<p><strong>ಲಖನೌ:</strong> ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೆಲವು ಬಿಜೆಪಿ ಸಂಸದರು ಘೋಷಿಸಿದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ‘ಬಿಜೆಪಿ ಹಿಂದೆಂದೂ ಇಷ್ಟೊಂದು ದುರ್ಬಲ ಪಕ್ಷವಾಗಿರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.</p>.<p>ಈ ಕುರಿತು ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅಖಿಲೇಶ್ ಅವರು, ‘ಟಿಕೆಟ್ ಸಿಗುವ ಮುನ್ನವೇ ಕೆಲವು ಮುಖ್ಯ ಕೆಲಸಗಳ ಕಾರಣ ಹೇಳಿ ಕೆಲವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. ಇಂಥ ದಿನಗಳು ಬಿಜೆಪಿಗೆ ಬರುತ್ತವೆ ಎಂಬುದನ್ನು ಯಾರು ಯೋಚಿಸಿದ್ದರು?’ ಎಂದಿದ್ದಾರೆ.</p>.<p>‘ರಾಜಕೀಯಕ್ಕಿಂತಲೂ ಕ್ರೀಡೆ ಮುಖ್ಯವೆಂದು ಹೇಳಿ ಒಬ್ಬರು ಪಕ್ಷ ಬಿಡುವ ಮಾತನ್ನಾಡುತ್ತಾರೆ. ಪರಿಸರದ ಸ್ಥಿತಿಯನ್ನು ಕಾರಣವಾಗಿಟ್ಟುಕೊಂಡು ಮತ್ತೊಬ್ಬರು ಪಕ್ಷದಿಂದ ಹೊರನಡೆಯುವ ಕುರಿತು ಅರ್ಜಿ ಹಾಕುತ್ತಾರೆ’ ಎಂದು ಹೇಳಿದ್ದಾರೆ.</p>.<p>‘ಟಿಕೆಟ್ ಸಿಕ್ಕ ಬಳಿಕವೂ ಒಬ್ಬರು ನಿವೃತ್ತಿ ಘೋಷಿಸಿದರೆ, ಮತ್ತೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಟಿಕೆಟ್ ನಿರಾಕರಿಸಿದ್ದಾರೆ’ ಎಂದು ಅವರು ಬಿಜೆಪಿಯ ಕಾಲೆಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೆಲವು ಬಿಜೆಪಿ ಸಂಸದರು ಘೋಷಿಸಿದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ‘ಬಿಜೆಪಿ ಹಿಂದೆಂದೂ ಇಷ್ಟೊಂದು ದುರ್ಬಲ ಪಕ್ಷವಾಗಿರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.</p>.<p>ಈ ಕುರಿತು ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅಖಿಲೇಶ್ ಅವರು, ‘ಟಿಕೆಟ್ ಸಿಗುವ ಮುನ್ನವೇ ಕೆಲವು ಮುಖ್ಯ ಕೆಲಸಗಳ ಕಾರಣ ಹೇಳಿ ಕೆಲವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. ಇಂಥ ದಿನಗಳು ಬಿಜೆಪಿಗೆ ಬರುತ್ತವೆ ಎಂಬುದನ್ನು ಯಾರು ಯೋಚಿಸಿದ್ದರು?’ ಎಂದಿದ್ದಾರೆ.</p>.<p>‘ರಾಜಕೀಯಕ್ಕಿಂತಲೂ ಕ್ರೀಡೆ ಮುಖ್ಯವೆಂದು ಹೇಳಿ ಒಬ್ಬರು ಪಕ್ಷ ಬಿಡುವ ಮಾತನ್ನಾಡುತ್ತಾರೆ. ಪರಿಸರದ ಸ್ಥಿತಿಯನ್ನು ಕಾರಣವಾಗಿಟ್ಟುಕೊಂಡು ಮತ್ತೊಬ್ಬರು ಪಕ್ಷದಿಂದ ಹೊರನಡೆಯುವ ಕುರಿತು ಅರ್ಜಿ ಹಾಕುತ್ತಾರೆ’ ಎಂದು ಹೇಳಿದ್ದಾರೆ.</p>.<p>‘ಟಿಕೆಟ್ ಸಿಕ್ಕ ಬಳಿಕವೂ ಒಬ್ಬರು ನಿವೃತ್ತಿ ಘೋಷಿಸಿದರೆ, ಮತ್ತೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಟಿಕೆಟ್ ನಿರಾಕರಿಸಿದ್ದಾರೆ’ ಎಂದು ಅವರು ಬಿಜೆಪಿಯ ಕಾಲೆಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>