<p><strong>ನವದೆಹಲಿ</strong>: ಭಾರತದಲ್ಲಿ ತಯಾರಾದ ಉತ್ಪನ್ನಗಳಿಗೆ ಉತ್ತೇಜನ ನೀಡುವ ಸಲುವಾಗಿ ರಾಷ್ಟ್ರದಾದ್ಯಂತ ಮೂರು ತಿಂಗಳ ಅಭಿಯಾನಕ್ಕೆ ಬಿಜೆಪಿ ಗುರುವಾರ ಚಾಲನೆ ನೀಡಿದೆ.</p><p>ಪಂಡಿತ್ ದೀನ ದಯಾಳ್ ಉಪಾದ್ಯಾಯ ಅವರ ಜನ್ಮ ದಿನದಂದು (ಸೆ.25ರಂದು) ಆರಂಭವಾಗಿರುವ ಈ ಸ್ವದೇಶಿ ಅಭಿಯಾನವು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದವರೆಗೂ (ಡಿ.25ರಂದು) ನಡೆಯಲಿದೆ.</p><p>ಈ ಅಭಿಯಾನದ ವೇಳೆ ಬಿಜೆಪಿ ಕಾರ್ಯಕರ್ತರು ದೇಶದಾದ್ಯಂತ ಮನೆಮನೆಗೆ ಭೇಟಿ ನೀಡಿ, ಸ್ವದೇಶಿ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಲಿದ್ದಾರೆ.</p><p>ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿರುವ ಪ್ರಧಾನ ಕಾರ್ಯದರ್ಶೀ ಅರುಣ್ ಸಿಂಗ್ ಅವರು, ಅಭಿಯಾನವು ಸುಮಾರು 20 ಸಾವಿರ 'ಆತ್ಮನಿರ್ಭರ ಭಾರತ ಸಂಕಲ್ಪ' ಕಾರ್ಯಕ್ರಮಗಳು, 1,000 ಉತ್ಸವ, 500 'ಸಂಕಲ್ಪ ರಥ' ಕಾರ್ಯಕ್ರಮಗಳನ್ನು ಒಳಗೊಂಡಿರಲಿದೆ. ಈ ಉಪಕ್ರಮವನ್ನು ಸೆಲೆಬ್ರಿಟಿಗಳು, ಸಾಮಾಜಿಕ ಮಾಧ್ಯಮ ಇನ್ಫ್ಲುಯೆನ್ಸರ್ಗಳು ಆನ್ಲೌನ್ ಮೂಲಕ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.</p><p>'ನಾವು ಯಾವುದೇ ಉತ್ಪನ್ನಗಳನ್ನು ಬಹಿಷ್ಕರಿಸುತ್ತಿಲ್ಲ. ಬದಲಾಗಿ, ನಮ್ಮ ನಾಗರಿಕರ ಶ್ರಮವನ್ನು ಪ್ರತಿಬಿಂಬಿಸುವ, ಭಾರತದಲ್ಲಿ ತಯಾರಾದ ಉತ್ಪನ್ನಗಳಿಗೆ ಉತ್ತೇಜನ ನೀಡುತ್ತಿದ್ದೇವೆ. ಪಂಡಿತ್ ದೀನ ದಯಾಳ್ ಅವರು ಒತ್ತಿ ಹೇಳುತ್ತಿದ್ದ ಹಾಗೆ, ಈ ವಿಧಾನವು ಆರ್ಥಿಕ ಸ್ವಾವಲಂಬನೆ ಹಾಗೂ ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಪೋಷಿಸುತ್ತದೆ' ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತದಲ್ಲಿ ತಯಾರಾದ ಉತ್ಪನ್ನಗಳಿಗೆ ಉತ್ತೇಜನ ನೀಡುವ ಸಲುವಾಗಿ ರಾಷ್ಟ್ರದಾದ್ಯಂತ ಮೂರು ತಿಂಗಳ ಅಭಿಯಾನಕ್ಕೆ ಬಿಜೆಪಿ ಗುರುವಾರ ಚಾಲನೆ ನೀಡಿದೆ.</p><p>ಪಂಡಿತ್ ದೀನ ದಯಾಳ್ ಉಪಾದ್ಯಾಯ ಅವರ ಜನ್ಮ ದಿನದಂದು (ಸೆ.25ರಂದು) ಆರಂಭವಾಗಿರುವ ಈ ಸ್ವದೇಶಿ ಅಭಿಯಾನವು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದವರೆಗೂ (ಡಿ.25ರಂದು) ನಡೆಯಲಿದೆ.</p><p>ಈ ಅಭಿಯಾನದ ವೇಳೆ ಬಿಜೆಪಿ ಕಾರ್ಯಕರ್ತರು ದೇಶದಾದ್ಯಂತ ಮನೆಮನೆಗೆ ಭೇಟಿ ನೀಡಿ, ಸ್ವದೇಶಿ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಲಿದ್ದಾರೆ.</p><p>ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿರುವ ಪ್ರಧಾನ ಕಾರ್ಯದರ್ಶೀ ಅರುಣ್ ಸಿಂಗ್ ಅವರು, ಅಭಿಯಾನವು ಸುಮಾರು 20 ಸಾವಿರ 'ಆತ್ಮನಿರ್ಭರ ಭಾರತ ಸಂಕಲ್ಪ' ಕಾರ್ಯಕ್ರಮಗಳು, 1,000 ಉತ್ಸವ, 500 'ಸಂಕಲ್ಪ ರಥ' ಕಾರ್ಯಕ್ರಮಗಳನ್ನು ಒಳಗೊಂಡಿರಲಿದೆ. ಈ ಉಪಕ್ರಮವನ್ನು ಸೆಲೆಬ್ರಿಟಿಗಳು, ಸಾಮಾಜಿಕ ಮಾಧ್ಯಮ ಇನ್ಫ್ಲುಯೆನ್ಸರ್ಗಳು ಆನ್ಲೌನ್ ಮೂಲಕ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.</p><p>'ನಾವು ಯಾವುದೇ ಉತ್ಪನ್ನಗಳನ್ನು ಬಹಿಷ್ಕರಿಸುತ್ತಿಲ್ಲ. ಬದಲಾಗಿ, ನಮ್ಮ ನಾಗರಿಕರ ಶ್ರಮವನ್ನು ಪ್ರತಿಬಿಂಬಿಸುವ, ಭಾರತದಲ್ಲಿ ತಯಾರಾದ ಉತ್ಪನ್ನಗಳಿಗೆ ಉತ್ತೇಜನ ನೀಡುತ್ತಿದ್ದೇವೆ. ಪಂಡಿತ್ ದೀನ ದಯಾಳ್ ಅವರು ಒತ್ತಿ ಹೇಳುತ್ತಿದ್ದ ಹಾಗೆ, ಈ ವಿಧಾನವು ಆರ್ಥಿಕ ಸ್ವಾವಲಂಬನೆ ಹಾಗೂ ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಪೋಷಿಸುತ್ತದೆ' ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>