<p><strong>ಕೋಲ್ಕತ್ತ:</strong> ‘ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ನಿವಾಸದಲ್ಲಿ ಬಿದ್ದು, ಗಾಯಗೊಳ್ಳಲು ಅವರನ್ನು ಹಿಂದಿನಿಂದ ತಳ್ಳಿದ್ದೇ ಕಾರಣ‘ ಎನ್ನಲಾಗುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಶುಕ್ರವಾರ ಆಗ್ರಹಿಸಿದೆ.</p>.<p>ಬಿಜೆಪಿಯ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಆಡಳಿತಾರೂಢ ಪಕ್ಷ ಟಿಎಂಸಿ, ಬಿಜೆಪಿಯು ಈ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದೆ.</p>.<p>69 ವರ್ಷದ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೋಲ್ಕತ್ತದ ಕಾಳಿಘಾಟ್ನಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಬಿದ್ದಿದ್ದರು. ಹಣೆ ಮತ್ತು ಮೂಗಿಗೆ ಪೆಟ್ಟಾಗಿದ್ದರಿಂದ ಅವರನ್ನು ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಳ್ಳಿರಬಹುದು’ ಎಂದು ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂದೋಪಾಧ್ಯಾಯ ಗುರುವಾರ ಹೇಳಿದ್ದರು. ನಂತರ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದರು. ಇದು ಭಾರಿ ಗೊಂದಲ ಹಾಗೂ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಮಗ್ರ ತನಿಖೆಗೆ ಆಗ್ರಹಿಸಿದೆ.</p>.<p>‘ಮುಖ್ಯಮಂತ್ರಿಗಳನ್ನು ಹಿಂದಿನಿಂದ ನೂಕಲಾಗಿದೆ ಎಂದು ಎಸ್ಎಸ್ಕೆಎಂ ಆಸ್ಪತ್ರೆ ನಿರ್ದೇಶಕರು ಗುರುವಾರ ರಾತ್ರಿ ಹೇಳಿದ್ದರು. ಇಂದು ಬೆಳಿಗ್ಗೆ ತಮ್ಮ ಮಾತನ್ನು ಬದಲಾಯಿಸಿರುವ ಅವರು, ಬೇರೆಯೇ ಕಾರಣ ಹೇಳುತ್ತಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಬೀಳಲು ಏನು ಕಾರಣ ಎಂಬುದನ್ನು ಪತ್ತೆ ಹಚ್ಚಲು ಸಮಗ್ರ ತನಿಖೆ ನಡೆಸಬೇಕು. ಈ ಘಟನೆ ಬಗ್ಗೆ ತಿಳಿದುಕೊಳ್ಳುವುದು ಪಶ್ಚಿಮ ಬಂಗಾಳದ ಪ್ರತಿಯೊಬ್ಬ ಪ್ರಜೆಯ ಹಕ್ಕು’ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ಸಂಸದ ದಿಲೀಪ್ ಘೋಷ್ ಹೇಳಿದ್ದಾರೆ.</p>.<p>‘ಈ ವಿಷಯವನ್ನು ರಾಜಕೀಯಗೊಳಿಸುವುದು ಸರಿಯಲ್ಲ’ ಎಂದು ಟಿಎಂಸಿ ನಾಯಕಿ ಹಾಗೂ ಸಚಿವೆ ಶಶಿ ಪಾಂಜಾ ಹೇಳಿದ್ದಾರೆ.</p>.<p>‘ನಿಮಗೆ ಆರೋಗ್ಯ ಸರಿ ಇಲ್ಲದಿರುವಾಗ, ಬೀಳುವ ಸಾಧ್ಯತೆ ಇರುತ್ತದೆ. ಈ ರೀತಿ ಆದಾಗ, ಹಿಂದಿನಿಂದ ನಿಮ್ಮನ್ನು ಯಾರೋ ತಳ್ಳಿದ್ದರು ಎಂದು ಅನಿಸುತ್ತದೆ. ಈ ಬಗ್ಗೆ ವೈದ್ಯರು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರಲ್ಲದೇ, ಹಣೆಯಲ್ಲಿ ರಕ್ತಸ್ರಾವದಿಂದ ಮುಖ್ಯಮಂತ್ರಿಗಳು ಬಳಲಿದ್ದನ್ನು ತೋರಿಸುವ ಚಿತ್ರಗಳನ್ನು ಸಹ ನಾವೆಲ್ಲ ನೋಡಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ನಿವಾಸದಲ್ಲಿ ಬಿದ್ದು, ಗಾಯಗೊಳ್ಳಲು ಅವರನ್ನು ಹಿಂದಿನಿಂದ ತಳ್ಳಿದ್ದೇ ಕಾರಣ‘ ಎನ್ನಲಾಗುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಶುಕ್ರವಾರ ಆಗ್ರಹಿಸಿದೆ.