ಡೊಮ್ಡೊಮಾ: ಬಾಲರಾಮ ಪ್ರಾಣ ಪ್ರತಿಷ್ಠಾಪನೆಯು ಬಿಜೆಪಿಯ ರಾಜಕೀಯ ಸಮಾರಂಭವಾಗಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಅಲ್ಲದೆ ಅದು ಯಾವುದೇ ಅಲೆಯನ್ನು ಸೃಷ್ಟಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಬಾಲ ರಾಮ ಪ್ರತಿಷ್ಠಾಪನೆಯಿಂದ ಸೃಷ್ಟಿಯಾಗಿರುವ ಅಲೆಗೆ ಹೇಗೆ ಪ್ರತ್ಯುತ್ತರ ನೀಡುತ್ತೀರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ಹಾಗೇನೂ ಆಗಿಲ್ಲ. ಯಾವ ಅಲೆಯೂ ಇಲ್ಲ. ಇದು ಬಿಜೆಪಿಯ ರಾಜಕೀಯ ಕಾರ್ಯಕ್ರಮ ಎಂದು ನಾನು ಮೊದಲೇ ಹೇಳಿದ್ದೆ. ನರೇಂದ್ರ ಮೋದಿ ಅಲ್ಲಿ ಒಂದು ಕಾರ್ಯಕ್ರಮ ಮಾಡಿದ್ದಾರೆ ಅಷ್ಟೇ’ ಎಂದು ರಾಹುಲ್ ಹೇಳಿದ್ದಾರೆ.