<p><strong>ನವದೆಹಲಿ</strong>: ಮತಬ್ಯಾಂಕ್ ರಾಜಕೀಯದ ರಹಸ್ಯ ಕಾರ್ಯಸೂಚಿಯ ಭಾಗವಾಗಿ ‘ಇಂಡಿಯಾ’ ಮೈತ್ರಿಕೂಟವು ಸನಾತನ ಧರ್ಮವನ್ನು ಟೀಕಿಸುತ್ತಿದೆ ಎಂದು ಬಿಜೆಪಿ ದೂರಿದೆ.</p>.<p>‘ಪದೇ ಪದೇ ಸನಾತನ ಧರ್ಮಕ್ಕೆ ಅವಹೇಳನ ಮಾಡಲಾಗುತ್ತಿದೆ. ಪ್ರಾಚೀನ ನಂಬಿಕೆ ಮೇಲೆ ದಾಳಿ ನಡೆಸುವುದು ಕಾಂಗ್ರೆಸ್ನ ತಂತ್ರಗಾರಿಕೆಯ ಭಾಗವಾಗಿದೆ. ಈ ಬಗ್ಗೆ ಆ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರತಿಕ್ರಿಯಿಸದೆ ಮೌನಕ್ಕೆ ಜಾರಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ‘ಎಕ್ಸ್’ನಲ್ಲಿ ಆಪಾದಿಸಿದ್ದಾರೆ.</p>.<p>‘ಇಂಡಿಯಾ’ವು ಸನಾತನ ಧರ್ಮದ ಸಿದ್ಧಾಂತವನ್ನು ವಿರೋಧಿಸುತ್ತದೆ ಎಂದು ಹೇಳಿಕೆ ನೀಡಿರುವ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಅವರನ್ನು ಕಮಲ ಪಾಳಯ ತರಾಟೆಗೆ ತೆಗೆದುಕೊಂಡಿದೆ.</p>.<p>ವಿರೋಧ ಪಕ್ಷಗಳಿಗೆ ಸಾಂವಿಧಾನಿಕ ನಿಬಂಧನೆಗಳ ಬಗ್ಗೆ ಅರಿವು ಇಲ್ಲವೇ? ಯಾವುದಾದರೂ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವುದಕ್ಕೆ ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆಯೇ ಎಂಬ ಬಗ್ಗೆ ಕಾಂಗ್ರೆಸ್ ಹಾಗೂ ‘ಇಂಡಿಯಾ’ ನಿಲುವು ಸ್ಪಷ್ಟಪಡಿಸಬೇಕು ಎಂದು ನಡ್ಡಾ ಆಗ್ರಹಿಸಿದ್ದಾರೆ.</p>.<p>‘ಮೊಹಬ್ಬತ್ ಕಿ ದುಕಾನ್‘ನಲ್ಲಿ ಸನಾತನ ಧರ್ಮದ ದ್ವೇಷವನ್ನು ‘ಮಾರಾಟ’ ಮಾಡುತ್ತಿರುವುದು ಏಕೆ ಎಂಬುದಕ್ಕೆ ರಾಹುಲ್ ಉತ್ತರಿಸಬೇಕಿದೆ ಎಂದಿರುವ ಅವರು, ಅಧಿಕಾರಕ್ಕಾಗಿ ಒಡೆದಾಳುವ ನೀತಿಯೇ ಇದರ ಹಿಂದಿರುವ ಮೂಲ ಉದ್ದೇಶವಾಗಿದೆ ಎಂದು ಆಪಾದಿಸಿದ್ದಾರೆ.</p>.<p><strong>ಸೋನಿಯಾ ಮೌನವೇಕೆ?:</strong> ‘ಪ್ರತಿದಿನ ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಅವಮಾನಿಸುತ್ತಿದ್ದರೂ ಸೋನಿಯಾ ಅವರು ಮೌನ ತಳೆದಿರುವುದು ಏಕೆ’ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬಿಹಾರ ಸಚಿವ ಹಾಗೂ ಆರ್ಜೆಡಿ ನಾಯಕ ಚಂದ್ರಶೇಖರ್, ಸಮಾಜವಾದಿ ಪಕ್ಷದ ಸ್ವಾಮಿ ಪ್ರಸಾದ್ ಮೌರಾ ಅವರು ‘ರಾಮಚರಿತಮಾನಸ’ದಂತಹ ಪವಿತ್ರ ಹಿಂದೂ ಗ್ರಂಥಗಳನ್ನು ಟೀಕಿಸುತ್ತಿದ್ದಾರೆ. ಆದರೆ, ಈ ಪಕ್ಷಗಳ ನಾಯಕರು ಕೂಡ ಮೌನವಾಗಿದ್ದಾರೆ. ಇದಕ್ಕೆ ಅವರ ಒಪ್ಪಿಗೆ ಇರುವುದನ್ನು ಇದು ಸೂಚಿಸುತ್ತದೆ ಎಂದು ದೂರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮತಬ್ಯಾಂಕ್ ರಾಜಕೀಯದ ರಹಸ್ಯ ಕಾರ್ಯಸೂಚಿಯ ಭಾಗವಾಗಿ ‘ಇಂಡಿಯಾ’ ಮೈತ್ರಿಕೂಟವು ಸನಾತನ ಧರ್ಮವನ್ನು ಟೀಕಿಸುತ್ತಿದೆ ಎಂದು ಬಿಜೆಪಿ ದೂರಿದೆ.