ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮೂರನೇ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ’ ಎಂದು ಹೇಳಿದ್ದಾರೆ.
ದೌಸಾ ಜಿಲ್ಲೆಯ ಮೆಹಂದಿಪುರದಲ್ಲಿರುವ ಬಾಲಾಜಿ ದೇವಸ್ಥಾನಕ್ಕೆ ಸಿಎಂ ಶರ್ಮಾ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಇದ್ದರು.
ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಲಿ. ರಾಜ್ಯ ಮತ್ತು ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು. ಸಿಎಂ ಶರ್ಮಾ ಮತ್ತು ನಾಯಕರ ಭೇಟಿ ಹಿನ್ನೆಲೆ ದೇವಸ್ಥಾನದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.