ಆದರೆ, ಆರೋಪವನ್ನು ತಳ್ಳಿ ಹಾಕಿದ್ದ ಅನ್ಸಾರಿ, ‘ಭಾರತದ ಉಪರಾಷ್ಟ್ರಪತಿಯಿಂದ ವಿದೇಶಿ ಗಣ್ಯರಿಗೆ ಸಾಮನ್ಯವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಸರ್ಕಾರದ ಸಲಹೆಯ ಮೇರೆಗೆ ಆಹ್ವಾನಗಳು ಹೋಗುತ್ತಿರುತ್ತವೆ. 2010ರ ಡಿಸೆಂಬರ್ 11ರಂದು ನಾನು ಭಯೋತ್ಪಾದನೆಗೆ ಸಂಬಂಧಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿದ್ದೆ. ಸಾಮಾನ್ಯವಾಗಿ ಅಲ್ಲಿಗೆ ಆಹ್ವಾನಿತರನ್ನು ಆಯೋಜಕರೇ ಕರೆಸಿರುತ್ತಾರೆ. ನಾನು ಯಾವತ್ತೂ ಮಿರ್ಜಾ ಅವರನ್ನು ಆಹ್ವಾನಿಸಿಲ್ಲ’ ಎಂದು ಸ್ಪಷ್ಟನೆ ನೀಡಿದ್ದರು.