ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರೋಮಣಿ ಅಕಾಲಿ ದಳದ ಜೊತೆ ಮತ್ತೆ ಮೈತ್ರಿ ಇಲ್ಲ: ಬಿಜೆಪಿ ಪಂಜಾಬ್ ಘಟಕದ ಅಧ್ಯಕ್ಷ

Published 29 ಏಪ್ರಿಲ್ 2023, 14:39 IST
Last Updated 29 ಏಪ್ರಿಲ್ 2023, 14:39 IST
ಅಕ್ಷರ ಗಾತ್ರ

ಚಂಡೀಗಢ: ‘ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಜೊತೆಗೆ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ’ ಎಂದು ಬಿಜೆಪಿ ಪಂಜಾಬ್ ಘಟಕದ ಅಧ್ಯಕ್ಷ ಅಶ್ವನಿ ಶರ್ಮಾ ಶನಿವಾರ ಹೇಳಿದ್ದಾರೆ. 

ರಾಜ್ಯದ ಎಲ್ಲಾ ಚುನಾವಣೆಗಳಲ್ಲೂ ಪಕ್ಷವು ಸ್ಪರ್ಧಿಸಲಿದೆ ಎಂದೂ ಅವರು ತಿಳಿಸಿದ್ದಾರೆ.

ಈಚೆಗೆ ನಿಧನರಾದ ಎಸ್ಎಡಿ ವರಿಷ್ಠ ಪ್ರಕಾಶ್‌ ಸಿಂಗ್‌ ಬಾದಲ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕತ್ವವು ಗೌರವ ಸಲ್ಲಿಸಿರುವುದಕ್ಕೆ ರಾಜಕೀಯ ತಳುಕು ಹಾಕಬೇಡಿ ಎಂದಿದ್ದಾರೆ.

ಮೋದಿ ಅವರು ಈಚೆಗೆ ಚಂಡೀಗಢದಲ್ಲಿರುವ ಎಸ್ಎಡಿ ಕಚೇರಿಗೆ ಭೇಟಿ ನೀಡಿ, ಪ್ರಕಾಶ್‌ ಸಿಂಗ್‌ ಬಾದಲ್‌ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ ಮತ್ತಿತರರೂ ಬಾದಲ್‌ ಅವರ ಸ್ವಗ್ರಾಮಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT