ಬಶೀರ್ಹಾಟ್ ಲೋಕಸಭಾ ಕ್ಷೇತ್ರದ ಹರೋಆದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ‘ನಿನ್ನೆ ಕೂಡ ಅವರು ಪುರ್ಬ ಮೇದಿನಿಪುರದ ಮಹಿಸದಲ್ನ ನಮ್ಮ ಪಕ್ಷದ ಸಕ್ರಿಯ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಅವರು ಜನರ ಮೇಲೆ ಮತ್ತು ಟಿಎಂಸಿ ಕಾರ್ಯಕರ್ತರ ಮೇಲೆ ದಾಳಿಗಳನ್ನು ಮಾಡುತ್ತಿದ್ದು, ಹತ್ಯೆ ಮಾಡುತ್ತಿದ್ದಾರೆ. ಆದರೆ, ಅವರ ಪ್ರಯತ್ನಗಳನ್ನು ನಾವು ಪ್ರತಿರೋಧಿಸುತ್ತಿದ್ದೇವೆ’ ಎಂದು ಹೇಳಿದರು.