ಸರ್ಕಾರದ ಸಾಧನೆಗಳ ಬಗ್ಗೆ ತಿಳಿಸಲು ಚಿಂತಕರ ಗುಂಪಿನೊಡನೆ ಸಭೆಗಳನ್ನು ನಡೆಸಬೇಕು. ಗರೀಬ್ ಕಲ್ಯಾಣ್, ಆತ್ಮನಿರ್ಭರ ಹಾಗೂ ಆಯುಷ್ಮಾನ್ ಭಾರತ್ ಸೇರಿದಂತೆ ಹಲವು ಯೋಜನೆಗಳನ್ನು ಮುಖ್ಯವಾಗಿ ಪ್ರಸ್ತಾಪಿಸಬೇಕು ಎಂದು ಸಂಸದರು ಹಾಗೂ ಶಾಸಕರಿಗೆ ನಡ್ಡಾ ಸೂಚಿಸಿದ್ದಾರೆ. ಜೊತೆಗೆ, ವಿವಿಧ ಸಾಮಾಜಿಕ ಸಂಘಟನೆಗಳು, ರೈತ ಸಂಘಟನೆಗಳು, ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳನ್ನು ಸಂಪರ್ಕಿಸುವಂತೆ ಅವರು ಸೂಚಿಸಿದ್ದಾರೆ.ಬೈಕ್ ಜಾಥಾ, ಸೈಕಲ್ ಜಾಥಾ ಮೊದಲಾದ ಕಾರ್ಯಕ್ರಮಗಳ ಮೂಲಕ ಸಮಾಜದ ಎಲ್ಲ ವರ್ಗಗಳನ್ನು ತಲುಪುವ ಯತ್ನ ಆಗಬೇಕು ಎಂದಿದ್ದಾರೆ.