಸಿದ್ದಾರೆ. ಒಂದು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯ ಪಾಲಾಗಿದ್ದು, ಆಡಳಿತರೂಢ ಕಾಂಗ್ರೆಸ್ ಯಾವುದೇ ಸ್ಥಾನ ಗೆಲ್ಲುವಲ್ಲಿ ವಿಫಲವಾಗಿದೆ.</p>.ತೆಲಂಗಾಣ ಸುರಂಗ ದುರಂತ: ರಕ್ಷಣಾ ಕಾರ್ಯಾಚರಣೆಗಿಳಿದ ಕೇರಳದ ಕೆಡಾವರ್ ನಾಯಿಗಳು.<p>ಮೇಡಕ್–ನಿಜಾಮಾಬಾದ್–ಅದಿಲಾಬಾದ್–ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್ನ ನರೇಂದ್ರ ರೆಡ್ಡಿ ವಿರುದ್ಧ 5 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದಿದ್ದಾರೆ.</p><p>ಮೇಡಕ್-ನಿಜಾಮಾಬಾದ್-ಆದಿಲಾಬಾದ್-ಕರೀಂನಗರ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳು ಮತ್ತು ವಾರಂಗಲ್-ಖಮ್ಮಮ್-ನಲ್ಗೊಂಡ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. </p><p> ಮೇಡಕ್-ನಿಜಾಮಾಬಾದ್-ಅದಿಲಾಬಾದ್-ಕರೀಂನಗರ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಮಲ್ಕಾ ಕೊಮರಯ್ಯ ಗೆಲುವು ಸಾಧಿಸಿದ್ದಾರೆ.</p>.ತೆಲಂಗಾಣ ಸುರಂಗ ಕುಸಿತ | ಸತತ 11ನೇ ದಿನವೂ ಮುಂದುವರಿದ ರಕ್ಷಣಾ ಕಾರ್ಯಾಚರಣೆ.<p>ವಾರಂಗಲ್-ಖಮ್ಮಮ್-ನಲ್ಗೊಂಡ ಶಿಕ್ಷಕರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ ಶ್ರೀಪಾಲ್ ರೆಡ್ಡಿ ಪಿಂಗಿಲಿ (ಶಿಕ್ಷಕರ ಸಂಘದಿಂದ ಬೆಂಬಲಿತ) ಗೆದ್ದಿದ್ದಾರೆ.</p><p>ಎರಡು ಶಿಕ್ಷಕರ ಕ್ಷೇತ್ರಗಳ ಫಲಿತಾಂಶಗಳನ್ನು ಸೋಮವಾರ ಘೋಷಿಸಲಾಗಿತ್ತು.</p><p>ಮಾನ್ಯ ಮತ್ತು ಅಮಾನ್ಯ ಮತಗಳನ್ನು ಪ್ರತ್ಯೇಕಿಸಿ, ನಂತರ ಆದ್ಯತೆಯ ಮತಗಳನ್ನು ಎಣಿಕೆ ಮಾಡಬೇಕಿದ್ದರಿಂದ ಮತ ಎಣಿಕೆ ವಿಳಂಬವಾಗಿತ್ತು.</p><p>ಮೂರು ಎಂಎಲ್ಸಿ ಸ್ಥಾನಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದಲ್ಲಿ ಬಿಜೆಪಿಗೆ ನೈತಿಕ ಸ್ಥೈರ್ಯವನ್ನು ನೀಡಿದೆ.</p>.ಶಾಲೆಗಳಲ್ಲಿ ತೆಲುಗು ಭಾಷೆ ಬೋಧನೆ, ಕಲಿಕೆ ಕಡ್ಡಾಯ: ತೆಲಂಗಾಣ ಸರ್ಕಾರ ಆದೇಶ.<p>ಬಿಜೆಪಿ ಮೂರು ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆಡಳಿತಾರೂಢ ಕಾಂಗ್ರೆಸ್ ಪದವೀಧರರ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿಯನ್ನು ಹಾಕಿತ್ತು. ಬಿಆರ್ಎಸ್ ಚುನಾವಣೆಯಿಂದ ದೂರ ಉಳಿದಿತ್ತು.</p><p>ಕೇಂದ್ರ ಸಚಿವರಾದ ಜಿ ಕಿಶನ್ ರೆಡ್ಡಿ, ಬಂಡಿ ಸಂಜಯ್ ಕುಮಾರ್ ಮತ್ತು ಇತರ ಬಿಜೆಪಿ ನಾಯಕರು ಚುನಾವಣೆಯಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದರು.</p><p>ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿ ಮಹೇಶ್ ಕುಮಾರ್ ಗೌಡ್ ಮತ್ತು ಇತರ ಹಿರಿಯ ಪಕ್ಷದ ನಾಯಕರು ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಬೆಂಬಲಿಸಿ ಪ್ರಚಾರ ನಡೆಸಿದ್ದರು.</p> .ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದವನ ಬರ್ಬರ ಕೊಲೆ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಫೆ. 