ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಾರೆಡ್ಡಿಯಲ್ಲಿ ಕೆಸಿಆರ್‌ಗೆ ಸೋಲು:ಇಬ್ಬರು ಸಿಎಂ ಅಭ್ಯರ್ಥಿಗಳನ್ನು ಸೋಲಿಸಿದ BJP

Published 3 ಡಿಸೆಂಬರ್ 2023, 15:44 IST
Last Updated 3 ಡಿಸೆಂಬರ್ 2023, 15:44 IST
ಅಕ್ಷರ ಗಾತ್ರ

ಹೈದರಾಬಾದ್: ಕಾಮಾರೆಡ್ಡಿ ಕ್ಷೇತ್ರದಲ್ಲಿ ಬಿಜೆಪಿಯ ಕೆ. ವೆಂಕಟರಮಣ ರೆಡ್ಡಿ ಅವರು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ.

ವೆಂಕಟರಮಣ ರೆಡ್ಡಿ ಅವರು ಕೆಸಿಆರ್‌ ಅವರಿಗಿಂತ 6,741 ಹೆಚ್ಚು ಮತಗಳನ್ನು ಪಡೆದು, ಗೆಲುವಿನ ನಗೆ ಬೀರಿದ್ದಾರೆ. ‘ಈ ಕ್ಷೇತ್ರದಲ್ಲಿ ದೊಡ್ಡ ನಾಯಕರು ಸ್ಪರ್ಧಿಸಿದ್ದರಿಂದ ಕ್ಷೇತ್ರವು ಹೆಚ್ಚಿನ ಗಮನ ಸೆಳೆದಿತ್ತು. ಕೆಸಿಆರ್‌ ಮತ್ತು ರೇವಂತ್ ರೆಡ್ಡಿ ವಿರುದ್ಧ ಗೆಲುವು ಸಾಧಿಸುವ ಅದೃಷ್ಟ ನನ್ನದಾಗಿತ್ತು’ ಎಂದು ವೆಂಕಟರಮಣ ರೆಡ್ಡಿ ಹೇಳಿದ್ದಾರೆ.

‘ಹಣ ಮತ್ತು ಹೆಂಡ ಇರದಿದ್ದರೂ ಜನ ಮತ ನೀಡುತ್ತಾರೆ. ಜನರು ಭ್ರಷ್ಟರಲ್ಲ, ನಾಯಕರು ಭ್ರಷ್ಟರು ಎಂಬುದು ನನ್ನ ನಂಬಿಕೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT