ಬುಡಕಟ್ಟು ಜನಾಂಗದವರ ಹಕ್ಕುಗಳನ್ನು ರಕ್ಷಿಸುವ ಹಲವು ಕಾನೂನುಗಳನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ರಾಜ್ಯದಲ್ಲಿರುವ ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರ ಅಂತಹ ಪ್ರಯತ್ನಗಳ ವಿರುದ್ಧ ಪ್ರತಿಭಟಿಸುತ್ತಲೇ ಬಂದಿದೆ ಎಂದರು.
‘ಬಿಜೆಪಿ ಸರ್ಕಾರವು ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಗ್ರಾಮಸಭೆಗಳ ಹಕ್ಕನ್ನು ಕಸಿಯಲಾಯಿತು. ಕಲ್ಲಿದ್ದಲು ಪ್ರದೇಶಗಳ ಸ್ವಾಧೀನ ಮತ್ತು ಅಭಿವೃದ್ಧಿ ಕಾಯಿದೆ ಹಾಗೂ ಚೋಟಾನಾಗಪುರ ಬಾಡಿಗೆ ಕಾಯ್ದೆಯಲ್ಲೂ ತಿದ್ದುಪಡಿ ತರುವ ಪ್ರಯತ್ನ ನಡೆಯುತ್ತಿದೆ’ ಎಂದು ಆರೋಪಿಸಿದರು.