<p><strong>ಜೈಪುರ:</strong> ರಾಜಸ್ಥಾನದ ಬಿಜೆಪಿ ಶಾಸಕ ಬಾಲಮುಕುಂದ ಆಚಾರ್ಯ ಅವರು ರಾಷ್ಟ್ರಧ್ವಜದಿಂದ ಮುಖ ಒರೆಸಿಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಘಟನೆಯನ್ನು ಖಂಡಿಸಿರುವ ವಿರೋಧ ಪಕ್ಷ ಕಾಂಗ್ರೆಸ್, ಆಚಾರ್ಯ ವಿರುದ್ಧ ಕಿಡಿಕಾರಿದೆ.</p><p>ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ಕೈಗೊಂಡ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಗೌರವಾರ್ಥವಾಗಿ ನಡೆಸುತ್ತಿರುವ 'ತಿರಂಗಾ ಯಾತ್ರೆ' ಸಂದರ್ಭ ಆಚಾರ್ಯ ಅವರು ಮುಖ ಒರೆಸಿಕೊಂಡಿದ್ದಾರೆ.</p><p>ಜೈಪುರದ ಮಾರುಕಟ್ಟೆ, ಐತಿಹಾಸಿಕ ಸ್ಥಳಗಳಲ್ಲಿ ತಿರಂಗಾ ಯಾತ್ರೆ ಸಾಗಿತ್ತು. ಈ ಸಂದರ್ಭದಲ್ಲಿ, ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಶಾಸಕ ಆಚಾರ್ಯ ಅವರು ಬಾವುಟದಿಂದ ಮುಖ ಒರೆಸಿಕೊಳ್ಳುತ್ತಿರುವುದು ವಿಡಿಯೊಗಳಲ್ಲಿ ದಾಖಲಾಗಿದೆ.</p><p>ಇದನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕರು, ಬಿಜೆಪಿಯು ದೇಶಭಕ್ತಿಯನ್ನು ರಾಜಕೀಯಗೊಳಿಸುತ್ತಿದ್ದು, ರಾಷ್ಟ್ರಧ್ವಜಕ್ಕೆ ಸಂಪೂರ್ಣ ಅಗೌರವ ತೋರಿದೆ ಎಂದು ಕಿಡಿಕಾರಿದ್ದಾರೆ.</p>.ರಕ್ಷಣಾ ಕಾರ್ಯದರ್ಶಿಗೆ ಇಸ್ರೇಲ್ ಸೇನಾ ಡಿಜಿ ಕರೆ: Operation Sindoorಗೆ ಶ್ಲಾಘನೆ.ಪಹಲ್ಗಾಮ್ ದಾಳಿ | ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ ₹10 ಲಕ್ಷ ಬಹುಮಾನ: ಶಿವಸೇನಾ.<p>'ಸೇನೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸುವ ಉದ್ದೇಶದಿಂದ ನಡೆದ ರ್ಯಾಲಿಯಲ್ಲಿ ಈ ರೀತಿ ನಡೆದುಕೊಂಡಿರುವುದು ಸಂವೇದನಾರಹಿತ ನಡೆ, ಅಗೌರವದ ಸಂಗತಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಈ ಕುರಿತು ಬಿಜೆಪಿ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನದ ಬಿಜೆಪಿ ಶಾಸಕ ಬಾಲಮುಕುಂದ ಆಚಾರ್ಯ ಅವರು ರಾಷ್ಟ್ರಧ್ವಜದಿಂದ ಮುಖ ಒರೆಸಿಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಘಟನೆಯನ್ನು ಖಂಡಿಸಿರುವ ವಿರೋಧ ಪಕ್ಷ ಕಾಂಗ್ರೆಸ್, ಆಚಾರ್ಯ ವಿರುದ್ಧ ಕಿಡಿಕಾರಿದೆ.</p><p>ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ಕೈಗೊಂಡ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಗೌರವಾರ್ಥವಾಗಿ ನಡೆಸುತ್ತಿರುವ 'ತಿರಂಗಾ ಯಾತ್ರೆ' ಸಂದರ್ಭ ಆಚಾರ್ಯ ಅವರು ಮುಖ ಒರೆಸಿಕೊಂಡಿದ್ದಾರೆ.</p><p>ಜೈಪುರದ ಮಾರುಕಟ್ಟೆ, ಐತಿಹಾಸಿಕ ಸ್ಥಳಗಳಲ್ಲಿ ತಿರಂಗಾ ಯಾತ್ರೆ ಸಾಗಿತ್ತು. ಈ ಸಂದರ್ಭದಲ್ಲಿ, ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಶಾಸಕ ಆಚಾರ್ಯ ಅವರು ಬಾವುಟದಿಂದ ಮುಖ ಒರೆಸಿಕೊಳ್ಳುತ್ತಿರುವುದು ವಿಡಿಯೊಗಳಲ್ಲಿ ದಾಖಲಾಗಿದೆ.</p><p>ಇದನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕರು, ಬಿಜೆಪಿಯು ದೇಶಭಕ್ತಿಯನ್ನು ರಾಜಕೀಯಗೊಳಿಸುತ್ತಿದ್ದು, ರಾಷ್ಟ್ರಧ್ವಜಕ್ಕೆ ಸಂಪೂರ್ಣ ಅಗೌರವ ತೋರಿದೆ ಎಂದು ಕಿಡಿಕಾರಿದ್ದಾರೆ.</p>.ರಕ್ಷಣಾ ಕಾರ್ಯದರ್ಶಿಗೆ ಇಸ್ರೇಲ್ ಸೇನಾ ಡಿಜಿ ಕರೆ: Operation Sindoorಗೆ ಶ್ಲಾಘನೆ.ಪಹಲ್ಗಾಮ್ ದಾಳಿ | ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ ₹10 ಲಕ್ಷ ಬಹುಮಾನ: ಶಿವಸೇನಾ.<p>'ಸೇನೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸುವ ಉದ್ದೇಶದಿಂದ ನಡೆದ ರ್ಯಾಲಿಯಲ್ಲಿ ಈ ರೀತಿ ನಡೆದುಕೊಂಡಿರುವುದು ಸಂವೇದನಾರಹಿತ ನಡೆ, ಅಗೌರವದ ಸಂಗತಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಈ ಕುರಿತು ಬಿಜೆಪಿ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>