ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದ ಅವರು, ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ಸಮಸ್ಯೆಗಳೂ ಹೆಚ್ಚುತ್ತಿವೆ. ಈ ಸಮಸ್ಯೆಗಳೆಲ್ಲವೂ ನಗರಗಳಲ್ಲಿ ಸುದೀರ್ಘ ಆಡಳಿತ ನಡೆಸಿದ ಬಿಜೆಪಿಯ ಕೊಡುಗೆಗಳು. ಲಖನೌ, ಕಾನ್ಪುರ ಮತ್ತು ವಾರಾಣಸಿ ನಗರಗಳಲ್ಲಿ ಅಧಿಕಾರ ನಡೆಸಿದವರು ಬಿಜೆಪಿ ಮೇಯರ್ಗಳು ಎಂದು ಅಖಿಲೇಶ್ ಆರೋಪಿಸಿದರು.