ಬಿಜೆಪಿಯ ಕಿಸಾನ್ ಮೋರ್ಚಾ ಮುಖ್ಯಸ್ಥ ರಾಜ್ಕುಮಾರ್ ಚಹರ್ ಅವರು,ಆರ್ಥಿಕ ಸಂಕಷ್ಟದಿಂದಾಗಿರಾಜ್ಯದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕೆಲವು ರೈತರ ಕುಟುಂಬದವರನ್ನು ಬಠಿಂಡಾದಲ್ಲಿ ಭೇಟಿ ಮಾಡಿದರು. ಈ ವೇಳೆ ವೈಯಕ್ತಿವಾಗಿ ತಕ್ಷಣವೇ ₹ 50,000 ಪರಿಹಾರ ನೀಡುವುದಾಗಿ ಘೋಷಿಸಿದ ಅವರು, ಮೃತರ ಕುಟುಂಬದವರಿಗೆ ಸರ್ಕಾರ ಕೂಡಲೇ ₹ 10 ಲಕ್ಷ ಪರಿಹಾರ ನೀಡಬೇಕು ಮತ್ತು ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.