ಅಸಮಾಧಾನಗೊಂಡಿರುವ ಶಾಸಕರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಪಕ್ಷದಲ್ಲಿ ಹುದ್ದೆಗಳನ್ನು ನೀಡುವುದು ಅಥವಾ ನಿಗಮ, ಮಂಡಳಿಗೆ ನೇಮಕ ಮಾಡುವ ಯೋಜನೆಯನ್ನು ಪಕ್ಷ ರೂಪಿಸುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಮಾಡಿದ ನಂತರ ಈ ಬೆಳವಣಿಗೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.