<p><strong>ಚಂಡೀಗಢ</strong>: ವಿಧಾನಸಭೆ ಚುನಾವಣೆಗೆ ಬಿಜೆಪಿ ಸಂಪೂರ್ಣ ಸಜ್ಜಾಗಿದ್ದು, ಭಾರಿ ಬಹುಮತದೊಂದಿಗೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಲಿದೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಚುನಾವಣಾ ಆಯೋಗವು ಶುಕ್ರವಾರ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.</p><p>ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸೈನಿ, ಚುನಾವಣಾ ಆಯೋಗದ ಘೋಷಣೆಯನ್ನು ಸ್ವಾಗತಿಸಿದ್ದಾರೆ.</p><p>'ಚುನಾವಣೆಗೆ ನಾವು ಸಂಪೂರ್ಣ ಸಿದ್ಧರಾಗಿದ್ದೇವೆ. ಬಿಜೆಪಿಯು ಹರಿಯಾಣದಲ್ಲಿ ಭಾರಿ ಬಹುಮತದೊಂದಿಗೆ ಸತತ ಮೂರನೇ ಸಲ ಸರ್ಕಾರ ರಚಿಸಲಿದೆ' ಎಂದು ಹೇಳಿದ್ದಾರೆ.</p><p>ಬಿಜೆಪಿ ಸರ್ಕಾರವು ಯಾವುದೇ ತಾರತಮ್ಯ ತೋರದೆ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ ಎಂದು ಪ್ರತಿಪಾದಿಸಿರುವ ಅವರು, ಕಳೆದ 10 ವರ್ಷಗಳಲ್ಲಿ ಹರಿಯಾಣವು ಪ್ರತಿ ಕ್ಷೇತ್ರದಲ್ಲಿಯೂ ಅಭಿವೃದ್ಧಿಯ ಹೊಸ ಎತ್ತರಕ್ಕೆ ಏರಿದೆ ಎಂದು ಬೆನ್ನುತಟ್ಟಿಕೊಂಡಿದ್ದಾರೆ.</p>.ಕಣಿವೆಯಲ್ಲಿ ದಶಕದ ನಂತರ ವಿಧಾನಸಭಾ ಚುನಾವಣೆ: ಕಾಶ್ಮೀರದಲ್ಲಿ ಮತ್ತೆ ಮತಹಬ್ಬ .Election: ಹರಿಯಾಣಗೆ ಅಕ್ಟೋಬರ್ 1, ಜಮ್ಮು& ಕಾಶ್ಮೀರಕ್ಕೆ ಮೂರು ಹಂತದಲ್ಲಿ ಮತದಾನ.<p>ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಗುಡುಗಿದ ಮುಖ್ಯಮಂತ್ರಿ, ಆ ಪಕ್ಷವು ಸುಳ್ಳು ಹೇಳುವುದನ್ನು ಬಿಟ್ಟು ಏನು ಮಾಡಿದೆ ಎಂಬ ವಿವರವನ್ನು ಜನರ ಮುಂದಿಡಲಿ ಎಂದು ಸವಾಲೆಸೆದಿದ್ದಾರೆ.</p><p>ಕಾಂಗ್ರೆಸ್ನ ಸುಳ್ಳುಗಳಿಗೆ ತಕ್ಕ ಪಾಠ ಕಲಿಸುವಂತೆ ಜನರನ್ನು ಕೋರಿರುವ ಅವರು, ಭಾರಿ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳುವಂತೆಯೂ ಮನವಿ ಮಾಡಿದ್ದಾರೆ.</p><p><strong>'ವಿನೇಶ್ ಹರಿಯಾಣದ ಮಗಳು'<br></strong>ಇದೇ ವೇಳೆ ಕುಸ್ತಿಪಟು ವಿನೇಶ್ ಫೋಗಟ್ ಕುರಿತು ಕೇಳಿದ ಪ್ರಶ್ನೆಗೂ ಸೈನಿ ಪ್ರತಿಕ್ರಿಯಿಸಿದ್ದಾರೆ. ಭಾರತಕ್ಕೆ ಆಗಮಿಸಿರುವ ಫೋಗಟ್ಗೆ ಸ್ವಾಗತ ಕೋರಿದ ಅವರು, 'ವಿನೇಶ್ ಫೋಗಟ್ ಹರಿಯಾಣದ ಮಗಳು. ಅವರ ಬಗ್ಗೆ ನಮಗೆಲ್ಲ ಹೆಮ್ಮೆ ಇದೆ' ಎಂದೂ ಹೇಳಿದ್ದಾರೆ.