<p><strong>ಮುಂಬೈ:</strong> ಬಿಜೆಪಿಯ ಹಿಂದುತ್ವ ನಿಜವಾದ ಹಿಂದುತ್ವವಲ್ಲ. ಯಾಕೆಂದರೆ ಹಿಂದುತ್ವವು ಸಮಾಜದಲ್ಲಿ ಬಿರುಕನ್ನು ಮೂಡಿಸುವುದಿಲ್ಲ. ನಿಜವಾದ ಹಿಂದುತ್ವ ಎಲ್ಲರನ್ನು ಒಗ್ಗೂಡಿಸುತ್ತದೆ ಎಂದು ಶಿವಸೇನಾ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ.</p>.<p>ಉತ್ತರ ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದುತ್ವ ಚಳವಳಿಗೆ ತಮ್ಮ ದಿವಂಗತ ತಂದೆ ಬಾಳಾಸಾಹೇಬ್ ಠಾಕ್ರೆ ಅವರ ಕೊಡುಗೆಯನ್ನು ಸ್ಮರಿಸಿದರು.</p>.<p>'ನಾವು ಹಿಂದೂ ಎಂದು ಗರ್ವದಿಂದ ಹೇಳಿ' ಇವರಿಗೆ (ಬಿಜೆಪಿ) ಧೈರ್ಯವಿದೆ ಎಂದು ಭಾವಿಸುವೀರಾ ಎಂದು ಪ್ರಶ್ನಿಸಿದರು.</p>.<p>ಇದನ್ನೂ ಓದಿ: <a href="https://www.prajavani.net/india-news/j-k-wanted-employment-love-but-got-bjps-bulldozer-rahul-1014674.html" itemprop="url">ಜಮ್ಮು-ಕಾಶ್ಮೀರಕ್ಕೆ ಬುಲ್ಡೋಜರ್ ಬೇಡ, ಉದ್ಯೋಗ ಬೇಕು: ರಾಹುಲ್ </a></p>.<p>ಮುಂಬೈಯಲ್ಲಿ ದಾವೂದಿ ಬೋಹ್ರಾ ಸಮುದಾಯದ ಸಂಸ್ಥೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಉಲ್ಲೇಖ ಮಾಡಿರುವ ಅವರು, ನಾನು ಹಿಂದುತ್ವ ತೊರೆಯುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸಿದೆ. ಇನ್ನೊಂದು ದಿನ ಬೋಹ್ರಾ ಕಾರ್ಯಕ್ರಮದಲ್ಲಿ ಪ್ರಧಾನಿ ಅವರೇ ಭಾಗವಹಿಸಿದರು. ಅದೇ ನಾನು ಅಲ್ಲಿಗೆ ಹೋಗಿ ಅಂತಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರೆ ಹಿಂದುತ್ವ ತೊರೆಯುತ್ತಿದ್ದೇನೆ ಎಂದು ಆರೋಪಿಸುತ್ತಿದ್ದರು ಎಂದು ತಿರುಗೇಟು ನೀಡಿದರು.</p>.<p>1992–93ರಲ್ಲಿ ಮುಂಬೈನಲ್ಲಿ ನಡೆದ ಕೋಮುಗಲಭೆ ಮತ್ತು ಕೋವಿಡ್ ಸಾಂಕ್ರಾಮಿಕದ ಕಠಿಣ ಸಮಯದಲ್ಲಿ ಪಕ್ಷವು ಜನರ ಸಂಕಷ್ಟಕ್ಕೆ ನೆರವಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಿಜೆಪಿಯ ಹಿಂದುತ್ವ ನಿಜವಾದ ಹಿಂದುತ್ವವಲ್ಲ. ಯಾಕೆಂದರೆ ಹಿಂದುತ್ವವು ಸಮಾಜದಲ್ಲಿ ಬಿರುಕನ್ನು ಮೂಡಿಸುವುದಿಲ್ಲ. ನಿಜವಾದ ಹಿಂದುತ್ವ ಎಲ್ಲರನ್ನು ಒಗ್ಗೂಡಿಸುತ್ತದೆ ಎಂದು ಶಿವಸೇನಾ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ.</p>.<p>ಉತ್ತರ ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದುತ್ವ ಚಳವಳಿಗೆ ತಮ್ಮ ದಿವಂಗತ ತಂದೆ ಬಾಳಾಸಾಹೇಬ್ ಠಾಕ್ರೆ ಅವರ ಕೊಡುಗೆಯನ್ನು ಸ್ಮರಿಸಿದರು.</p>.<p>'ನಾವು ಹಿಂದೂ ಎಂದು ಗರ್ವದಿಂದ ಹೇಳಿ' ಇವರಿಗೆ (ಬಿಜೆಪಿ) ಧೈರ್ಯವಿದೆ ಎಂದು ಭಾವಿಸುವೀರಾ ಎಂದು ಪ್ರಶ್ನಿಸಿದರು.</p>.<p>ಇದನ್ನೂ ಓದಿ: <a href="https://www.prajavani.net/india-news/j-k-wanted-employment-love-but-got-bjps-bulldozer-rahul-1014674.html" itemprop="url">ಜಮ್ಮು-ಕಾಶ್ಮೀರಕ್ಕೆ ಬುಲ್ಡೋಜರ್ ಬೇಡ, ಉದ್ಯೋಗ ಬೇಕು: ರಾಹುಲ್ </a></p>.<p>ಮುಂಬೈಯಲ್ಲಿ ದಾವೂದಿ ಬೋಹ್ರಾ ಸಮುದಾಯದ ಸಂಸ್ಥೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಉಲ್ಲೇಖ ಮಾಡಿರುವ ಅವರು, ನಾನು ಹಿಂದುತ್ವ ತೊರೆಯುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸಿದೆ. ಇನ್ನೊಂದು ದಿನ ಬೋಹ್ರಾ ಕಾರ್ಯಕ್ರಮದಲ್ಲಿ ಪ್ರಧಾನಿ ಅವರೇ ಭಾಗವಹಿಸಿದರು. ಅದೇ ನಾನು ಅಲ್ಲಿಗೆ ಹೋಗಿ ಅಂತಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರೆ ಹಿಂದುತ್ವ ತೊರೆಯುತ್ತಿದ್ದೇನೆ ಎಂದು ಆರೋಪಿಸುತ್ತಿದ್ದರು ಎಂದು ತಿರುಗೇಟು ನೀಡಿದರು.</p>.<p>1992–93ರಲ್ಲಿ ಮುಂಬೈನಲ್ಲಿ ನಡೆದ ಕೋಮುಗಲಭೆ ಮತ್ತು ಕೋವಿಡ್ ಸಾಂಕ್ರಾಮಿಕದ ಕಠಿಣ ಸಮಯದಲ್ಲಿ ಪಕ್ಷವು ಜನರ ಸಂಕಷ್ಟಕ್ಕೆ ನೆರವಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>