<p><strong>ಕೋಲ್ಕತ್ತ:</strong> ಬಿಜೆಪಿಯ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಮಿಕ್ ಭಟ್ಟಾಚಾರ್ಯ ಅವರು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. </p><p>ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಇವರೊಬ್ಬರೇ ಅರ್ಜಿ ಸಲ್ಲಿಸಿದ್ದರಿಂದ, ಆಯ್ಕೆಯೂ ಅವಿರೋಧವಾಗಿ ಇಂದು (ಬುಧವಾರ) ನೆರವೇರಿತು.</p><p>ನಿರ್ಗಮಿತ ರಾಜ್ಯಾಧ್ಯಕ್ಷ ಸುಕಂತಾ ಮಜೂಮದಾರ್ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರೊಂದಿಗೆ ಕೋಲ್ಕತ್ತದಲ್ಲಿರುವ ಬಿಜೆಪಿಯ ಸಾಲ್ಟ್ ಲೇಕ್ ಕಚೇರಿಗೆ ಬುಧವಾರ ಮಧ್ಯಾಹ್ನ ಭೇಟಿ ನೀಡಿದ ಸಮಿಕ್, ನಾಮಪತ್ರ ಸಲ್ಲಿಸಿದರು.</p><p>ರಾಜ್ಯಾಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಅವಕಾಶ ನೀಡಲಾಗಿತ್ತು. ನಾಮಪತ್ರ ಪರಿಷ್ಕರಣೆ ಹಾಗೂ ಹಿಂಪಡೆಯಲು ಸಂಜೆ 6ರವರೆಗೆ ಅವಕಾಶವಿತ್ತು. ಆದರೆ ಸಮಿಕ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಪಕ್ಷವು ಸಮಿಕ್ ಹೆಸರನ್ನು ಅಂತಿಮಗೊಳಿಸಿತು.</p><p>ವಿಜ್ಞಾನ ನಗರಿಯಲ್ಲಿ ಇಂದು (ಬುಧವಾರ) ಸಂಜೆ ನಡೆಯಲಿರುವ ಪಕ್ಷದ ವೇದಿಕೆ ಕಾರ್ಯಕ್ರಮದಲ್ಲಿ ಸಮಿಕ್ ಅವರ ಹೆಸರನ್ನು ಪಕ್ಷದ ಮುಖಂಡರು ಅಧಿಕೃತವಾಗಿ ಘೋಷಿಸುವ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಮೂಲಗಳು ತಿಳಿಸಿವೆ.</p><p>2026ರಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಬಿಜೆಪಿ ಒತ್ತು ನೀಡಿದ್ದು, ಆ ಉದ್ದೇಶದಿಂದಲೂ ಸಮಿಕ್ ಭಟ್ಟಾಚಾರ್ಯ ಅವರ ಆಯ್ಕೆ ನಡೆದಿದೆ ಎಂದೆನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಜೆಪಿಯ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಮಿಕ್ ಭಟ್ಟಾಚಾರ್ಯ ಅವರು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. </p><p>ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಇವರೊಬ್ಬರೇ ಅರ್ಜಿ ಸಲ್ಲಿಸಿದ್ದರಿಂದ, ಆಯ್ಕೆಯೂ ಅವಿರೋಧವಾಗಿ ಇಂದು (ಬುಧವಾರ) ನೆರವೇರಿತು.</p><p>ನಿರ್ಗಮಿತ ರಾಜ್ಯಾಧ್ಯಕ್ಷ ಸುಕಂತಾ ಮಜೂಮದಾರ್ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರೊಂದಿಗೆ ಕೋಲ್ಕತ್ತದಲ್ಲಿರುವ ಬಿಜೆಪಿಯ ಸಾಲ್ಟ್ ಲೇಕ್ ಕಚೇರಿಗೆ ಬುಧವಾರ ಮಧ್ಯಾಹ್ನ ಭೇಟಿ ನೀಡಿದ ಸಮಿಕ್, ನಾಮಪತ್ರ ಸಲ್ಲಿಸಿದರು.</p><p>ರಾಜ್ಯಾಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಅವಕಾಶ ನೀಡಲಾಗಿತ್ತು. ನಾಮಪತ್ರ ಪರಿಷ್ಕರಣೆ ಹಾಗೂ ಹಿಂಪಡೆಯಲು ಸಂಜೆ 6ರವರೆಗೆ ಅವಕಾಶವಿತ್ತು. ಆದರೆ ಸಮಿಕ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಪಕ್ಷವು ಸಮಿಕ್ ಹೆಸರನ್ನು ಅಂತಿಮಗೊಳಿಸಿತು.</p><p>ವಿಜ್ಞಾನ ನಗರಿಯಲ್ಲಿ ಇಂದು (ಬುಧವಾರ) ಸಂಜೆ ನಡೆಯಲಿರುವ ಪಕ್ಷದ ವೇದಿಕೆ ಕಾರ್ಯಕ್ರಮದಲ್ಲಿ ಸಮಿಕ್ ಅವರ ಹೆಸರನ್ನು ಪಕ್ಷದ ಮುಖಂಡರು ಅಧಿಕೃತವಾಗಿ ಘೋಷಿಸುವ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಮೂಲಗಳು ತಿಳಿಸಿವೆ.</p><p>2026ರಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಬಿಜೆಪಿ ಒತ್ತು ನೀಡಿದ್ದು, ಆ ಉದ್ದೇಶದಿಂದಲೂ ಸಮಿಕ್ ಭಟ್ಟಾಚಾರ್ಯ ಅವರ ಆಯ್ಕೆ ನಡೆದಿದೆ ಎಂದೆನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>