</p>.<p>ಬಿಜೆಪಿಯ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಆಡಳಿತಾರೂಢ ಪಕ್ಷ ಟಿಎಂಸಿ, ಬಿಜೆಪಿಯು ಈ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದೆ.</p>.<p>69 ವರ್ಷದ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೋಲ್ಕತ್ತದ ಕಾಳಿಘಾಟ್ನಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಬಿದ್ದಿದ್ದರು. ಹಣೆ ಮತ್ತು ಮೂಗಿಗೆ ಪೆಟ್ಟಾಗಿದ್ದರಿಂದ ಅವರನ್ನು ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಳ್ಳಿರಬಹುದು’ ಎಂದು ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂದೋಪಾಧ್ಯಾಯ ಗುರುವಾರ ಹೇಳಿದ್ದರು. ನಂತರ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದರು. ಇದು ಭಾರಿ ಗೊಂದಲ ಹಾಗೂ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಮಗ್ರ ತನಿಖೆಗೆ ಆಗ್ರಹಿಸಿದೆ.</p>.<p>‘ಮುಖ್ಯಮಂತ್ರಿಗಳನ್ನು ಹಿಂದಿನಿಂದ ನೂಕಲಾಗಿದೆ ಎಂದು ಎಸ್ಎಸ್ಕೆಎಂ ಆಸ್ಪತ್ರೆ ನಿರ್ದೇಶಕರು ಗುರುವಾರ ರಾತ್ರಿ ಹೇಳಿದ್ದರು. ಇಂದು ಬೆಳಿಗ್ಗೆ ತಮ್ಮ ಮಾತನ್ನು ಬದಲಾಯಿಸಿರುವ ಅವರು, ಬೇರೆಯೇ ಕಾರಣ ಹೇಳುತ್ತಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಬೀಳಲು ಏನು ಕಾರಣ ಎಂಬುದನ್ನು ಪತ್ತೆ ಹಚ್ಚಲು ಸಮಗ್ರ ತನಿಖೆ ನಡೆಸಬೇಕು. ಈ ಘಟನೆ ಬಗ್ಗೆ ತಿಳಿದುಕೊಳ್ಳುವುದು ಪಶ್ಚಿಮ ಬಂಗಾಳದ ಪ್ರತಿಯೊಬ್ಬ ಪ್ರಜೆಯ ಹಕ್ಕು’ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ಸಂಸದ ದಿಲೀಪ್ ಘೋಷ್ ಹೇಳಿದ್ದಾರೆ.</p>.<p>‘ಈ ವಿಷಯವನ್ನು ರಾಜಕೀಯಗೊಳಿಸುವುದು ಸರಿಯಲ್ಲ’ ಎಂದು ಟಿಎಂಸಿ ನಾಯಕಿ ಹಾಗೂ ಸಚಿವೆ ಶಶಿ ಪಾಂಜಾ ಹೇಳಿದ್ದಾರೆ.</p>.<p>‘ನಿಮಗೆ ಆರೋಗ್ಯ ಸರಿ ಇಲ್ಲದಿರುವಾಗ, ಬೀಳುವ ಸಾಧ್ಯತೆ ಇರುತ್ತದೆ. ಈ ರೀತಿ ಆದಾಗ, ಹಿಂದಿನಿಂದ ನಿಮ್ಮನ್ನು ಯಾರೋ ತಳ್ಳಿದ್ದರು ಎಂದು ಅನಿಸುತ್ತದೆ. ಈ ಬಗ್ಗೆ ವೈದ್ಯರು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರಲ್ಲದೇ, ಹಣೆಯಲ್ಲಿ ರಕ್ತಸ್ರಾವದಿಂದ ಮುಖ್ಯಮಂತ್ರಿಗಳು ಬಳಲಿದ್ದನ್ನು ತೋರಿಸುವ ಚಿತ್ರಗಳನ್ನು ಸಹ ನಾವೆಲ್ಲ ನೋಡಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>