</p><p>ಪ್ಯಾರಿಸ್ನಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಮಹಿಳೆಯರ 50 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯ ಫೈನಲ್ನಿಂದ ಅನರ್ಹಗೊಂಡು ಆಘಾತ ಅನುಭವಿಸಿದ್ದ ಫೋಗಟ್ ಅವರು ಇಂದು (ಶನಿವಾರ) ಭಾರತಕ್ಕೆ ಮರಳಿದ್ದಾರೆ.</p><p>ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ನೂರಾರು ಅಭಿಮಾನಿಗಳು ನೋಟು ಹಾಗೂ ಹೂವಿನ ಹಾರ ಹಾಕಿ, ಬೆಂಬಲದ ಘೋಷಣೆಗಳೊಂದಿಗೆ ಸ್ವಾಗತಿಸಿದ್ದಾರೆ.</p><p>ಹರಿಯಾಣದ ಬಲಾಲಿ ಗ್ರಾಮದ ಫೋಗಟ್ ಅವರು ನಿಗದಿಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಫೈನಲ್ ಸೆಣಸಾಟದಿಂದ ಹೊರಬಿದ್ದಿದ್ದರು.</p>.ತವರಿನಲ್ಲಿ ಅದ್ದೂರಿ ಸ್ವಾಗತ; ಅಭಿಮಾನ ಕಂಡು ಕಣ್ಣೀರು ಸುರಿಸಿದ ವಿನೇಶ್ ಫೋಗಟ್.Photos | ದೆಹಲಿಗೆ ಬಂದ ವಿನೇಶ್: ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ವಿಮಾನ ನಿಲ್ದಾಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ವಿಧಾನಸಭೆ ಚುನಾವಣೆಗೆ ಬಿಜೆಪಿ ಸಂಪೂರ್ಣ ಸಜ್ಜಾಗಿದ್ದು, ಭಾರಿ ಬಹುಮತದೊಂದಿಗೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಲಿದೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಚುನಾವಣಾ ಆಯೋಗವು ಶುಕ್ರವಾರ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.</p><p>ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸೈನಿ, ಚುನಾವಣಾ ಆಯೋಗದ ಘೋಷಣೆಯನ್ನು ಸ್ವಾಗತಿಸಿದ್ದಾರೆ.</p><p>'ಚುನಾವಣೆಗೆ ನಾವು ಸಂಪೂರ್ಣ ಸಿದ್ಧರಾಗಿದ್ದೇವೆ. ಬಿಜೆಪಿಯು ಹರಿಯಾಣದಲ್ಲಿ ಭಾರಿ ಬಹುಮತದೊಂದಿಗೆ ಸತತ ಮೂರನೇ ಸಲ ಸರ್ಕಾರ ರಚಿಸಲಿದೆ' ಎಂದು ಹೇಳಿದ್ದಾರೆ.</p><p>ಬಿಜೆಪಿ ಸರ್ಕಾರವು ಯಾವುದೇ ತಾರತಮ್ಯ ತೋರದೆ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ ಎಂದು ಪ್ರತಿಪಾದಿಸಿರುವ ಅವರು, ಕಳೆದ 10 ವರ್ಷಗಳಲ್ಲಿ ಹರಿಯಾಣವು ಪ್ರತಿ ಕ್ಷೇತ್ರದಲ್ಲಿಯೂ ಅಭಿವೃದ್ಧಿಯ ಹೊಸ ಎತ್ತರಕ್ಕೆ ಏರಿದೆ ಎಂದು ಬೆನ್ನುತಟ್ಟಿಕೊಂಡಿದ್ದಾರೆ.