27 ರಂದು ತೆಲಂಗಾಣ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಇಬ್ಬರು ಗೆಲುವು ಸಾಧಿಸಿದ್ದಾರೆ. ಒಂದು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯ ಪಾಲಾಗಿದ್ದು, ಆಡಳಿತರೂಢ ಕಾಂಗ್ರೆಸ್ ಯಾವುದೇ ಸ್ಥಾನ ಗೆಲ್ಲುವಲ್ಲಿ ವಿಫಲವಾಗಿದೆ.</p>.ತೆಲಂಗಾಣ ಸುರಂಗ ದುರಂತ: ರಕ್ಷಣಾ ಕಾರ್ಯಾಚರಣೆಗಿಳಿದ ಕೇರಳದ ಕೆಡಾವರ್ ನಾಯಿಗಳು.<p>ಮೇಡಕ್–ನಿಜಾಮಾಬಾದ್–ಅದಿಲಾಬಾದ್–ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್ನ ನರೇಂದ್ರ ರೆಡ್ಡಿ ವಿರುದ್ಧ 5 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದಿದ್ದಾರೆ.</p><p>ಮೇಡಕ್-ನಿಜಾಮಾಬಾದ್-ಆದಿಲಾಬಾದ್-ಕರೀಂನಗರ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳು ಮತ್ತು ವಾರಂಗಲ್-ಖಮ್ಮಮ್-ನಲ್ಗೊಂಡ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. </p><p> ಮೇಡಕ್-ನಿಜಾಮಾಬಾದ್-ಅದಿಲಾಬಾದ್-ಕರೀಂನಗರ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಮಲ್ಕಾ ಕೊಮರಯ್ಯ ಗೆಲುವು ಸಾಧಿಸಿದ್ದಾರೆ.</p>.ತೆಲಂಗಾಣ ಸುರಂಗ ಕುಸಿತ | ಸತತ 11ನೇ ದಿನವೂ ಮುಂದುವರಿದ ರಕ್ಷಣಾ ಕಾರ್ಯಾಚರಣೆ.<p>ವಾರಂಗಲ್-ಖಮ್ಮಮ್-ನಲ್ಗೊಂಡ ಶಿಕ್ಷಕರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ ಶ್ರೀಪಾಲ್ ರೆಡ್ಡಿ ಪಿಂಗಿಲಿ (ಶಿಕ್ಷಕರ ಸಂಘದಿಂದ ಬೆಂಬಲಿತ) ಗೆದ್ದಿದ್ದಾರೆ.</p><p>ಎರಡು ಶಿಕ್ಷಕರ ಕ್ಷೇತ್ರಗಳ ಫಲಿತಾಂಶಗಳನ್ನು ಸೋಮವಾರ ಘೋಷಿಸಲಾಗಿತ್ತು.</p><p>ಮಾನ್ಯ ಮತ್ತು ಅಮಾನ್ಯ ಮತಗಳನ್ನು ಪ್ರತ್ಯೇಕಿಸಿ, ನಂತರ ಆದ್ಯತೆಯ ಮತಗಳನ್ನು ಎಣಿಕೆ ಮಾಡಬೇಕಿದ್ದರಿಂದ ಮತ ಎಣಿಕೆ ವಿಳಂಬವಾಗಿತ್ತು.</p><p>ಮೂರು ಎಂಎಲ್ಸಿ ಸ್ಥಾನಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದಲ್ಲಿ ಬಿಜೆಪಿಗೆ ನೈತಿಕ ಸ್ಥೈರ್ಯವನ್ನು ನೀಡಿದೆ.</p>.ಶಾಲೆಗಳಲ್ಲಿ ತೆಲುಗು ಭಾಷೆ ಬೋಧನೆ, ಕಲಿಕೆ ಕಡ್ಡಾಯ: ತೆಲಂಗಾಣ ಸರ್ಕಾರ ಆದೇಶ.<p>ಬಿಜೆಪಿ ಮೂರು ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆಡಳಿತಾರೂಢ ಕಾಂಗ್ರೆಸ್ ಪದವೀಧರರ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿಯನ್ನು ಹಾಕಿತ್ತು. ಬಿಆರ್ಎಸ್ ಚುನಾವಣೆಯಿಂದ ದೂರ ಉಳಿದಿತ್ತು.</p><p>ಕೇಂದ್ರ ಸಚಿವರಾದ ಜಿ ಕಿಶನ್ ರೆಡ್ಡಿ, ಬಂಡಿ ಸಂಜಯ್ ಕುಮಾರ್ ಮತ್ತು ಇತರ ಬಿಜೆಪಿ ನಾಯಕರು ಚುನಾವಣೆಯಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದರು.</p><p>ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿ ಮಹೇಶ್ ಕುಮಾರ್ ಗೌಡ್ ಮತ್ತು ಇತರ ಹಿರಿಯ ಪಕ್ಷದ ನಾಯಕರು ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಬೆಂಬಲಿಸಿ ಪ್ರಚಾರ ನಡೆಸಿದ್ದರು.</p> .ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದವನ ಬರ್ಬರ ಕೊಲೆ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>