<p><strong>ಕೋಲ್ಕತ್ತ:</strong> ಪಹಲ್ಗಾಮ್ ದಾಳಿಯ ನಂತರ ಭಾರತದಲ್ಲಿ ಅಕ್ರಮವಾಗಿ ವಾಸವಾಗಿರುವ ಪಾಕಿಸ್ತಾನಿ ನಾಗರಿಕರನ್ನು ಗಡೀಪಾರು ಮಾಡಲಾಗುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನಿಯರನ್ನು ಗುರುತಿಸಿ, ಗಡೀಪಾರು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.</p><p> ದಕ್ಷಿಣ 24 ಪರಗಣ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿ ಬಿಜೆಪಿ ಹಿರಿಯ ನಾಯಕ ದೆಬಶ್ರಿ ಚೌದರಿ ನೇತೃತ್ವದಲ್ಲಿ 200ಕ್ಕೂ ಅಧಿಕ ಬೆಂಬಲಿಗರು ಇಂದು ಪ್ರತಿಭಟನೆ ಮಾಡಿದರು. </p><p>ಭಾರತದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನಿ ನಾಗರಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಕೇಂದ್ರ ಗೃಹಸಚಿವ ಅಮಿತ್ ಶಾ ಆದೇಶ ನೀಡಿದರೂ, ರಾಜ್ಯ ಸರ್ಕಾರವು ತೀವ್ರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p><p> ದಕ್ಷಿಣ 24 ಪರಗಣ ಜಿಲ್ಲೆ ಸೇರಿದಂತೆ ಪಶ್ಚಿಮ ಬಂಗಾಳದೆಲ್ಲೆಡೆ ಅಡಗಿರುವ ಕುರಿತು ನಮಗೆ ನಂಬಿಕೆಯಿದೆ. ಅವರನ್ನು ಗಡೀಪಾರು ಮಾಡುವಂತೆ ನಾವು ಆಗ್ರಹಿಸುತ್ತೇವೆ ಎಂದು ಮಾಜಿ ಕೇಂದ್ರ ಸಚಿವರಾಗಿರುವ ಚೌದರಿ ಅವರು ಆಗ್ರಹಿಸಿದರು.</p><p>ಪ್ರತಿಭಟನೆ ನಡೆಯುತ್ತಿದ್ದ ಜಿಲ್ಲಾ ನ್ಯಾಯಾಲಯದ ಸಮೀಪದಲ್ಲೇ ಪಶ್ಚಿಮ ಬಂಗಾಳ ಪೊಲೀಸ್ ಮುಖ್ಯ ಕಚೇರಿ ‘ಭವಾನಿ ಭವನ್’ಸಮೀಪ ವಾಹನ ಸಂಚಾರಕ್ಕೆ ಅಡತಡೆಯಾದ ಕಾರಣ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. </p><p>ಏ.22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, 25ಜನರು ಗಂಭೀರ ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ, ಕಾಶ್ಮೀರದಲ್ಲಿನ ಭಯೋತ್ಪಾದನೆ ಕೃತ್ಯಗಳಲ್ಲಿ ಪಾಕಿಸ್ತಾನದ ಕೈವಾಡವಿದ್ದು, ಉಗ್ರರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ಕೇಂದ್ರ ಸರ್ಕಾರವು ಹೇಳಿದೆ.</p>.‘ಪಹಲ್ಗಾಮ್ ಪ್ರಕರಣ: ಮುನ್ನೆಚ್ಚರಿಕೆ ಅಗತ್ಯ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಹಲ್ಗಾಮ್ ದಾಳಿಯ ನಂತರ ಭಾರತದಲ್ಲಿ ಅಕ್ರಮವಾಗಿ ವಾಸವಾಗಿರುವ ಪಾಕಿಸ್ತಾನಿ ನಾಗರಿಕರನ್ನು ಗಡೀಪಾರು ಮಾಡಲಾಗುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನಿಯರನ್ನು ಗುರುತಿಸಿ, ಗಡೀಪಾರು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.</p><p> ದಕ್ಷಿಣ 24 ಪರಗಣ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿ ಬಿಜೆಪಿ ಹಿರಿಯ ನಾಯಕ ದೆಬಶ್ರಿ ಚೌದರಿ ನೇತೃತ್ವದಲ್ಲಿ 200ಕ್ಕೂ ಅಧಿಕ ಬೆಂಬಲಿಗರು ಇಂದು ಪ್ರತಿಭಟನೆ ಮಾಡಿದರು. </p><p>ಭಾರತದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನಿ ನಾಗರಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಕೇಂದ್ರ ಗೃಹಸಚಿವ ಅಮಿತ್ ಶಾ ಆದೇಶ ನೀಡಿದರೂ, ರಾಜ್ಯ ಸರ್ಕಾರವು ತೀವ್ರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p><p> ದಕ್ಷಿಣ 24 ಪರಗಣ ಜಿಲ್ಲೆ ಸೇರಿದಂತೆ ಪಶ್ಚಿಮ ಬಂಗಾಳದೆಲ್ಲೆಡೆ ಅಡಗಿರುವ ಕುರಿತು ನಮಗೆ ನಂಬಿಕೆಯಿದೆ. ಅವರನ್ನು ಗಡೀಪಾರು ಮಾಡುವಂತೆ ನಾವು ಆಗ್ರಹಿಸುತ್ತೇವೆ ಎಂದು ಮಾಜಿ ಕೇಂದ್ರ ಸಚಿವರಾಗಿರುವ ಚೌದರಿ ಅವರು ಆಗ್ರಹಿಸಿದರು.</p><p>ಪ್ರತಿಭಟನೆ ನಡೆಯುತ್ತಿದ್ದ ಜಿಲ್ಲಾ ನ್ಯಾಯಾಲಯದ ಸಮೀಪದಲ್ಲೇ ಪಶ್ಚಿಮ ಬಂಗಾಳ ಪೊಲೀಸ್ ಮುಖ್ಯ ಕಚೇರಿ ‘ಭವಾನಿ ಭವನ್’ಸಮೀಪ ವಾಹನ ಸಂಚಾರಕ್ಕೆ ಅಡತಡೆಯಾದ ಕಾರಣ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. </p><p>ಏ.22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, 25ಜನರು ಗಂಭೀರ ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ, ಕಾಶ್ಮೀರದಲ್ಲಿನ ಭಯೋತ್ಪಾದನೆ ಕೃತ್ಯಗಳಲ್ಲಿ ಪಾಕಿಸ್ತಾನದ ಕೈವಾಡವಿದ್ದು, ಉಗ್ರರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ಕೇಂದ್ರ ಸರ್ಕಾರವು ಹೇಳಿದೆ.</p>.‘ಪಹಲ್ಗಾಮ್ ಪ್ರಕರಣ: ಮುನ್ನೆಚ್ಚರಿಕೆ ಅಗತ್ಯ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>