<p><strong>ಕೋಲ್ಕತ್ತ:</strong> ಇಲ್ಲಿನ ಕಾನೂನು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗವು ಮೌನ ವಹಿಸಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಬೆಂಬಲಿಗರು ಬುಧವಾರ ಪ್ರತಿಭಟನೆ ನಡೆಸಿದರು. </p>.<p>ನಗರದಲ್ಲಿ ಆಯೋಗದ ಕಚೇರಿ ಮುಂದೆ ಜಮಾಯಿಸಿದ್ದ ಪ್ರತಿಭಟನಕಾರರು, ‘ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆಯೋಗ ಹಾಗೂ ಅದರ ಅಧ್ಯಕ್ಷರಾದ ಲೀನಾ ಗಂಗೋಪಾಧ್ಯಾಯ ಅವರು ಕಾಣೆಯಾಗಿದ್ದಾರೆ’ ಎಂದು ಆರೋಪಿಸಿದರು. ಲಾಟೀನ್ಗಳನ್ನು ಹಿಡಿದು ಆವರಣದ ಸುತ್ತ, ಅಧ್ಯಕ್ಷರಿಗಾಗಿ ಅಣಕು ಹುಡುಕಾಟ ನಡೆಸಿದರು. </p>.<p>ತಮ್ಮ ವಿರುದ್ಧದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಲೀನಾ ಅವರು ‘ನನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿವೆ. ಘಟನೆ ಕುರಿತು ನಾನು ತಡವಾಗಿ ಪ್ರತಿಕ್ರಿಯೆ ನೀಡಿದೆ ಎಂದು ಏಕೆ ಆರೋಪಿಸುತ್ತಿದ್ದಾರೋ ನನಗೆ ತಿಳಿದಿಲ್ಲ. ಘಟನೆ ಕುರಿತು ತಕ್ಷಣವೇ ಮಾಹಿತಿ ಸಂಗ್ರಹಿಸಿದ್ದೇವೆ’ ಎಂದರು. </p>.<p>‘ಸಂತ್ರಸ್ತೆ ಹಾಗೂ ಆಕೆಯ ಪೋಷಕರನ್ನು ಭೇಟಿಯಾಗುವ ಪ್ರಯತ್ನವನ್ನೂ ಮಾಡಿದ್ದೇವೆ. ಆದರೆ ಸಂತ್ರಸ್ತೆಗೆ ಚಿಕಿತ್ಸೆ ನೀಡುತ್ತಿರುವುದರಿಂದ ಅದು ಸಾಧ್ಯವಾಗಿಲ್ಲ. ಹಿರಿಯ ಅಧಿಕಾರಿಗಳು ಹಾಗೂ ಡಿಜಿಪಿ ಅವರೊಂದಿಗೆ ಪ್ರಾರಂಭದಿಂದಲೂ ಘಟನೆ ಕುರಿತು ಚರ್ಚಿಸಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಇಲ್ಲಿನ ಕಾನೂನು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗವು ಮೌನ ವಹಿಸಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಬೆಂಬಲಿಗರು ಬುಧವಾರ ಪ್ರತಿಭಟನೆ ನಡೆಸಿದರು. </p>.<p>ನಗರದಲ್ಲಿ ಆಯೋಗದ ಕಚೇರಿ ಮುಂದೆ ಜಮಾಯಿಸಿದ್ದ ಪ್ರತಿಭಟನಕಾರರು, ‘ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆಯೋಗ ಹಾಗೂ ಅದರ ಅಧ್ಯಕ್ಷರಾದ ಲೀನಾ ಗಂಗೋಪಾಧ್ಯಾಯ ಅವರು ಕಾಣೆಯಾಗಿದ್ದಾರೆ’ ಎಂದು ಆರೋಪಿಸಿದರು. ಲಾಟೀನ್ಗಳನ್ನು ಹಿಡಿದು ಆವರಣದ ಸುತ್ತ, ಅಧ್ಯಕ್ಷರಿಗಾಗಿ ಅಣಕು ಹುಡುಕಾಟ ನಡೆಸಿದರು. </p>.<p>ತಮ್ಮ ವಿರುದ್ಧದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಲೀನಾ ಅವರು ‘ನನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿವೆ. ಘಟನೆ ಕುರಿತು ನಾನು ತಡವಾಗಿ ಪ್ರತಿಕ್ರಿಯೆ ನೀಡಿದೆ ಎಂದು ಏಕೆ ಆರೋಪಿಸುತ್ತಿದ್ದಾರೋ ನನಗೆ ತಿಳಿದಿಲ್ಲ. ಘಟನೆ ಕುರಿತು ತಕ್ಷಣವೇ ಮಾಹಿತಿ ಸಂಗ್ರಹಿಸಿದ್ದೇವೆ’ ಎಂದರು. </p>.<p>‘ಸಂತ್ರಸ್ತೆ ಹಾಗೂ ಆಕೆಯ ಪೋಷಕರನ್ನು ಭೇಟಿಯಾಗುವ ಪ್ರಯತ್ನವನ್ನೂ ಮಾಡಿದ್ದೇವೆ. ಆದರೆ ಸಂತ್ರಸ್ತೆಗೆ ಚಿಕಿತ್ಸೆ ನೀಡುತ್ತಿರುವುದರಿಂದ ಅದು ಸಾಧ್ಯವಾಗಿಲ್ಲ. ಹಿರಿಯ ಅಧಿಕಾರಿಗಳು ಹಾಗೂ ಡಿಜಿಪಿ ಅವರೊಂದಿಗೆ ಪ್ರಾರಂಭದಿಂದಲೂ ಘಟನೆ ಕುರಿತು ಚರ್ಚಿಸಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>