ಔರಂಗಬಾದ್ ಪದವೀಧರರ ಕ್ಷೇತ್ರದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರ ಅಭಿಯಾನದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಯೋಚಿಸಬಾರದು. ಮುಂದಿನ 2–3 ತಿಂಗಳಲ್ಲಿ ಅಲ್ಲಿ ನಾವು ಸರ್ಕಾರ ರಚಿಸುತ್ತೇವೆ. ಲೆಕ್ಕಾಚಾರಗಳನ್ನು ನಾವು ಮಾಡಿದ್ದು, ವಿಧಾನ ಪರಿಷತ್ ಚುನಾವಣೆ ಪೂರ್ಣಗೊಳ್ಳಲಿ ಎಂದು ಕಾಯುತ್ತಿದ್ದೇವೆ’ ಎಂದರು.