<p><strong>ನವದೆಹಲಿ</strong>: ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವಂತೆ ಕೋರಿ ಬಿಜೆಪಿ ಕಾರ್ಯಕರ್ತರು ಅರ್ಜಿ ಸಲ್ಲಿಸುತ್ತಿದ್ದು, ಇದಕ್ಕೆ ಅವರು ‘ಕೇಂದ್ರೀಕೃತ ಹಾಗೂ ಸಂಘಟಿತ’ ವಿಧಾನ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.</p>.<p>ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’(ಎಸ್ಐಆರ್) ನಡೆಯುತ್ತಿರುವ ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂತಹ ಕೆಲಸ ನಡೆಯುತ್ತಿದ್ದು, ಅರ್ಜಿ ಸಲ್ಲಿಸುವಾಗ ಸ್ಪಷ್ಟವಾದ ವಿವರಗಳನ್ನು ನೀಡುತ್ತಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ.</p>.<p>‘ಇಂತಹ ನಡೆಯು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಸಂಶಯ ಮೂಡುವಂತೆ ಮಾಡುತ್ತಿದೆ. ಅರ್ಜಿ ನಮೂನೆ–7ರ ದುರ್ಬಳಕೆ ತಡೆಯುವುದೂ ಅಗತ್ಯ. ಹಾಗಾಗಿ, ಮತದಾರರ ಹೆಸರುಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಮೇಲೆ ನಿರಂತರ ಕಣ್ಗಾವಲು ಇಡಬೇಕು’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>Quote - ಅರ್ಜಿ ನಮೂನೆ–7ರ ದುರ್ಬಳಕೆ ಹಾಗೂ ಮತದಾರರ ಹೆಸರು ಅಳಿಸಿ ಹಾಕುವ ವಿಧಾನ ಕುರಿತ ಆರೋಪಗಳ ಬಗ್ಗೆ ಸಂವಿಧಾನದ 324ನೇ ವಿಧಿಯಡಿ ಚುನಾವಣಾ ಆಯೋಗ ತನಿಖೆ ನಡೆಸಬೇಕು ಕೆ.ಸಿ.ವೇಣುಗೋಪಾಲ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ</p>.<p><strong>ಪತ್ರದಲ್ಲಿನ ಪ್ರಮುಖ ಅಂಶಗಳು</strong> </p><p>* ಬಿಜೆಪಿ ಕಾರ್ಯಕರ್ತರ ಈ ಕೆಲಸಕ್ಕೆ ಕಡಿವಾಣ ಹಾಕದಿದ್ದರೆ ವಾಮಮಾರ್ಗದ ಮೂಲಕ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಅವರ ಪ್ರಯತ್ನಗಳಿಗೆ ಅನುಕೂಲ ಮಾಡಿಕೊಟ್ಟಂತಾಗಲಿದೆ </p><p>* ಲಕ್ಷಾಂತರ ಜನರ ಅದರಲ್ಲೂ ವಿಶೇಷವಾಗಿ ಹಿಂದುಳಿದ ಹಾಗೂ ನಿರ್ಲಕ್ಷಿತ ಸಮುದಾಯಗಳಿಗೆ ಸೇರಿದವರು ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯ ಇದೆ </p><p>* ಅನೇಕ ಅರ್ಜಿ ನಮೂನೆ–7ರಲ್ಲಿನ ಹೆಸರುಗಳನ್ನು ಓದುವುದಕ್ಕೆ ಆಗುತ್ತಿಲ್ಲ. ಮೊಬೈಲ್ ಸಂಖ್ಯೆಗಳನ್ನು ತಪ್ಪಾಗಿ ನಮೂದಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಿದವರ ವಿವರಗಳಿಗೂ ಹಾಗೂ ಎಪಿಕ್ ಸಂಖ್ಯೆಗೂ ಹೊಂದಾಣಿಕೆ ಆಗುತ್ತಿಲ್ಲ </p><p>* ಎಸ್ಸಿ ಎಸ್ಟಿ ಅಲ್ಪಸಂಖ್ಯಾತರು ಹಾಗೂ ಹಿರಿಯ ನಾಗರಿಕರು ಸೇರಿ ನಿರ್ದಿಷ್ಟ ವರ್ಗದ ಮತದಾರರ ವಿರುದ್ಧ ಸಾಮೂಹಿಕವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲಾಗುತ್ತಿದೆ. ಈ ಆಕ್ಷೇಪಣಾ ಅರ್ಜಿಗಳನ್ನು ‘ಕೇಂದ್ರೀಕೃತ ವ್ಯವಸ್ಥೆ’ ಮೂಲಕ ಸಿದ್ಧಪಡಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ </p><p>* ಎಸ್ಐಆರ್ ನಡೆಯುತ್ತಿರುವ ಎಲ್ಲ 12 ರಾಜ್ಯಗಳಲ್ಲಿ ಸಲ್ಲಿಕೆಯಾಗಿರುವ ನಮೂನೆ–7ಕ್ಕೆ ಸಂಬಂಧಿಸಿದ ಸಮಗ್ರ ದತ್ತಾಂಶವನ್ನು ಬಹಿರಂಗಪಡಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವಂತೆ ಕೋರಿ ಬಿಜೆಪಿ ಕಾರ್ಯಕರ್ತರು ಅರ್ಜಿ ಸಲ್ಲಿಸುತ್ತಿದ್ದು, ಇದಕ್ಕೆ ಅವರು ‘ಕೇಂದ್ರೀಕೃತ ಹಾಗೂ ಸಂಘಟಿತ’ ವಿಧಾನ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.