</p>.ಕಣಿವೆಯಲ್ಲಿ ದಶಕದ ನಂತರ ವಿಧಾನಸಭಾ ಚುನಾವಣೆ: ಕಾಶ್ಮೀರದಲ್ಲಿ ಮತ್ತೆ ಮತಹಬ್ಬ .Election: ಹರಿಯಾಣಗೆ ಅಕ್ಟೋಬರ್ 1, ಜಮ್ಮು& ಕಾಶ್ಮೀರಕ್ಕೆ ಮೂರು ಹಂತದಲ್ಲಿ ಮತದಾನ.<p>ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಗುಡುಗಿದ ಮುಖ್ಯಮಂತ್ರಿ, ಆ ಪಕ್ಷವು ಸುಳ್ಳು ಹೇಳುವುದನ್ನು ಬಿಟ್ಟು ಏನು ಮಾಡಿದೆ ಎಂಬ ವಿವರವನ್ನು ಜನರ ಮುಂದಿಡಲಿ ಎಂದು ಸವಾಲೆಸೆದಿದ್ದಾರೆ.</p><p>ಕಾಂಗ್ರೆಸ್ನ ಸುಳ್ಳುಗಳಿಗೆ ತಕ್ಕ ಪಾಠ ಕಲಿಸುವಂತೆ ಜನರನ್ನು ಕೋರಿರುವ ಅವರು, ಭಾರಿ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳುವಂತೆಯೂ ಮನವಿ ಮಾಡಿದ್ದಾರೆ.</p><p><strong>'ವಿನೇಶ್ ಹರಿಯಾಣದ ಮಗಳು'<br></strong>ಇದೇ ವೇಳೆ ಕುಸ್ತಿಪಟು ವಿನೇಶ್ ಫೋಗಟ್ ಕುರಿತು ಕೇಳಿದ ಪ್ರಶ್ನೆಗೂ ಸೈನಿ ಪ್ರತಿಕ್ರಿಯಿಸಿದ್ದಾರೆ. ಭಾರತಕ್ಕೆ ಆಗಮಿಸಿರುವ ಫೋಗಟ್ಗೆ ಸ್ವಾಗತ ಕೋರಿದ ಅವರು, 'ವಿನೇಶ್ ಫೋಗಟ್ ಹರಿಯಾಣದ ಮಗಳು. ಅವರ ಬಗ್ಗೆ ನಮಗೆಲ್ಲ ಹೆಮ್ಮೆ ಇದೆ' ಎಂದೂ ಹೇಳಿದ್ದಾರೆ.</p><p>ಪ್ಯಾರಿಸ್ನಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಮಹಿಳೆಯರ 50 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯ ಫೈನಲ್ನಿಂದ ಅನರ್ಹಗೊಂಡು ಆಘಾತ ಅನುಭವಿಸಿದ್ದ ಫೋಗಟ್ ಅವರು ಇಂದು (ಶನಿವಾರ) ಭಾರತಕ್ಕೆ ಮರಳಿದ್ದಾರೆ.</p><p>ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ನೂರಾರು ಅಭಿಮಾನಿಗಳು ನೋಟು ಹಾಗೂ ಹೂವಿನ ಹಾರ ಹಾಕಿ, ಬೆಂಬಲದ ಘೋಷಣೆಗಳೊಂದಿಗೆ ಸ್ವಾಗತಿಸಿದ್ದಾರೆ.</p><p>ಹರಿಯಾಣದ ಬಲಾಲಿ ಗ್ರಾಮದ ಫೋಗಟ್ ಅವರು ನಿಗದಿಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಫೈನಲ್ ಸೆಣಸಾಟದಿಂದ ಹೊರಬಿದ್ದಿದ್ದರು.</p>.ತವರಿನಲ್ಲಿ ಅದ್ದೂರಿ ಸ್ವಾಗತ; ಅಭಿಮಾನ ಕಂಡು ಕಣ್ಣೀರು ಸುರಿಸಿದ ವಿನೇಶ್ ಫೋಗಟ್.Photos | ದೆಹಲಿಗೆ ಬಂದ ವಿನೇಶ್: ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ವಿಮಾನ ನಿಲ್ದಾಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>