<p>undefined</p>.<p><strong>ಲಖನೌ:</strong> ಕೇಂದ್ರ, ರಾಜ್ಯ ಮತ್ತು ನಗರ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಈ ‘ಟ್ರಿಪಲ್ ಎಂಜಿನ್ ಸರ್ಕಾರ’ದಲ್ಲಿ ಉತ್ತರಪ್ರದೇಶದ ನಗರಗಳು ಸ್ಮಾರ್ಟ್ ಆಗಲಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ವ್ಯಂಗ್ಯವಾಡಿದರು. </p>.<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಗಳಲ್ಲಿ ಹೆಚ್ಚುತ್ತಿರುವ ಸಮಸ್ಯೆಗಳಿಗೆ ಬಿಜೆಪಿಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರವೇ ಮೂಲ ಕಾರಣ ಎಂದು ಆರೋಪಿಸಿದರು.</p>.<p>ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದ ಅವರು, ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ಸಮಸ್ಯೆಗಳೂ ಹೆಚ್ಚುತ್ತಿವೆ. ಈ ಸಮಸ್ಯೆಗಳೆಲ್ಲವೂ ನಗರಗಳಲ್ಲಿ ಸುದೀರ್ಘ ಆಡಳಿತ ನಡೆಸಿದ ಬಿಜೆಪಿಯ ಕೊಡುಗೆಗಳು. ಲಖನೌ, ಕಾನ್ಪುರ ಮತ್ತು ವಾರಾಣಸಿ ನಗರಗಳಲ್ಲಿ ಅಧಿಕಾರ ನಡೆಸಿದವರು ಬಿಜೆಪಿ ಮೇಯರ್ಗಳು ಎಂದು ಅಖಿಲೇಶ್ ಆರೋಪಿಸಿದರು.</p>.<p>ಅಯೋಧ್ಯೆಯ ಭೂ ಹಗರಣ ಪ್ರಕರಣದಲ್ಲಿ ಬಿಜೆಪಿ ಮೇಯರ್ ಹೆಸರು ಕೇಳಿ ಬಂದಿದೆ. ಇದರಿಂದ ಈ ಬಾರಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಶಹಜಹಾನ್ಪುರದಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇರಲಿಲ್ಲ. ಆದರೆ ಸಮಾಜವಾದಿ ಪಕ್ಷದಿಂದ ಮೇಯರ್ ಅಭ್ಯರ್ಥಿಯಾಗಿದ್ದ ಅರ್ಚನಾ ವರ್ಮಾ ಅವರು ಬಿಜೆಪಿ ಸೇರಿದ್ದಾರೆ ಎಂದು ಅಖಿಲೇಶ್ ಹೇಳಿದರು.</p>.<p>ಲಖನೌ ಮಹಾನಗರ ಪಾಲಿಕೆಯ ಸಮಾಜವಾದಿ ಪಕ್ಷದ (ಎಸ್ಪಿ) ಮೇಯರ್ ಅಭ್ಯರ್ಥಿ ವಂದನಾ ಮಿಶ್ರಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>undefined</p>.<p><strong>ಲಖನೌ:</strong> ಕೇಂದ್ರ, ರಾಜ್ಯ ಮತ್ತು ನಗರ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಈ ‘ಟ್ರಿಪಲ್ ಎಂಜಿನ್ ಸರ್ಕಾರ’ದಲ್ಲಿ ಉತ್ತರಪ್ರದೇಶದ ನಗರಗಳು ಸ್ಮಾರ್ಟ್ ಆಗಲಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ವ್ಯಂಗ್ಯವಾಡಿದರು. </p>.<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಗಳಲ್ಲಿ ಹೆಚ್ಚುತ್ತಿರುವ ಸಮಸ್ಯೆಗಳಿಗೆ ಬಿಜೆಪಿಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರವೇ ಮೂಲ ಕಾರಣ ಎಂದು ಆರೋಪಿಸಿದರು.</p>.<p>ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದ ಅವರು, ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ಸಮಸ್ಯೆಗಳೂ ಹೆಚ್ಚುತ್ತಿವೆ. ಈ ಸಮಸ್ಯೆಗಳೆಲ್ಲವೂ ನಗರಗಳಲ್ಲಿ ಸುದೀರ್ಘ ಆಡಳಿತ ನಡೆಸಿದ ಬಿಜೆಪಿಯ ಕೊಡುಗೆಗಳು. ಲಖನೌ, ಕಾನ್ಪುರ ಮತ್ತು ವಾರಾಣಸಿ ನಗರಗಳಲ್ಲಿ ಅಧಿಕಾರ ನಡೆಸಿದವರು ಬಿಜೆಪಿ ಮೇಯರ್ಗಳು ಎಂದು ಅಖಿಲೇಶ್ ಆರೋಪಿಸಿದರು.</p>.<p>ಅಯೋಧ್ಯೆಯ ಭೂ ಹಗರಣ ಪ್ರಕರಣದಲ್ಲಿ ಬಿಜೆಪಿ ಮೇಯರ್ ಹೆಸರು ಕೇಳಿ ಬಂದಿದೆ. ಇದರಿಂದ ಈ ಬಾರಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಶಹಜಹಾನ್ಪುರದಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇರಲಿಲ್ಲ. ಆದರೆ ಸಮಾಜವಾದಿ ಪಕ್ಷದಿಂದ ಮೇಯರ್ ಅಭ್ಯರ್ಥಿಯಾಗಿದ್ದ ಅರ್ಚನಾ ವರ್ಮಾ ಅವರು ಬಿಜೆಪಿ ಸೇರಿದ್ದಾರೆ ಎಂದು ಅಖಿಲೇಶ್ ಹೇಳಿದರು.</p>.<p>ಲಖನೌ ಮಹಾನಗರ ಪಾಲಿಕೆಯ ಸಮಾಜವಾದಿ ಪಕ್ಷದ (ಎಸ್ಪಿ) ಮೇಯರ್ ಅಭ್ಯರ್ಥಿ ವಂದನಾ ಮಿಶ್ರಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>