ವೆಂಕಟರಮಣ ರೆಡ್ಡಿ ಅವರು ಕೆಸಿಆರ್ ಅವರಿಗಿಂತ 6,741 ಹೆಚ್ಚು ಮತಗಳನ್ನು ಪಡೆದು, ಗೆಲುವಿನ ನಗೆ ಬೀರಿದ್ದಾರೆ. ‘ಈ ಕ್ಷೇತ್ರದಲ್ಲಿ ದೊಡ್ಡ ನಾಯಕರು ಸ್ಪರ್ಧಿಸಿದ್ದರಿಂದ ಕ್ಷೇತ್ರವು ಹೆಚ್ಚಿನ ಗಮನ ಸೆಳೆದಿತ್ತು. ಕೆಸಿಆರ್ ಮತ್ತು ರೇವಂತ್ ರೆಡ್ಡಿ ವಿರುದ್ಧ ಗೆಲುವು ಸಾಧಿಸುವ ಅದೃಷ್ಟ ನನ್ನದಾಗಿತ್ತು’ ಎಂದು ವೆಂಕಟರಮಣ ರೆಡ್ಡಿ ಹೇಳಿದ್ದಾರೆ.