</p>.<p>‘ಪದೇ ಪದೇ ಸನಾತನ ಧರ್ಮಕ್ಕೆ ಅವಹೇಳನ ಮಾಡಲಾಗುತ್ತಿದೆ. ಪ್ರಾಚೀನ ನಂಬಿಕೆ ಮೇಲೆ ದಾಳಿ ನಡೆಸುವುದು ಕಾಂಗ್ರೆಸ್ನ ತಂತ್ರಗಾರಿಕೆಯ ಭಾಗವಾಗಿದೆ. ಈ ಬಗ್ಗೆ ಆ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರತಿಕ್ರಿಯಿಸದೆ ಮೌನಕ್ಕೆ ಜಾರಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ‘ಎಕ್ಸ್’ನಲ್ಲಿ ಆಪಾದಿಸಿದ್ದಾರೆ.</p>.<p>‘ಇಂಡಿಯಾ’ವು ಸನಾತನ ಧರ್ಮದ ಸಿದ್ಧಾಂತವನ್ನು ವಿರೋಧಿಸುತ್ತದೆ ಎಂದು ಹೇಳಿಕೆ ನೀಡಿರುವ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಅವರನ್ನು ಕಮಲ ಪಾಳಯ ತರಾಟೆಗೆ ತೆಗೆದುಕೊಂಡಿದೆ.</p>.<p>ವಿರೋಧ ಪಕ್ಷಗಳಿಗೆ ಸಾಂವಿಧಾನಿಕ ನಿಬಂಧನೆಗಳ ಬಗ್ಗೆ ಅರಿವು ಇಲ್ಲವೇ? ಯಾವುದಾದರೂ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವುದಕ್ಕೆ ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆಯೇ ಎಂಬ ಬಗ್ಗೆ ಕಾಂಗ್ರೆಸ್ ಹಾಗೂ ‘ಇಂಡಿಯಾ’ ನಿಲುವು ಸ್ಪಷ್ಟಪಡಿಸಬೇಕು ಎಂದು ನಡ್ಡಾ ಆಗ್ರಹಿಸಿದ್ದಾರೆ.</p>.<p>‘ಮೊಹಬ್ಬತ್ ಕಿ ದುಕಾನ್‘ನಲ್ಲಿ ಸನಾತನ ಧರ್ಮದ ದ್ವೇಷವನ್ನು ‘ಮಾರಾಟ’ ಮಾಡುತ್ತಿರುವುದು ಏಕೆ ಎಂಬುದಕ್ಕೆ ರಾಹುಲ್ ಉತ್ತರಿಸಬೇಕಿದೆ ಎಂದಿರುವ ಅವರು, ಅಧಿಕಾರಕ್ಕಾಗಿ ಒಡೆದಾಳುವ ನೀತಿಯೇ ಇದರ ಹಿಂದಿರುವ ಮೂಲ ಉದ್ದೇಶವಾಗಿದೆ ಎಂದು ಆಪಾದಿಸಿದ್ದಾರೆ.</p>.<p><strong>ಸೋನಿಯಾ ಮೌನವೇಕೆ?:</strong> ‘ಪ್ರತಿದಿನ ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಅವಮಾನಿಸುತ್ತಿದ್ದರೂ ಸೋನಿಯಾ ಅವರು ಮೌನ ತಳೆದಿರುವುದು ಏಕೆ’ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬಿಹಾರ ಸಚಿವ ಹಾಗೂ ಆರ್ಜೆಡಿ ನಾಯಕ ಚಂದ್ರಶೇಖರ್, ಸಮಾಜವಾದಿ ಪಕ್ಷದ ಸ್ವಾಮಿ ಪ್ರಸಾದ್ ಮೌರಾ ಅವರು ‘ರಾಮಚರಿತಮಾನಸ’ದಂತಹ ಪವಿತ್ರ ಹಿಂದೂ ಗ್ರಂಥಗಳನ್ನು ಟೀಕಿಸುತ್ತಿದ್ದಾರೆ. ಆದರೆ, ಈ ಪಕ್ಷಗಳ ನಾಯಕರು ಕೂಡ ಮೌನವಾಗಿದ್ದಾರೆ. ಇದಕ್ಕೆ ಅವರ ಒಪ್ಪಿಗೆ ಇರುವುದನ್ನು ಇದು ಸೂಚಿಸುತ್ತದೆ ಎಂದು ದೂರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>