</p>.<p>ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’(ಎಸ್ಐಆರ್) ನಡೆಯುತ್ತಿರುವ ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂತಹ ಕೆಲಸ ನಡೆಯುತ್ತಿದ್ದು, ಅರ್ಜಿ ಸಲ್ಲಿಸುವಾಗ ಸ್ಪಷ್ಟವಾದ ವಿವರಗಳನ್ನು ನೀಡುತ್ತಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ.</p>.<p>‘ಇಂತಹ ನಡೆಯು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಸಂಶಯ ಮೂಡುವಂತೆ ಮಾಡುತ್ತಿದೆ. ಅರ್ಜಿ ನಮೂನೆ–7ರ ದುರ್ಬಳಕೆ ತಡೆಯುವುದೂ ಅಗತ್ಯ. ಹಾಗಾಗಿ, ಮತದಾರರ ಹೆಸರುಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಮೇಲೆ ನಿರಂತರ ಕಣ್ಗಾವಲು ಇಡಬೇಕು’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>Quote - ಅರ್ಜಿ ನಮೂನೆ–7ರ ದುರ್ಬಳಕೆ ಹಾಗೂ ಮತದಾರರ ಹೆಸರು ಅಳಿಸಿ ಹಾಕುವ ವಿಧಾನ ಕುರಿತ ಆರೋಪಗಳ ಬಗ್ಗೆ ಸಂವಿಧಾನದ 324ನೇ ವಿಧಿಯಡಿ ಚುನಾವಣಾ ಆಯೋಗ ತನಿಖೆ ನಡೆಸಬೇಕು ಕೆ.ಸಿ.ವೇಣುಗೋಪಾಲ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ</p>.<p><strong>ಪತ್ರದಲ್ಲಿನ ಪ್ರಮುಖ ಅಂಶಗಳು</strong> </p><p>* ಬಿಜೆಪಿ ಕಾರ್ಯಕರ್ತರ ಈ ಕೆಲಸಕ್ಕೆ ಕಡಿವಾಣ ಹಾಕದಿದ್ದರೆ ವಾಮಮಾರ್ಗದ ಮೂಲಕ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಅವರ ಪ್ರಯತ್ನಗಳಿಗೆ ಅನುಕೂಲ ಮಾಡಿಕೊಟ್ಟಂತಾಗಲಿದೆ </p><p>* ಲಕ್ಷಾಂತರ ಜನರ ಅದರಲ್ಲೂ ವಿಶೇಷವಾಗಿ ಹಿಂದುಳಿದ ಹಾಗೂ ನಿರ್ಲಕ್ಷಿತ ಸಮುದಾಯಗಳಿಗೆ ಸೇರಿದವರು ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯ ಇದೆ </p><p>* ಅನೇಕ ಅರ್ಜಿ ನಮೂನೆ–7ರಲ್ಲಿನ ಹೆಸರುಗಳನ್ನು ಓದುವುದಕ್ಕೆ ಆಗುತ್ತಿಲ್ಲ. ಮೊಬೈಲ್ ಸಂಖ್ಯೆಗಳನ್ನು ತಪ್ಪಾಗಿ ನಮೂದಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಿದವರ ವಿವರಗಳಿಗೂ ಹಾಗೂ ಎಪಿಕ್ ಸಂಖ್ಯೆಗೂ ಹೊಂದಾಣಿಕೆ ಆಗುತ್ತಿಲ್ಲ </p><p>* ಎಸ್ಸಿ ಎಸ್ಟಿ ಅಲ್ಪಸಂಖ್ಯಾತರು ಹಾಗೂ ಹಿರಿಯ ನಾಗರಿಕರು ಸೇರಿ ನಿರ್ದಿಷ್ಟ ವರ್ಗದ ಮತದಾರರ ವಿರುದ್ಧ ಸಾಮೂಹಿಕವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲಾಗುತ್ತಿದೆ. ಈ ಆಕ್ಷೇಪಣಾ ಅರ್ಜಿಗಳನ್ನು ‘ಕೇಂದ್ರೀಕೃತ ವ್ಯವಸ್ಥೆ’ ಮೂಲಕ ಸಿದ್ಧಪಡಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ </p><p>* ಎಸ್ಐಆರ್ ನಡೆಯುತ್ತಿರುವ ಎಲ್ಲ 12 ರಾಜ್ಯಗಳಲ್ಲಿ ಸಲ್ಲಿಕೆಯಾಗಿರುವ ನಮೂನೆ–7ಕ್ಕೆ ಸಂಬಂಧಿಸಿದ ಸಮಗ್ರ ದತ್ತಾಂಶವನ್ನು ಬಹಿರಂಗಪಡಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>